ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

Date:

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ 102 ಕ್ಷೇತ್ರಗಳ 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಜನಾದೇಶ ಇಂದು ನಿರ್ಧಾರವಾಗಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 16.63 ಕೋಟಿಗೂ ಹೆಚ್ಚು ಮಂದಿ ಮತ ಚಲಾಯಿಸಲಿದ್ದಾರೆ.

ಚುನಾವಣೆಗೆ ಸ್ಪರ್ಧಿಸಿದವರಲ್ಲಿ ಎಂಟು ಮಂದಿ ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಒಬ್ಬರು ಮಾಜಿ ರಾಜ್ಯಪಾಲರು ಕೂಡ ಇದ್ದಾರೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸರ್ಬಾನಂದ ಸೋನೋವಾಲ್, ಭೂಪೇಂದ್ರ ಯಾದವ್, ಕಾಂಗ್ರೆಸ್‌ನ ಗೌರವ್ ಗೊಗೋಯ್, ಡಿಎಂಕೆಯ ಕನಿಮೋಳಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕೇಂದ್ರ ಸಚಿವರಾದ ಕಿರಣ್ ರಿಜಿಜು, ಸಂಜೀವ್ ಬಲಿಯಾನ್, ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘಾ ವಾಲ್, ಎಲ್. ಮುರುಗನ್, ನಿಸಿತ್ ಪ್ರಮಾಣಿಕ್ ಕೂಡ ಕಣದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇವ್, ನಬಾಮ್ ತುಕಿ ಮತ್ತು ಮಾಜಿ ರಾಜ್ಯಪಾಲೆ ತಮಿಳ್ಸಾಯ್ ಸೌಂದರ್ರಾಜನ್ ಅವರು ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಇದನ್ನು ಓದಿದ್ದೀರಾ?: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಿಗ್ಗಜರ ದಿಕ್ಕೆಡಿಸಿದ, ಅವಾಂತರಕಾರಿಗಳಿಗೆ ಮಣೆ ಹಾಕಿದ ಕ್ಷೇತ್ರ

ಏಳು ಹಂತಗಳಲ್ಲಿ ನಡೆಯಲಿರುವ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ, ಶುಕ್ರವಾರ ನಡೆಯಲಿರುವ ಹಂತವು ಅತಿ ದೊಡ್ಡದಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳ ಒಟ್ಟು 92 ಕ್ಷೇತ್ರಗಳಿಗೆ ಕೂಡ ಇಂದೇ ಮತದಾನ ನಡೆಯಲಿದೆ.

ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಲಿದ್ದು, ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆ ಕರೆದೊಯ್ಯಲು 41 ಹೆಲಿಕಾಪ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸರಿಸುಮಾರು ಒಂದು ಲಕ್ಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದೆ.

ಶೇಕಡ 50ಕ್ಕೂ ಹೆಚ್ಚಿನ ಮತಗಟ್ಟೆ ಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರಲಿದೆ. ಅಲ್ಲದೆ, ಎಲ್ಲ ಮತಗಟ್ಟೆಗಳಿಗೆ ಸೂಕ್ಷ್ಮ ಪರಿವೀಕ್ಷಕರನ್ನು ನೇಮಿಸಲಾಗುತ್ತದೆ.

ಶುಕ್ರವಾರ ಮತದಾನ ನಡೆಯಲಿರುವ ರಾಜ್ಯಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯ ಶುಕ್ರವಾರದಂದು ಚುನಾವಣೆಗಳು ನಡೆಯಲಿವೆ.

ಒಟ್ಟು ರಾಜ್ಯ, ಕೇಂದ್ರಾಡಳಿತ ಪ್ರದೇಶ 21

ಒಟ್ಟು ಲೋಕಸಭಾ ಕ್ಷೇತ್ರಗಳು 102

ಒಟ್ಟು ಅಭ್ಯರ್ಥಿಗಳು 1,625

ಮತದಾನ ಕೇಂದ್ರಗಳು 1.87 ಲಕ್ಷ

ಚುನಾವಣ ಸಿಬಂದಿ 18 ಲಕ್ಷ

ಒಟ್ಟು ಮತದಾರರು 16.63 ಕೋಟಿ

ಪುರುಷ ಮತದಾರರು 8.4 ಕೋಟಿ

ಮಹಿಳಾ ಮತದಾರರು 8.23 ಕೋಟಿ

ಲಿಂಗತ್ವ ಅಲ್ಪಸಂಖ್ಯಾತರು 11,371

ಮೊದಲ ಬಾರಿ ಹಕ್ಕು ಚಲಾಯಿಸುವವರು: 35.67 ಲಕ್ಷ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...