ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನನ್ನು ಅಮಾನತುಗೊಳಿಸಿದ ಬಾರ್ ಕೌನ್ಸಿಲ್

Date:

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ನಡೆಯುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣದಲ್ಲಿ ವಕೀಲ ರಾಕೇಶ್ ಕಿಶೋರ್ ನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅಮಾನತುಗೊಳಿಸಿದೆ.

ನೂತನ ಆದೇಶದ ಅನ್ವಯ ಇನ್ಮುಂದೆ ಕಿಶೋರ್ ಗೆ ದೇಶದ ಯಾವುದೇ ನ್ಯಾಯಾಲಯದಲ್ಲಿ ವಕಾಲತ್ತು ಮಾಡುವುದಕ್ಕೆ ಅಥವಾ ವಾದಿಸಲು ಅವಕಾಶವಿರುವುದಿಲ್ಲ.

71 ವರ್ಷದ ಕಿಶೋರ್, ದೆಹಲಿಯ ಮಯೂರ್ ವಿಹಾರ್ ನಿವಾಸಿಯಾಗಿದ್ದು, ಸೋಮವಾರ ಬೆಳಿಗ್ಗೆ 11.35 ರ ಸಮಯದಲ್ಲಿ ನ್ಯಾಯಾಲಯ ಸಂಖ್ಯೆ 1 ರಲ್ಲಿ ನಡೆಯುತ್ತಿದ್ದ ವಿಚಾರಣೆಯ ವೇಳೆ ತನ್ನ ಶೂ ಗಳನ್ನು ಸಿಜೆಐ ಪೀಠದ ಕಡೆ ಎಸೆಯಲು ಯತ್ನಿಸಿದ್ದ. ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಹಿಡಿದು ಹೊರಗೆ ಕರೆದುಕೊಂಡು ಹೋದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಪ್ರಕಟಿಸಿದ ಮಧ್ಯಂತರ ಆದೇಶದಲ್ಲಿ, ಈ ಕೃತ್ಯವು “ನ್ಯಾಯಾಲಯದ ಘನತೆಗೆ ವಿರುದ್ಧವಾದದ್ದು” ಮತ್ತು “ವೃತ್ತಿಪರ ನೀತಿಶಾಸ್ತ್ರದ ಉಲ್ಲಂಘನೆ” ಎಂದು ಉಲ್ಲೇಖಿಸಲಾಗಿದೆ. ಆದೇಶದಲ್ಲಿ, ಕಿಶೋರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು 15 ದಿನಗಳಲ್ಲಿ ಸ್ಪಷ್ಟನೆ ನೀಡಲು ನೋಟಿಸ್ ನೀಡಲಾಗಿದೆ.

ದೆಹಲಿಯ ಬಾರ್ ಕೌನ್ಸಿಲ್ ಈ ಆದೇಶವನ್ನು ಎಲ್ಲ ನ್ಯಾಯಾಲಯಗಳಿಗೆ ತಿಳಿಸಿ ಅದನ್ನು ಕಟ್ಟು ನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಲು ಸೂಚಿಸಲಾಗಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಗಳು ಮತ್ತು ಜಿಲ್ಲಾ ನ್ಯಾಯಾಲಯಗಳು ಈ ಆದೇಶದ ಪ್ರತಿಗಳನ್ನು ಸಂಬಂಧಿತ ಬಾರ್ ಅಸೋಸಿಯೇಷನ್‌ ಗಳಿಗೆ ಹಂಚಲಿವೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...