ಮಧ್ಯಪ್ರದೇಶ | ಕಾಲೇಜು ವಿದ್ಯಾರ್ಥಿಗೆ ₹46 ಕೋಟಿ ತೆರಿಗೆ ನೋಟಿಸ್ ಕೊಟ್ಟ ಐಟಿ ಇಲಾಖೆ

Date:

ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಆದಾಯ ತೆರಿಗೆ ಇಲಾಖೆ ಬರೋಬ್ಬರಿ ₹46 ಕೋಟಿ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಪ್ರಮೋದ್ ಕುಮಾರ್ ದಂಡೋಟಿಯಾ (25) ಸಂತ್ರಸ್ತ. ಈತ ಮೂಲತಃ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ. ಗ್ವಾಲಿಯರ್‌ನಲ್ಲಿ ಕಾಲೇಜು ವಿದ್ಯಾರ್ಥಿಯಾಗಿದ್ದಾನೆ. ಈತನ ಪಾನ್‌ ಕಾರ್ಡ್‌ ದುರ್ಬಳಕೆ ಮಾಡಿಕೊಂಡ ಕಂಪನಿಯೊಂದು ಬರೋಬ್ಬರಿ ₹46 ಕೋಟಿ ಅವ್ಯವಹಾರ ನಡೆಸಿದೆ ಎಂದು ಹೇಳಲಾಗಿದೆ. ಅಲ್ಲದೇ, ವಿದ್ಯಾರ್ಥಿಯ ಪಾನ್ ಕಾರ್ಡ್ಅನ್ನು ಬಳಸಿಕೊಂಡು ಕಂಪನಿಯೊಂದು ನೋಂದಣಿಯಾಗಿದೆ. ಆ ಕಂಪನಿ 2021ರಿಂದ ಮುಂಬೈ ಮತ್ತು ದಿಲ್ಲಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಆದಾಯ ತೆರಿಗೆ ಇಲಾಖೆಯಿಂದ ತೆರಿಗೆ ನೋಟಿಸ್ ಪಡೆದ ಬಳಿಕವಷ್ಟೆ, ಪ್ರಮೋದ್ ಕುಮಾರ್ ದಾಂಡೋತಿಯಾಗೆ ತನ್ನ ಪಾನ್‌ ಕಾರ್ಡ್‌ ಆಧಾರದಲ್ಲಿ ಬೃಹತ್ ಮೊತ್ತದ ವಹಿವಾಟು ನಡೆದಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಲ್ಲದೇ, ಆತನ ಪಾನ್ ಕಾರ್ಡ್ ಅನ್ನು ಬಳಸಿಕೊಂಡು ಕಂಪನಿಯೊಂದು ನೋಂದಣಿಗೊಂಡಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಿಎಸ್‌ಟಿ ಇಲಾಖೆ ವಿದ್ಯಾರ್ಥಿಗೆ ಮಾಹಿತಿ ನೀಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

“ಆದಾಯ ತೆರಿಗೆ ಮತ್ತು ಜಿಎಸ್‌ಟಿಯಿಂದ ನೋಟಿಸ್ ಬಂದಾಗ ನನಗೆ ವಿಷಯ ತಿಳಿಯಿತು. ನನ್ನ ಪಾನ್ ಕಾರ್ಡ್ ಮೂಲಕ ಕಂಪನಿಯೊಂದನ್ನು ನೋಂದಾಯಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಕಂಪನಿಯೊಂದು 2021ರಿಂದ ಕಾರ್ಯನಿರ್ವಹಿಸುತ್ತಿದೆ. ಗ್ವಾಲಿಯರ್‌ನಲ್ಲಿ ನಾನು ಕಾಲೇಜು ವಿದ್ಯಾರ್ಥಿಯಾಗಿದ್ದೇನೆ. ಇದು ಹೇಗೆ ನಡೆದಿದೆ ಎಂಬ ಬಗ್ಗೆ ನನಗೆ ತಿಳಿದಿಲ್ಲ. ನನ್ನ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಂಡು ವಹಿವಾಟು ಮಾಡಲಾಗಿದೆ” ಎಂದು ಗ್ವಾಲಿಯರ್ ನಿವಾಸಿ ಪ್ರಮೋದ್ ಕುಮಾರ್ ದಂಡೋಟಿಯಾ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ: ಬೆಂಬಲ ಕೋರಿ ‘ಜಾಗೃತ ಕರ್ನಾಟಕ’ಕ್ಕೆ ಪತ್ರ

“ಆದಾಯ ತೆರಿಗೆ ಇಲಾಖೆಯಿಂದ ಮಾಹಿತಿ ಪಡೆದ ಕೂಡಲೇ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡಿದ್ದೇನೆ. ಈ ಬಗ್ಗೆ ಹಲವು ಬಾರಿ ಪೊಲೀಸರಿಗೆ ದೂರು ನೀಡಲು ಯತ್ನಿಸಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಶುಕ್ರವಾರ ಮತ್ತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ದೂರು ದಾಖಲಿಸಿದೆ” ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಿಯಾಜ್ ಕೆಎಂ ಮಾತನಾಡಿ, “ಬ್ಯಾಂಕ್ ಖಾತೆಯಿಂದ ₹46 ಕೋಟಿಗೂ ಹೆಚ್ಚು ಮೊತ್ತದ ವಹಿವಾಟನ್ನು ನಡೆಸಲಾಗಿದೆ ಎಂದು ಯುವಕನೊಬ್ಬ ದೂರು ನೀಡಿದ್ದಾರೆ. ಅರ್ಜಿ ಸ್ವೀಕರಿಸಿದ್ದೇವೆ. ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಲಾಯಿತು. ಆಗ ಪಾನ್ ಕಾರ್ಡ್ ದುರ್ಬಳಕೆಯಾಗಿರುವುದು ಕಂಡು ಬಂದಿದೆ. ಆ ಪಾನ್ ಕಾರ್ಡ್ ಅನ್ನು ಬಳಸಿಕೊಂಡು ಕಂಪನಿಯೊಂದನ್ನು ನೋಂದಾಯಿಸಲಾಗಿದೆ. ಆ ಮೂಲಕ ದೊಡ್ಡ ಪ್ರಮಾಣದ ವಹಿವಾಟನ್ನು ನಡೆಸಿರುವುದು ಪತ್ತೆಯಾಗಿದೆ. ಇಡೀ ಪ್ರಕರಣದ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...