ಪ್ರೇಮ ವಿವಾಹ: ಕುಟುಂಬಗಳಿಗೆ ಬಹಿಷ್ಕಾರ ಹಾಕುವುದಾಗಿ ಗ್ರಾಮ ಪಂಚಾಯತಿ ಬೆದರಿಕೆ

Date:

ಕಳೆದ ಆರು ತಿಂಗಳಿನಿಂದ ಸತತವಾಗಿ ಊರು ತೊರೆದು ಮದುವೆಯಾಗುವುದು, ಅಂತರ್ಜಾತಿ ವಿವಾಹಗಳು ಹಾಗೂ ಪ್ರೇಮ ವಿವಾಹಗಳು ಎಚ್ಚಾಗಿವೆ. ಇನ್ನು ಮುಂದೆ, ಕುಟುಂಬದ ಒಪ್ಪಿಗೆ ಇಲ್ಲದ ಪ್ರೇಮ ವಿವಾಹಗಳು ನಡೆದರೆ, ಅವರ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗುತ್ತದೆ ಎಂದು ಗ್ರಾಮ ಪಂಚಾಯತಿಯೊಂದು ಬೆದರಿಕೆ ಹಾಕಿದೆ. ಪಂಚಾಯತಿಯ ಬೆದರಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಪಂಚೇವಾ ಗ್ರಾಮ ಪಂಚಾಯತಿಯು ಇಂತಹದ್ದೊಂದು ಬೆದರಿಕೆಯನ್ನು ಘೋಷಿಸಿದೆ. ಕಳೆದ ಆರು ತಿಂಗಳಲ್ಲಿ 10ಕ್ಕೂ ಹೆಚ್ಚು ಜೋಡಿಗಳು ಕುಟುಂಬದ ಒಪ್ಪಿಗೆಯಿಲ್ಲದೆ ವಿವಾಹವಾಗಿದ್ದಾರೆ. ಅವರಲ್ಲಿ ಹಲವರು, ಪೊಲೀಸ್‌ ಠಾಣೆಗಳಲ್ಲಿ ಮತ್ತು ನ್ಯಾಯಾಧೀಶರ ಎದುರು ತಮ್ಮ ಹೆತ್ತವರನ್ನು ಗುರುತಿಸಲೂ ನಿರಾಕರಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೇ ಕಾರಣಕ್ಕಾಗಿ, ಗ್ರಾಮದ ಹಿರಿಯರು, ಪಂಚಾಯತಿ ಸದಸ್ಯರು ಹಾಗೂ ನಿವಾಸಿಗಳು ಸಭೆ ನಡೆಸಿದ್ದು, ಊರು ತೊರೆದ ಪ್ರೇಮಿಗಳ ಕುಟುಂಬಗಳಿಗೆ ಸಾಮಾಜಿಕ ಮತ್ತು ಆರ್ಥಿಕ ನಿರ್ಬಂಧ ಹೇರುವುದಾಗಿ ಘೋಷಿಸಿದ್ದಾರೆ.

ಆ ಸಭೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವುಗಳಲ್ಲಿ; ಗ್ರಾಮಸ್ಥರು ನಿರ್ಣಯ ಪತ್ರವನ್ನು ಹಿಡಿದು, ಗ್ರಾಮದ ಸರ್ವಾನುಮತದ ನಿರ್ಧಾರವೆಂದು ಓದುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಊರು ತೊರೆದು ಮದುವೆಯಾದ ಯಾವುದೇ ಹುಡುಗ ಅಥವಾ ಹುಡುಗಿ ಹಾಗೂ ಅವರ ಕುಟುಂಬಗಳು ಈ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಕುಟುಂಬಗಳಿಗೆ ಹಾಲು ಅಥವಾ ಯಾವುದೇ ಸರಕುಗಳನ್ನು ಪೂರೈಸಲಾಗುವುದಿಲ್ಲ. ಯಾರೂ ಅವರನ್ನು ಸಾಮಾಜಿಕ ಅಥವಾ ಕುಟುಂಬ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ. ಗ್ರಾಮದಲ್ಲಿ ಅವರಿಗೆ ಯಾವುದೇ ಕೆಲಸವನ್ನು ನೀಡಲಾಗುವುದಿಲ್ಲ. ಪುರೋಹಿತರು, ಕ್ಷೌರಿಕರು ಹಾಗೂ ಇತರ ಸೇವಾ ಪೂರೈಕೆದಾರರು ಆ ಕುಟುಂಬಗಳ ಮನೆಗಳಿಗೆ ಹೋಗುವುದಿಲ್ಲ” ಎಂದು ನಿರ್ಣಯದಲ್ಲಿ ಹೇಳಲಾಗಿದೆ.

“ಊರು ತೊರೆದು ವಿವಾಹವಾದ ದಂಪತಿಗೆ ಸಹಾಯ ಮಾಡುವ, ಅವರಿಗೆ ಆಶ್ರಯ ನೀಡುವ, ಮದುವೆಗೆ ಸಾಕ್ಷಿಯಾಗುವ ಅಥವಾ ಅವರಿಗೆ ಯಾವುದೇ ರೀತಿಯಲ್ಲಿ ಬೆಂಬಲ ನೀಡುವ ಯಾರನ್ನೂ ಸಹ ಸಾಮಾಜಿಕವಾಗಿ ಬಹಿಷ್ಕರಿಸಲಾಗುವುದು” ಎಂದು ಬೆದರಿಕೆ ಹಾಕಲಾಗಿದೆ.

ವೀಡಿಯೊಗಳು ವೈರಲ್ ಆದ ನಂತರ, ಸ್ಥಳೀಯ ಆಡಳಿತದ ಅಧಿಕಾರಿಗಳು ಪಂಚೆವಾ ಗ್ರಾಮಕ್ಕೆ ಭೇಟಿ ನೀಡಿದ್ದು, ಸರಪಂಚ್ ಸಮ್ಮುಖದಲ್ಲಿ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಾಲಿನಿ ಶ್ರೀವಾಸ್ತವ ಅವರು ಜೌರಾ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಈ ವಿಷಯವನ್ನು ಪರಿಶೀಲಿಸುವಂತೆ ನಿರ್ದೇಶಿಸಿದ್ದಾರೆ.

“ಗ್ರಾಮಸ್ಥರು ಬಿಡುಗಡೆ ಮಾಡಿದ ವಿಡಿಯೋ ನಮ್ಮ ಗಮನಕ್ಕೆ ಬಂದಿದೆ. ದೂರು ಬಂದ ಕೂಡಲೇ ಈ ವಿಷಯವನ್ನು ಪರಿಶೀಲಿಸಲು ಮತ್ತು ಜವಾಬ್ದಾರರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿವಾಸಿಗಳೊಂದಿಗೆ ಮಾತನಾಡಲು ಸ್ಥಳೀಯ ಆಡಳಿತವನ್ನು ಗ್ರಾಮಕ್ಕೆ ಕಳುಹಿಸಲಾಗಿದೆ” ಎಂದು ರತ್ಲಂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಕುಮಾರ್ ತಿಳಿಸಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...