ಶ್ವಾಸಕೋಶ, ಹೃದಯ ಛಿದ್ರ: ಕೋಲ್ಕತ್ತಾ RGಕರ್ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸಿಲುಕಿದ್ದ ಬಾಲಕನ ಭೀಕರ ಸಾವು?

Date:

ಕೋಲ್ಕತ್ತಾದಲ್ಲಿರುವ ಸರ್ಕಾರಿ ಸ್ವಾಮ್ಯದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಲಿಫ್ಟ್‌ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಬಾಲಕನೊಬ್ಬ ಸಾವನ್ನಪ್ಪಿದ್ದಾರೆ. ಆತನ ಶ್ವಾಸಕೋಶ, ಹೃದಯ ಹಾಗೂ ಲಿವರ್ ಛಿದ್ರಗೊಂಡಿವೆ ಎಂಬುದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಕಂಡುಬಂದಿದೆ.

ಮೃತರನ್ನು ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲಾಗಿದೆ. ಅರೂಪ್ ಬಂಡೋಪಾಧ್ಯಯ ಅವರು ಆಸ್ಪತ್ರೆಯ ಟ್ರಾಮಾ ಕೇರ್ ಯೂನಿಟ್‌ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ತನ್ನನ್ನು ಭೇಟಿ ಮಾಡಲು ಬಂದ ತನ್ನ ತಂದೆ ಅಮಲ್ ಬಂಡೋಪಾಧ್ಯಾಯ ಅವರನ್ನು ತನ್ನ ವಾರ್ಡ್‌ಗೆ ಕರೆತರಲು ಅರೂಪ್ ಲಿಫ್ಟ್‌ನಲ್ಲಿ ಹೋಗಿದ್ದಾರೆ. ಈ ವೇಳೆ, ಅವರು ಲಿಫ್ಟ್‌ನ ತಾಂತ್ರಿಕ ದೋಷದಿಂದಾಗಿ ಲಿಫ್ಟ್‌ನಲ್ಲಿಯೇ ಸಿಲುಕಿಕೊಂಡಿದ್ದಾರೆ. ಸುಮಾರು ಒಂದು ಗಂಟೆಯ ಬಳಿಕ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ.

ಅರೂಪ್ ಲಿಫ್ಟ್‌ನ ಮಧ್ಯದಲ್ಲಿ ಸಿಲುಕಿಕೊಂಡಿದ್ದಾಗ ಯಾವುದೇ ಲಿಫ್ಟ್ ಆಪರೇಟರ್ ಸ್ಥಳದಲ್ಲಿ ಇರಲಿಲ್ಲ. ಪರಿಣಾಮ, ಸ್ಥಗಿತಗೊಂಡಿದ್ದ ಲಿಫ್ಟ್‌ಅನ್ನು ಸರಿಪಡಿಸಲು ಯಾವುದೇ ಆಸ್ಪತ್ರೆ ಸಿಬ್ಬಂದಿ ಅಥವಾ ಆಪರೇಟರ್ ಲಭ್ಯವಿರಲಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಆತನ ಪಕ್ಕೆಲುಬು, ಕೈ ಮತ್ತು ಕಾಲಿನ ಮೂಳೆಗಳು ಮುರಿದಿವೆ. ಶ್ವಾಸಕೋಶ, ಹೃದಯ ಹಾಗೂ ಲಿವರ್ ಛಿದ್ರಗೊಂಡಿವೆಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ.

ಮೃತನ ತಂದೆ, ಅಮಲ್ ಬಂಡೋಪಾಧ್ಯಯ ನೀಡಿದ ದೂರಿನ ಆಧಾರದ ಮೇಲೆ ತಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯ ಐವರು ಸಿಬ್ಬಂದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವರ್ಣರಂಜಿತ ಹಾರ್ಮುಜ್ ಪರ್ವತದ ಕಥನ ಗೊತ್ತೇ?

ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸಪ್ತರ್ಷಿ ಚಟ್ಟೋಪಾಧ್ಯಾಯ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅರೂಪ್ ಗಾಯಗೊಂಡಿದ್ದಾರೆ ಎಂದು ಅವರ ಕುಟುಂಬದವರು ಆರೋಪಿಸಿದ್ದಾರೆ. ಲಿಫ್ಟ್ ಸರಿಯಾಗಿಯೇ ಕಾರ್ಯನಿರ್ವಹಿಸುತ್ತಿತ್ತು. ಬಟನ್ ಒತ್ತಿದ ನಂತರ ಅದು ಮೇಲೆ ಮತ್ತು ಕೆಳಗೆ ಚಲಿಸಿದೆ. ಇದರಿಂದ ಒಳಗಿದ್ದವರು ಗಾಬರಿಗೊಂಡಿದ್ದಾರೆ. ಸಂತ್ರಸ್ತನ ಕುಟುಂಬದವರ ಪ್ರಕಾರ, ಲಿಫ್ಟ್ ಒಂದು ಸ್ಥಳದಲ್ಲಿ ನಿಂತಾಗ ಒಳಗಿದ್ದ ಮೂವರು ಹೊರಬರಲು ಪ್ರಯತ್ನಿಸಿದ್ದಾರೆ. ಆದರೆ, ಲಿಫ್ಟ್‌ನ ಹೊರಗೆ ಕೊಲ್ಯಾಪ್ಸಿಬಲ್ ಗೇಟ್ ಇತ್ತು. ಸಂತ್ರಸ್ತನು ಹೊರಬರಲು ಪ್ರಯತ್ನಿಸುತ್ತಿದ್ದಾಗಲೇ ಲಿಫ್ಟ್ ಮತ್ತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿದೆ. ಆ ಸಮಯದಲ್ಲಿ ಅರೂಪ್ ಲಿಫ್ಟ್ ಮತ್ತು ಗೋಡೆಯ ನಡುವೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಲಿಫ್ಟ್ ಆಪರೇಟರ್ ಅಥವಾ ಯಾವುದೇ ಸಹಾಯಕ ಸಿಬ್ಬಂದಿ ಇಲ್ಲದಿರುವುದು ಆಡಳಿತಾತ್ಮಕ ಲೋಪ ಎಂಬುದನ್ನು ನಾವು ತಪ್ಪಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು 2024ರ ಆಗಸ್ಟ್‌ನಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದಾಗಿ ದೇಶಾದ್ಯಂತ ಸುದ್ದಿಯಾಗಿತ್ತು. ನಂತರ ಆಸ್ಪತ್ರೆಯಲ್ಲಿ ನಡೆದ ಭಾರಿ ಆರ್ಥಿಕ ಅಕ್ರಮಗಳ ಬಗ್ಗೆಯೂ ತನಿಖೆ ಆರಂಭವಾಗಿತ್ತು. ಸಂತ್ರಸ್ತ ವೈದ್ಯೆಗೆ ಈ ಆರ್ಥಿಕ ಅಕ್ರಮಗಳ ಬಗ್ಗೆ ಮಾಹಿತಿ ತಿಳಿದಿದ್ದರಿಂದಲೇ ಈ ಘೋರ ಕೃತ್ಯ ನಡೆದಿದೆ ಎಂಬ ಬಲವಾದ ಅಭಿಪ್ರಾಯವೂ ವ್ಯಕ್ತವಾಗಿತ್ತು. ಆರ್ಥಿಕ ಅಕ್ರಮಗಳ ಮಾಸ್ಟರ್ ಮೈಂಡ್ ಎನ್ನಲಾದ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಈಗಾಗಲೇ ಬಂಧಿಸಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...