ಲೋಕಸಭೆಗೆ ನುಗ್ಗಿದ ಅಪರಿಚಿತರು: ಸಂದರ್ಶಕರ ಪಾಸ್ ರದ್ದುಗೊಳಿಸಿದ ಸ್ಪೀಕರ್

Date:

ಇಂದು ಸದನದಲ್ಲಿ (ಡಿಸೆಂಬರ್ 13) ಭಾರೀ ಭದ್ರತಾ ಲೋಪವಾದ ನಂತರ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂದರ್ಶಕರ ಪಾಸ್‌ಅನ್ನು ರದ್ದುಗೊಳಿಸಿದ್ದಾರೆ. ಇಂದಿನ ಕಲಾಪದ ನಂತರ ಸದನದ ಸರ್ವಪಕ್ಷದ ನಾಯಕರ ಸಭೆಗೆ ಕರೆ ನೀಡಿದ್ದಾರೆ.

ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಂತರ ಇಬ್ಬರು ವ್ಯಕ್ತಿಗಳು ಸದನದ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಗದ್ದಲವುಂಟು ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸದನದೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಗ್ಯಾಸ್ ಸ್ಪ್ರೇ ಹರಡಿದ್ದಾರೆ. 2001ರ ಸಂಸತ್ ದಾಳಿಯ 22 ನೇ ವಾರ್ಷಿಕೋತ್ಸವದಂದು ಈ ಭದ್ರತಾ ಲೋಪ ಹೇಗೆ ಸಂಭವಿಸಿತು ಎಂಬುದರ ಕುರಿತು ವಿವರವಾದ ವರದಿಯನ್ನು ಲೋಕಸಭೆ ಸ್ಪೀಕರ್ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏತನ್ಮಧ್ಯೆ, ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಕೂಡ ಪರಿಸ್ಥಿತಿಯನ್ನು ಅವಲೋಕಿಸಲು ಸಂಸತ್ತಿಗೆ ಆಗಮಿಸಿದ್ದಾರೆ. 2001 ರ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದಂದು ಭಯವನ್ನು ಹರಡುವ ಹಳದಿ ಅನಿಲವನ್ನು ಸಿಂಪಡಿಸುತ್ತಾ ಸದನದೊಳಗೆ ಓಡುತ್ತಿರುವಾಗ ನೀಲಿ ಜಾಕೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ಟೇಬಲ್‌ಗಳ ಮೇಲೆ ಹತ್ತುತ್ತಿರುವುದು ಕಂಡುಬಂದಿದೆ.

ಲೋಕಸಭೆ ಎಲ್ಲ ಗ್ಯಾಲರಿಗಳಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಕಲಾಪದಲ್ಲಿ ಹಾಜರಿದ್ದರು. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಜಿಗಿದ ವ್ಯಕ್ತಿಗಳನ್ನು ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಮೈಸೂರು ಮೂಲದ ಮನೋರಂಜನ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಭದ್ರತಾಲೋಪ | ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದ ಅಪರಿಚಿತರು

2016ರಲ್ಲಿ ನಡೆದಿದ್ದ ಘಟನೆ

ಇದೇ ರೀತಿಯ ಲೋಕಸಭೆಗೆ ನುಗ್ಗಿದ ಘಟನೆ 2016ರಲ್ಲೂ ನಡೆದಿತ್ತು. ಹಳೆಯ 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ 2016ರ ನವೆಂಬರ್‌ 25 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ವ್ಯಕ್ತಿಯೊಬ್ಬರು ಸದನಕ್ಕೆ ಜಿಗಿಯಲು ಪ್ರಯತ್ನಿಸಿದ್ದರು.

ಮಧ್ಯಪ್ರದೇಶದ ಬುಲಂದ್‌ಶಹರ್‌ನ ಬಿಜೆಪಿ ಸಂಸದ ಭೋಲಾ ಸಿಂಗ್ ಅವರ ಪಾಸ್‌ ಪಡೆದು ರಾಕೇಶ್ ಸಿಂಗ್ ಬಘೇಲ್ ಎಂಬಾತ ಅಂದು ಸಂಸತ್ತಿಗೆ ಪ್ರವೇಶಿಸಿ ಗ್ಯಾಲರಿಯಿಂದ ಜಿಗಿಯಲು ಪ್ರಯತ್ನಿಸಿದ್ದ. ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿ ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...