ಆಂಧ್ರದಲ್ಲಿ ಕರ್ನಾಟಕದಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ

Date:

ಆಂಧ್ರ ಪ್ರದೇಶ ಸರ್ಕಾರವು ಕರ್ನಾಟಕದಲ್ಲಿರುವ ಶಕ್ತಿ ಯೋಜನೆಯಂತೆ ಮಹಿಳೆಯರಿಗಾಗಿ ಬಹುನಿರೀಕ್ಷಿತ ಉಚಿತ ಬಸ್‌ ಒದಗಿಸುವ ‘ಸ್ತ್ರೀ ಶಕ್ತಿ’ ಯೋಜನೆಯನ್ನು ಇಂದಿನಿಂದ (ಆ.15) ಅಧಿಕೃತವಾಗಿ ಆರಂಭಿಸಿದೆ. ಈ ಯೋಜನೆಯಡಿ, ರಾಜ್ಯದಾದ್ಯಂತ ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಗುತ್ತಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಸಚಿವ ನಾರಾ ಲೋಕೇಶ್ ಅವರು ಗುಂಟೂರು ಜಿಲ್ಲೆಯ ತಾಡೇಪಳ್ಳಿಯಿಂದ ವಿಜಯವಾಡದ ಪಂಡಿತ ನೆಹರು ಬಸ್ ನಿಲ್ದಾಣದವರೆಗೆ ಮಹಿಳೆಯರೊಂದಿಗೆ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು.

ಉಂಡವಲ್ಲಿ ಗುಹೆಗಳಿಂದ ಪ್ರಯಾಣ ಆರಂಭಿಸಿ, ತಾಡೇಪಳ್ಳಿ ಪ್ಯಾಲೆಸ್, ಕನಕದುರ್ಗ ವಾದ್ರಿ ಮಾರ್ಗವಾಗಿ ವಿಜಯವಾಡಕ್ಕೆ ತಲುಪಿದರು. ಈ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ಮತ್ತು ಇತರ ಗಣ್ಯರು ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರೊಂದಿಗೆ ಸಂವಾದ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

‘ಸ್ತ್ರೀ ಶಕ್ತಿ’ ಯೋಜನೆಯಡಿ, ರಾಜ್ಯದಾದ್ಯಂತ ಸಾಮಾನ್ಯ ಬಸ್‌ಗಳು, ಸಿಟಿ ಆರ್ಡಿನರಿ, ಅಲ್ಟ್ರಾ, ಮೆಟ್ರೊ ಎಕ್ಸ್‌ಪ್ರೆಸ್ ಮತ್ತು ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಕರ್ಯವನ್ನು ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಮಹಿಳೆಯರು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ, ನಿರ್ವಾಹಕರಿಂದ ಶೂನ್ಯ ಶುಲ್ಕದ ಟಿಕೆಟ್ ಪಡೆಯಬಹುದು.

ಈ ಯೋಜನೆಯ ಫಲಾನುಭವಿಗಳಾಗಿ ಬಾಲಕಿಯರು, ವಿದ್ಯಾರ್ಥಿನಿಯರು, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದು. ಈ ಯೋಜನೆಯಿಂದ ಸುಮಾರು 2.62 ಕೋಟಿ ಮಹಿಳೆಯರು ಲಾಭ ಪಡೆಯುವ ನಿರೀಕ್ಷೆಯಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕವಾಗಿ ₹1,942 ಕೋಟಿಗಳ ಹೆಚ್ಚುವರಿ ಆರ್ಥಿಕ ಭಾರ ಬೀಳಲಿದೆ.

ಈ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸಾರಿಗೆ ಸೌಲಭ್ಯವನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಂಚರಿಸುವ ಮಹಿಳೆಯರಿಗೆ ಈ ಉಚಿತ ಸೇವೆಯು ಸಾರ್ವಜನಿಕ ಸಾರಿಗೆಯನ್ನು ಒದಗಿಸುವ ಮೂಲಕ ಅವರ ದೈನಂದಿನ ಜೀವನವನ್ನು ಸುಲಭಗೊಳಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...