ಲೋಕಸಭಾ ಚುನಾವಣೆ | 6ನೇ ಹಂತದಲ್ಲಿ ಶೇ.59ರಷ್ಟು ಮತದಾನ: ಚುನಾವಣಾ ಆಯೋಗ

Date:

ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು ಆಯೋಗದ ಅಧಿಕಾರಿಗಳು ಪ್ರಕಟಿಸಲಿದ್ದಾರೆ.

ಶನಿವಾರ ಆರನೇ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆದಿದ್ದು, ರಾತ್ರಿ 7.45ಕ್ಕೆ ಚುನಾವಣಾ ಆಯೋಗವು ಹೊರಡಿಸಿರುವ ಪ್ರಕಟಣೆಯಲ್ಲಿ 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ತಿಳಿಸಿದೆ.

ದೆಹಲಿಯಲ್ಲಿ ಶೇ.54.48ರಷ್ಟು ಮತದಾನ ದಾಖಲಾದರೆ, ಪಶ್ಚಿಮ ಬಂಗಾಳದಲ್ಲಿ 78.19ರಷ್ಟು ಮತದಾನ ದಾಖಲಾಗಿದೆ. ಆ ಮೂಲಕ ಆರನೇ ಹಂತದಲ್ಲಿ ಅತಿಹೆಚ್ಚು ಮತದಾನ ದಾಖಲಾದ ರಾಜ್ಯ ಎಂಬ ಖ್ಯಾತಿ ಪಶ್ಚಿಮ ಬಂಗಾಳದ್ದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ ಬಿಹಾರದಲ್ಲಿ 53.30%, ಹರಿಯಾಣದಲ್ಲಿ 58.37%, ಜಮ್ಮು-ಕಾಶ್ಮೀರದಲ್ಲಿ 52.28%, ಜಾರ್ಖಂಡ್‌ನಲ್ಲಿ 62.74%, ಒಡಿಶಾದಲ್ಲಿ 60.07%, ಉತ್ತರ ಪ್ರದೇಶದಲ್ಲಿ 54.03% ದಷ್ಟು ಮತದಾನ ನಡೆದಿರುವುದಾಗಿ ಆಯೋಗ ಮಾಹಿತಿ ನೀಡಿದೆ. ಜೂನ್ 1ರಂದು ಕೊನೆಯ ಹಾಗೂ 7ನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ.

EC 1

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆದಿದೆ.

ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆದಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗರಾದ ಗೌತಮ್‌ ಗಂಭೀರ್‌, ಎಂ ಎಸ್ ಧೋನಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್, ಆಯಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖ್‌ಬೀರ್ ಸಿಂಗ್ ಸಂಧು ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...