‘ದೇಶ ತೊರೆಯಲು ಇದು ಸಕಾಲ’ – ಅಧಿಕ ವೇತನ ಪಡೆಯುವ ಭಾರತೀಯರಿಗೆ ಸ್ಟಾರ್ಟ್‌ಅಪ್ ಸಿಇಒ ಸಲಹೆ!

Date:

ವಾಣಿಜ್ಯೋದ್ಯಮಿ ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕರೊಬ್ಬರು “ದೇಶದಲ್ಲಿ ಅಧಿಕ ವೇತನ ಇರುವವರು ದೇಶ ತೊರೆಯಲು ಇದು ಸಕಾಲ” ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ರೆಡಿಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸಬ್‌ರೆಡಿಟ್ ಆರ್/ಇಂಡಿಯಾದಲ್ಲಿ ಬಳಕೆದಾರರು ತಾವು ದೇಶದ ಪ್ರಮುಖ ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಯುಎಸ್‌ಎನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವುದಾಗಿ ಹೇಳಿದ್ದಾರೆ. ಹಾಗೆಯೇ ಬ್ಯಾಂಕ್‌ಗಳಲ್ಲಿ ಉದ್ಯೋಗ ಮಾಡಿದ್ದು ಸ್ವಂತ ಕಂಪನಿಯನ್ನು ಪ್ರಾರಂಭಿಸಲು 2018 ರಲ್ಲಿ ಭಾರತಕ್ಕೆ ಮರಳಿರುವವರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಭಾರತದ 82 ಸ್ಟಾರ್ಟ್‌ಅಪ್‌ಗಳಲ್ಲಿ ಉದ್ಯೋಗ ಕಳೆದುಕೊಂಡ 23 ಸಾವಿರ ಟೆಕ್ಕಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 30 ಜನರಿಗೆ ಸರಾಸರಿ 15 ಲಕ್ಷ ರೂಪಾಯಿ ವೇತನ ಪಾವತಿಸುತ್ತಿರುವುದಾಗಿ ಹೇಳಿರುವ ಸ್ಟಾರ್ಟ್‌ಅಪ್ ಒಂದರ ಸಂಸ್ಥಾಪಕ, “ದೇಶವನ್ನು ತೊರೆಯಿರಿ, ಇದು ಉತ್ತಮ ಸಮಯ! ಉತ್ತಮ ಆದಾಯದ ಉದ್ಯಮ ನಡೆಸುತ್ತಿರುವವನಾಗಿ ನಾನು ನಿಮಗೆ ಈ ಸಲಹೆ ನೀಡುತ್ತಿದ್ದೇನೆ” ಎಂದು ಸುದೀರ್ಘ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ದೇಶ ತೊರೆಯಲು ಸಲಹೆ ನೀಡಲು ತನಗೆ ಪ್ರೇರಣೆ ನೀಡಿದ ಹಲವು ಕಾರಣಗಳನ್ನೂ ಕೂಡಾ ವಿವರಿಸಿದ್ದಾರೆ. “ಭಾರತದಲ್ಲಿ ‘ಮೂರ್ಖ’ ನಿಯಮಗಳಿಂದಾಗಿ ನಾವೀನ್ಯತೆ ಎಂಬುದರ ಕೊಲೆಯಾಗಿದೆ” ಎಂದು ಆರೋಪಿಸಿದ್ದಾರೆ.

“ಭಾರತದಲ್ಲಿ ನೀವು ಯಾವುದೇ ಕೆಲಸವನ್ನು ಮಾಡಬೇಕಾದರೂ ಕೂಡಾ ನೀವು ಅಧಿಕಾರಶಾಹಿ, ರಾಜಕಾರಣಿ ಅಥವಾ ಸೆಲೆಬ್ರೆಟಿ ಆಗಿರಬೇಕು. ಅದಕ್ಕಾಗಿ ನಾನು ನಿಮಗೆ ಒಂದು ಉದಾಹರಣೆಯನ್ನು ನೀಡುತ್ತೇನೆ. ನಮ್ಮ ಅಪ್ಲಿಕೇಶನ್‌ನಲ್ಲಿ ಒಂದು ವಂಚನೆ ಪ್ರಕರಣ ನಡೆದಿದೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ. ನಾವು ಪ್ರಕರಣವನ್ನು ಪರಿಹರಿಸಿದೆವು. ಪೊಲೀಸರಿಗೆ ಸಹಾಯ ಮಾಡಿದೆವು. ಇದರಿಂದಾಗಿ ಸಂತ್ರಸ್ತರಿಗೆ ಹಣವು ವಾಪಸ್ ಲಭಿಸಿದೆ. ಆದರೆ ನಮ್ಮ ಮೇಲೆಯೇ ಆರೋಪ ಮಾಡಲಾಗಿದೆ. ಪೊಲೀಸರು ಈ ಪ್ರಕರಣವನ್ನು ಕ್ಲೋಸ್ ಮಾಡಿಲ್ಲ. ನಮ್ಮಿಂದಲೇ ಹಣವನ್ನು ಪೊಲೀಸರು ಬಯಸುತ್ತಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸಿವಿಲ್ ಕೋಡ್ | ‘ಏಕರೂಪ’ದಿಂದ ‘ಜಾತ್ಯತೀತ’ಕ್ಕೆ ಬದಲಾದ ಬಿಜೆಪಿ; ಸಮಾಲೋಚನೆಗೆ ಎನ್‌ಡಿಎ ಕರೆ

ಹಾಗೆಯೇ ದೇಶದಲ್ಲಿರುವ ಪ್ರಾದೇಶಿಕ ಭಿನ್ನಾಭಿಪ್ರಾಯದ ಸಮಸ್ಯೆಯನ್ನು ಕೂಡಾ ಬೊಟ್ಟುಮಾಡಿದ್ದಾರೆ. ತರಕಾರಿ ವ್ಯಾಪಾರಿಗಳು, ಆಟೋ ಚಾಲಕರು, ಕ್ಯಾಬ್ ಚಾಲಕರು ಮೊದಲಾದವರು ದೇಶದಲ್ಲಿ ನಿರಂತರವಾಗಿ ಈ ‘ಪ್ರಾದೇಶಿಕ ದ್ವೇಷ’ಕ್ಕೆ ಒಳಗಾಗುತ್ತಾರೆ ಎಂದು ಹೇಳಿದ್ದಾರೆ. “ನೀವು ಶ್ರೀಮಂತರಾಗಿ ಕಾಣದಿದ್ದರೆ ಅಥವಾ ಬ್ರ್ಯಾಂಡೆಡ್ ತೊಡುಗೆಯಲ್ಲಿ ಇಲ್ಲದಿದ್ದರೆ, ನೀವು ಈ ದೇಶದಲ್ಲಿ ಹೊಲಸು ವ್ಯಕ್ತಿ” ಎಂದು ಹೇಳಿದರು.

ಅಮೃತಕಾಲವೆಂಬ ಭ್ರಮೆ; ದೇಶ ತೊರೆಯುತ್ತಿರುವ ಲಕ್ಷಾಂತರ ಜನ

ದೇಶದಲ್ಲಿ 2011ರಿಂದ 2023ರವರೆಗೆ ಸುಮಾರು 1.75 ಮಿಲಿಯನ್ ಭಾರತೀಯರು ತನ್ನ ಪಾಸ್‌ಪೋರ್ಟ್‌ ಅನ್ನು ಸ್ವಯಂಪ್ರೇರಿತವಾಗಿ ಹಿಂದಿರುಗಿಸಿದ್ದಾರೆ. ಅಂದರೆ ದೇಶದ ನಾಗರಿಕತೆ ತೊರೆದು ಇತರೆ ದೇಶದ ನಾಗರಿಕತೆ ಪಡೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳುತ್ತದೆ. ಅದರಲ್ಲೂ 2014ರಿಂದ 2022ರವರೆಗೆ ಸುಮಾರು 246,580 ಭಾರತೀಯರು ದೇಶ ತೊರೆದಿದ್ದಾರೆ. ಕಳೆದ ವರ್ಷ 2023ರಲ್ಲಿ 216,219 ಮಂದಿ ಮತ್ತು 2022ರಲ್ಲಿ 225,620 ಮಂದಿ ಭಾರತೀಯ ನಾಗರಿಕತೆ ತ್ಯಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಮೃತಕಾಲವಿದು, ದೇಶ ಅಭಿವೃದ್ಧಿಯಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಈ ಅಮೃತಕಾಲದಲ್ಲೂ ಇಷ್ಟೊಂದು ಜನರು ದೇಶ ತೊರೆಯುವುದೇಕೆ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...