ಪಿಎಸಿ ಸಭೆಗೆ ಎರಡನೇ ಬಾರಿಯೂ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಗೈರು

Date:

ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಗುರುವಾರ ಎರಡನೇ ಬಾರಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಗೈರಾಗಿದ್ದಾರೆ. ಕೊನೆಗೆ ಸಮಿತಿಯು ಸಭೆಯನ್ನು ಮುಂದೂಡಿದೆ.

“ಕೆಲವು ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಬುಚ್ ಅವರು ಬೆಳಿಗ್ಗೆ ಸಮಿತಿಗೆ ತಿಳಿಸಿದರು” ಎಂದು ಪಿಎಸಿ ಅಧ್ಯಕ್ಷ ಕೆ ಸಿ ವೇಣುಗೋಪಾಲ್ ಹೇಳಿದರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಖ್ಯಸ್ಥ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಸಮಿತಿಯ ಮೊದಲ ಸಭೆಯಲ್ಲಿ ನಾವು ನಮ್ಮ ನಿಯಂತ್ರಣ ಸಂಸ್ಥೆಗಳ ಪರಿಶೀಲನೆಯ ಬಗ್ಗೆ ಸ್ವಯಂಪ್ರೇರಿತ ನಿರ್ಧಾರ ಮಾಡಿದೆವು. ಅದಕ್ಕಾಗಿಯೇ ನಾವು ಸೆಬಿಗೆ ಸಭೆಗೆ ಹಾಜರಾಗಲು ತಿಳಿಸಿದ್ದೇವೆ. ಸಮಿತಿಯ ಶಾಖೆಯು ಸಂಬಂಧಪಟ್ಟವರಿಗೆ ನೋಟಿಸ್ ಕಳುಹಿಸುತ್ತದೆ. ಮೊದಲನೆಯದಾಗಿ, ಅವರು ಸಭೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದರು. ನಾವು ಅದನ್ನು ನಿರಾಕರಿಸಿದೆವು. ಅದಾದ ಬಳಿಕ ಅವರು ಮತ್ತು ಅವರ ತಂಡ ಸಭೆಗೆ ಹಾಜಾರಾಗುವುದಾಗಿ ಖಚಿತಪಡಿಸಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

“ಇಂದು ಬೆಳಿಗ್ಗೆ 9:30ಕ್ಕೆ ಅವರು ದೆಹಲಿಗೆ ಪ್ರಯಾಣಿಸುವ ಸ್ಥಿತಿಯಲ್ಲಿಲ್ಲ ಎಂದು ನನಗೆ ತಿಳಿಸಿದರು. ಮಹಿಳೆಯೊಬ್ಬರ ಮನವಿಯಾದ ಕಾರಣ ನಾವು ಅದನ್ನು ಪರಿಗಣಿಸಿ ಸಭೆಯನ್ನು ಇನ್ನೊಂದು ದಿನಕ್ಕೆ ಮುಂದೂಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದು ವೇಣುಗೋಪಾಲ್ ಹೇಳಿದ್ದಾರೆ.

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ. ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ.

ಇದನ್ನು ಓದಿದ್ದೀರಾ? ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

ಇವೆಲ್ಲವುದರ ನಡುವೆ ಸದ್ಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಪ್ರಸ್ತುತ ಸೆಬಿಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸುತ್ತಿದೆ. ಸಮಿತಿಯ ಮುಂದೆ ಹಾಜರಾಗುವಂತೆ ಬುಚ್‌ಗೆ ಸಮನ್ಸ್ ನೀಡಲಾಗಿದೆ. ಸಭೆಗೆ ಹಾಜರಾಗದ ಕಾರಣ ಸಭೆ ಮುಂದೂಡಲಾಗಿದೆ.

ಆದರೆ ಪಿಎಸಿ ಸಭೆಯನ್ನು ಮುಂದೂಡಿದ ನಂತರ, ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರು ವೇಣುಗೋಪಾಲ್ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...