ಸುಧೀರ್ಘ ಅವಧಿಯ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು

Date:

ಇಬ್ಬರು ವಯಸ್ಕರ ನಡುವೆ ಸುಧೀರ್ಘ ಕಾಲದಿಂದ ಒಪ್ಪಿತ ಲೈಂಗಿಕ ಸಂಬಂಧವಿದ್ದಲ್ಲಿ, “ವಿವಾಹವಾಗುವ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ” ಎಂಬ ಕಾರಣಕ್ಕೆಪುರುಷನಿಗೆ ಶಿಕ್ಷೆ ವಿಧಿಸುವುದು ನ್ಯಾಯಸಮ್ಮತವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.

ಈ ಸಂಬಂಧ 2022ರಲ್ಲಿ ವಿಳ್ಳುಪುರಂ ಮಹಿಳಾ ನ್ಯಾಯಾಲಯ 26 ವರ್ಷದ ವ್ಯಕ್ತಿಯೊಬ್ಬರಿಗೆ ನೀಡಿದ್ದ ಶಿಕ್ಷೆಯನ್ನು ನ್ಯಾಯಮೂರ್ತಿ ಸುಂದರ್ ಮೋಹನ್ ರದ್ದುಪಡಿಸಿದ್ದಾರೆ. “ಸುಧೀರ್ಘ ಅವಧಿಯಿಂದ ಇದ್ದ ಒಪ್ಪಿತ ಲೈಂಗಿಕ ಸಂಬಂಧ ಕೆಟ್ಟಿರುವುದು ಮಾತ್ರ ಪುರಾವೆಗಳಿಂದ ತಿಳಿದು ಬರುತ್ತದೆ. ಆದ್ದರಿಂದ ಭಾರತೀಯ ದಂಡಸಂಹಿತೆ ಸೆಕ್ಷನ್ 376 ಮತ್ತು 147ರ ಅಡಿಯಲ್ಲಿ ಶಿಕ್ಷೆ ನೀಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ದೂರು ನೀಡುವ ಸಂದರ್ಭದಲ್ಲಿ 24 ವರ್ಷ ವಯಸ್ಸಾಗಿದ್ದ ಮಹಿಳೆ ಅಪರಾಧದ ದೂರು ನೀಡಿದ್ದು, ತನ್ನ ವರ್ತನೆಯ ಪರಿಣಾಮಗಳ ಬಗ್ಗೆ ಅವರಿಗೆ ಅರಿವು ಇದ್ದಿರಬೇಕು. ಕೇವಲ ವಿವಾಹವಾಗುವ ಸುಳ್ಳು ಭರವಸೆಯ ಕಾರಣದಿಂದ ಆಕೆ ಲೈಂಗಿಕತೆಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗದು. ಸಂತ್ರಸ್ತೆ ಮುಗ್ಧೆ ಅಥವಾ ಮೋಸ ಹೋದವಳು ಎನಿಸುವುದಿಲ್ಲ” ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

“ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ವಿವಾಹವಾಗುವ ಆಶ್ವಾಸನೆ ನೀಡಿ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಮೊದಲ ಬಾರಿಗೆ 25 ತಿಂಗಳ ಬಳಿಕ ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ವಿಳಂಬಕ್ಕೆ ಅತ್ಯಂತ ಮಹತ್ವವಿದೆ” ಎಂದು ವಿಶ್ಲೇಷಿಸಿದ್ದಾರೆ.

ಇತರ ಸಾಕ್ಷಿಗಳ ಪುರಾವೆಗಳಿಂದ ತಿಳಿದುಬರುವಂತೆ, ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಮತ್ತು ಸಂತ್ರಸ್ತೆ ನಿಕಟ ಸಂಬಂಧ ಹೊಂದಿದ್ದರು. ಆದ್ದರಿಂದ ಸುಳ್ಳು ಭರವಸೆ ನೀಡಿ ಲೈಂಗಿಕ ಕ್ರಿಯೆ ಎಸಗಿದ ಬಗ್ಗೆ ಸಾಕ್ಷಿಗಳು ಲಭ್ಯವಿಲ್ಲ. ವಿಳ್ಳುಪುರಂ ಮಹಿಳಾ ಕೋರ್ಟ್ 2022ರ ಡಿಸೆಂಬರ್ 9ರಂದು ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸುತ್ತಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...