ನಾಲ್ಕು ಹಂತಗಳ ಚುನಾವಣೆಯಲ್ಲೂ ‘ಇಂಡಿಯಾ’ ಒಕ್ಕೂಟ ಮುಂದಿದೆ: ಖರ್ಗೆ

Date:

ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಾಲ್ಕು ಹಂತಗಳಲ್ಲೂ ನಡೆದಿರುವ ಲೋಕಸಬಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಲಖನೌದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಅವರ ಉಪಸ್ಥಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,ಆಡಳಿತ ಪಕ್ಷ ಮತದಾರರನ್ನು ಮತ ಹಾಕಲು ಹಾಗೂ ಅಭ್ಯರ್ಥಿಗಳನ್ನು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬೆದರಿಸುತ್ತಿದೆ ಎಂದು ಆರೋಪಿಸಿದರು.

ಬೆದರಿಸುವಿಕೆಯ ನಡುವೆಯೂ ಇಂಡಿಯಾ ಒಕ್ಕೂಟ ನಾಲ್ಕು ಲೋಕಸಭಾ ಹಂತಗಳಲ್ಲಿಯೂ ಬಿಜೆಪಿಗಿಂತ ಮುಂದಿದೆ. ಆಡಳಿತ ಪಕ್ಷದವರು ನಮಗಿಂತ ಹಿಂದಿದ್ದಾರೆ. ಕೇಂದ್ರದಲ್ಲಿ ನಾವು ಮುಂದಿನ ಸರ್ಕಾರವನ್ನು ರಚಿಸುತ್ತೇವೆ ಎಂದು ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನವಾಗಿದೆ. ಒಂದು ಕಡೆ ಧರ್ಮದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದಿದ್ದರೆ, ಮತ್ತೊಂದು ಕಡೆ ಬಡವರು ಹಾಗೂ ಯುವಕರ ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ. ನಮ್ಮ ಹೋರಾಟವು ಸಂವಿಧಾನವನ್ನು ಉಳಿಸಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮೀಸಲಾತಿ ರದ್ದುಗೊಳಿಸಿ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್ ಅವರ ಮಾತನ್ನು ಉಲ್ಲೇಖಿಸಿದರು. ಮೋದಿ ಎಂದಿಗೂ ಇಂತಹ ನಾಯಕರ ಹೇಳಿಕೆಗಳನ್ನು ವಿರೋಧಿಸುವುದಿಲ್ಲ ಎಂದು ಹೇಳಿದರು.

“ನಾವು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಸ್ಥಾನಮಾನವನ್ನು ಖಚಿತಪಡಿಸಲು ಜಾತಿ ಸಮೀಕ್ಷೆಯನ್ನು ಕೈಗೊಳ್ಳುತ್ತೇವೆ. ಅದು ನಮ್ಮ ಪಕ್ಷದ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕಿಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ಈ ಕಾರ್ಯವನ್ನು ನಾವು ಈಗಾಗಲೇ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ನೆರವೇರಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 140ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ. ಅದೇ ರೀತಿ ಬಿಎಸ್‌ಪಿಗೆ ಮತ ನೀಡಿ ತಮ್ಮ ಮತವನ್ನು ಹಾಳುಮಾಡಿಕೊಳ್ಳಬೇಡಿ ಎಂದು ಮತದಾರರಿಗೆ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...