ಗುಜರಾತ್: ಮದ್ಯ ಜಾರಿಗೊಳಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕೈ, ಆಪ್ ಆಕ್ರೋಶ

Date:

ಗುಜರಾತ್ ರಾಜ್ಯದಲ್ಲಿ ಕಟ್ಟುನಿಟ್ಟಾದ ಪಾನ ನಿರೋಧ ನಿಷೇಧ ನೀತಿಯನ್ನು ಭಾಗಶಃ ರದ್ದುಗೊಳಿಸಿ ‘ಗಿಫ್ಟ್‌ ಸಿಟಿ’ ಯೋಜನೆಯಡಿ ಮದ್ಯವನ್ನು ಅನುಮತಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (ಗಿಫ್ಟ್‌ ಸಿಟಿ) ಯೋಜನೆಯಡಿ ಮದ್ಯದ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.

ಯುವಕರನ್ನು ಹಾಳು ಮಾಡುವ ನಿರ್ಧಾರ ದುರದೃಷ್ಟಕರ ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಹೇಳಿದರೆ, ಬಿಜೆಪಿಯು ಈ ಪ್ರದೇಶದಲ್ಲಿ ವ್ಯಾಪಾರದ ಅಭಿವೃದ್ಧಿಗೆ ಸೂಕ್ತ ವಾತಾವರಣವನ್ನು ಒದಗಿಸುವುದಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಅತ್ಯಂತ ದುರದೃಷ್ಟಕರ ನಿರ್ಧಾರ. ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಪಾನ ನಿಷೇಧವನ್ನು ತೆಗೆದುಹಾಕಲು ಬಯಸಿದೆ ಮತ್ತು ಅವರು ಅದನ್ನು ಗಿಫ್ಟ್ ಸಿಟಿಯೊಂದಿಗೆ ಪ್ರಾರಂಭಿಸಿದ್ದಾರೆ. ನಾಳೆ ಅವರು ರಾಜ್ಯದ ವಿವಿಧ ನಗರಗಳಲ್ಲಿ ಮದ್ಯ ನಿಷೇಧವನ್ನು ತೆಗೆದುಹಾಕಲು ಬಯಸುತ್ತಾರೆ” ಎಂದು ವಿಪಕ್ಷದ ನಾಯಕ ಅಮಿತ್ ಚಾವ್ಡ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಇದರಿಂದ ಯುವಜನತೆ ಹಾಳಾಗುತ್ತದೆ. ಗಿಫ್ಟ್ ಸಿಟಿಯಿಂದ ಮದ್ಯಪಾನ ಮಾಡಿ ಹೊರಗೆ ಬರುವವರು ಅಪಘಾತಗಳನ್ನು ಉಂಟುಮಾಡುತ್ತಾರೆ ಮತ್ತು ನಮ್ಮ ಮಹಿಳೆಯರಿಗೆ ಹಾನಿ ಮಾಡುತ್ತಾರೆ. ಅವರು (ಸರ್ಕಾರ) ಮದ್ಯ ನಿಷೇಧವನ್ನು ತೆಗೆದು ಹಾಕುವುದರಿಂದ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ಅವರು (ಸರ್ಕಾರ) ಭಾವಿಸುತ್ತಾರೆಯೇ” ಎಂದು ಅವರು ಪ್ರಶ್ನಿಸಿದರು.

ಕಾನೂನು ಮತ್ತು ಸುವ್ಯವಸ್ಥೆ, ಮಹಿಳೆಯರ ಘನತೆ ಕಾಪಾಡಲು ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಹೇಳಿದ ಕಾಂಗ್ರೆಸ್ ಶಾಸಕ ಗನಿಬೆನ್ ಠಾಕೂರ್, ಜನರು ಗುಜರಾತ್‌ನಿಂದ ಹೊರಗೆ ಹೋಗುವ ಬದಲು ಗಿಫ್ಟ್ ಸಿಟಿಗೆ ಕುಡಿಯಲು ಹೋಗುತ್ತಾರೆ ಎಂದು ಹೇಳಿದರು.

ಬೊಟಾಡ್ನ ಕ್ಷೇತ್ರದ ಎಎಪಿ ಶಾಸಕ ಉಮೇಶ್ ಮಕ್ವಾನಾ, ಗಿಫ್ಟ್ ಸಿಟಿಯಲ್ಲಿನ ನಿಷೇಧವನ್ನು ತೆಗೆದುಹಾಕುವ ನಿರ್ಧಾರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಪತ್ರ ಬರೆದಿದ್ದಾರೆ.

ವಿಪಕ್ಷಗಳ ವಾದಗಳನ್ನು ಸಮರ್ಥಿಸಿಕೊಂಡಿರುವ ಸಚಿವ ರುಶಿಕೇಶ್ ಪಟೇಲ್, ರಾಜ್ಯದ ಹೊರಗಿನಿಂದ ಬರುವ ಉದ್ಯಮಿಗಳಿಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

“ಮದ್ಯ ನಿಷೇಧವಿಲ್ಲದ ಸ್ಥಳಗಳಲ್ಲಿ ಉದ್ಯಮಿಗಳಿಗೆ ಅದೇ ಜೀವನಶೈಲಿಯನ್ನು ಒದಗಿಸಲು ಯೋಜನೆಯನ್ನು ಆರಂಭಿಸಲಾಗಿದೆ. ಗಿಫ್ಟ್ ಸಿಟಿಗೆ 500 ಕ್ಕೂ ಹೆಚ್ಚು ಕಂಪನಿಗಳು ಸೇರ್ಪಡೆಯಾಗಿವೆ. ಮುಂದಿನ ದಿನಗಳಲ್ಲಿ ಈ ನಿರ್ಧಾರದ ಪ್ರಾಮುಖ್ಯತೆಯನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳುತ್ತಾರೆ” ಎಂದು ಪಟೇಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...