ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

Date:

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹೇಳಿದ್ದು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ನ್ಯಾಯಾಧೀಶರಿಂದ ಅಲ್ಪಸಂಖ್ಯಾತ ಸಮುದಾಯವು ಹೇಗೆ ನ್ಯಾಯವನ್ನು ನಿರೀಕ್ಷಿಸುವುದು” ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಭಾನುವಾರ ಪ್ರಯಾಗರಾಜ್‌ನಲ್ಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ ಕುರಿತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್‌ನ ಕಾನೂನು ಘಟಕ ಆಯೋಜಿಸಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು | ಅಕ್ರಮ ವಾಸ; ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಹಿಂದೂಸ್ತಾನ, ಈ ದೇಶವು ಹಿಂದೂಸ್ತಾನದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಇದು ಕಾನೂನು. ಹೈಕೋರ್ಟ್ ನ್ಯಾಯಾಧೀಶರಾಗಿ ನೀವು ಹೀಗೆ ಹೇಳುತ್ತಿದ್ದೀರಾ ಎಂದು ನೀವು ಹೇಳುವಂತಿಲ್ಲ” ಎಂದು ಹೇಳಿದರು.

“ನಮ್ಮ ಕಾನೂನು ಬಹುಸಂಖ್ಯಾತರ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುದನ್ನು ಕುಟುಂಬ ಮತ್ತು ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೆಯೋ ಅದನ್ನು ಮಾತ್ರ ಒಪ್ಪಿಕೊಳ್ಳಲಾಗುತ್ತದೆ” ಎಂದು ತನ್ನ ಉಪನ್ಯಾಸದಲ್ಲಿ ತಿಳಿಸಿದರು.

ನ್ಯಾಯಾಧೀಶರಿಗೆ ನೆಟ್ಟಿಗರ ತರಾಟೆ

ನ್ಯಾಯಾಧೀಶರ ಹೇಳಿಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ನ್ಯಾಯಾಧೀಶನ ವಿರುದ್ಧವಾಗಿ ಬಾರ್‌ ಬೆಂಚ್ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. “ಪ್ರಜಾಪ್ರಭುತ್ವ ದೇಶದಲ್ಲಿ ಇಂತಹ ನ್ಯಾಯಾಧೀಶರ ವಕೀಲಿ ಪರವಾನಗಿಯನ್ನು ರದ್ದು ಮಾಡಬೇಕು” ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ನ್ಯಾಯಾಧೀಶರ ಹೇಳಿಕೆಯನ್ನು ಟೀಕಿಸಿದ ಹೈದರಾಬಾದ್ ಸಂಸದ ಓವೈಸಿ, “ಭಾರತದ ಸಂವಿಧಾನವು ತನ್ನ ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ” ಎಂದು ಹೇಳಿದರು.

“ವಿಎಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿದೆ. ಇದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದೆ. ಅಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಭಾಗವಹಿಸಿದ್ದು ದುರದೃಷ್ಟಕರ. ನ್ಯಾಯಾಧೀಶರಿಗೆ ಸಂವಿಧಾನವು ನ್ಯಾಯಾಂಗವು ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ ಎಂದು ನೆನೆಪಿಸುವುದು ಮುಖ್ಯವಾಗಿದೆ” ಎಂದು ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...