ಚಂದ್ರಯಾನ 3 ದಿನಾಂಕ ಘೋಷಿಸಿದ ಇಸ್ರೋ

Date:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಬಹು ನಿರೀಕ್ಷಿತ ಚಂದ್ರಯಾನ-3ರ ಉಡಾವಣೆ ದಿನಾಂಕವನ್ನು ನಿಗದಿಪಡಿಸಿದ್ದು, ಜುಲೈ 13 ರಂದು ಸ್ಥಳೀಯ ಕಾಲಮಾನ ಮಧ್ಯಾಹ್ನ 2.30 ಕ್ಕೆ ರಾಕೆಟ್‌ ಉಡಾವಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂದ್ರಯಾನ-3 ಅನ್ನು ಜುಲೈ 13 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಿಷನ್ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ-ಲಿಫ್ಟ್ ಲಾಂಚ್ ವೆಹಿಕಲ್ ಬಳಸಿ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆಗೆ 615 ಕೋಟಿ ರೂ. ಬಜೆಟ್‌ ನಿಗದಿಪಡಿಸಲಾಗಿದೆ.

ಅಪಾಯಗಳನ್ನು ತಗ್ಗಿಸಲು ಮತ್ತು ಯಶಸ್ವಿ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಚಂದ್ರಯಾನ-3 ಕಠಿಣ ಪರೀಕ್ಷೆ ಮತ್ತು ಮೌಲ್ಯೀಕರಣ ಪ್ರಕ್ರಿಯೆಗಳಿಗೆ ಒಳಗಾಗಿಸಲಾಗಿದೆ. ಅಲ್ಲದೆ ಹಿಂದಿನ ಹಲವು ವೈಫಲ್ಯಗಳಿಂದ ಹಲವು ಬದಲಾವಣೆ ಮಾಡಿಕೊಂಡಿದ್ದು, ಚಂದ್ರನ ಪೇಲೋಡ್ ಕಾನ್ಫಿಗರೇಶನ್ ಸೇರಿದಂತೆ ಮಿಷನ್ ವಿನ್ಯಾಸವನ್ನು ಮತ್ತಷ್ಟು ಉತ್ತಮಪಡಿಸಲಾಗಿದೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ಪ್ಯಾನರ್‌ ಹಿಡಿದು ಮೆಕ್ಯಾನಿಕ್‌ಗಳೊಂದಿಗೆ ಬೈಕ್‌ ರಿಪೇರಿ ಮಾಡಿದ ರಾಹುಲ್ ಗಾಂಧಿ

ಚಂದ್ರಯಾನ-3 ಯಶಸ್ಸಿನ ಬಗ್ಗೆ ಇಸ್ರೋ ಅಧಿಕಾರಿಗಳು ಆಶಾವಾದಿಯಾಗಿದ್ದಾರೆ. ಚಂದ್ರಯಾನ-3 ಮಿಷನ್‌ಗಾಗಿ ಇಸ್ರೋ ಮೂರು ಪ್ರಾಥಮಿಕ ಉದ್ದೇಶಗಳನ್ನು ವಿವರಿಸಿದೆ. ಚಂದ್ರನ ಮೇಲೆ ಸುರಕ್ಷಿತ ಮತ್ತು ಸರಳವಾಗಿ ಕಕ್ಷೆ ಸೇರಲು, ಚಂದ್ರನ ಮೇಲ್ಮೈಯಲ್ಲಿ ರೋವರ್‌ನ ಅಡ್ಡಾದಿಡ್ಡಿ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಮತ್ತು ಸ್ಥಳದಲ್ಲಿ ವೈಜ್ಞಾನಿಕ ವೀಕ್ಷಣೆಗಳನ್ನು ನಡೆಸುವುದು. ಚಂದ್ರನ ಸಂಯೋಜನೆಯ ತಿಳುವಳಿಕೆಯನ್ನು ಸುಧಾರಿಸಲು ಚಂದ್ರನ ಮೇಲ್ಮೈಯಲ್ಲಿ ಲಭ್ಯವಿರುವ ರಾಸಾಯನಿಕ ಮತ್ತು ನೈಸರ್ಗಿಕ ಅಂಶಗಳು, ಮಣ್ಣು ಮತ್ತು ನೀರನ್ನು ಅನ್ವೇಷಿಸಲು ಮಿಷನ್ ಗುರಿಯನ್ನು ಹೊಂದಿದೆ.

ಈ ಮಿಷನ್ ಭಾರತಕ್ಕೆ ಮಾತ್ರವಲ್ಲದೆ ಜಾಗತಿಕ ವೈಜ್ಞಾನಿಕ ಸಮುದಾಯಕ್ಕೂ ಮಹತ್ವದ್ದಾಗಿದೆ. ಇದು ಹಿಂದಿನ ಕಾರ್ಯಾಚರಣೆಗಳಿಂದ ಪಡೆದ ಜ್ಞಾನವನ್ನು ಹೆಚ್ದೆಚಿಸುತ್ತದೆ ಮತ್ತು ಭವಿಷ್ಯದ ಚಂದ್ರ ಮತ್ತು ಅಂತರಗ್ರಹ ಪರಿಶೋಧನೆಗಳಿಗೆ ಅಗತ್ಯವಿರುವ ಸಾಮರ್ಥ್ಯಗಳನ್ನು ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...