ಮಧ್ಯಪ್ರದೇಶ | ಕೆರೆ ಸ್ವಚ್ಛತೆ ವೇಳೆ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆ

Date:

ಸ್ವಚ್ಛತಾ ಅಭಿಯಾನದ ಅಡಿ ಕೆರೆಯನ್ನು ಸ್ವಚ್ಛಗೊಳಿಸುವಾಗ ಕೆರೆಯಲ್ಲಿ ನೂರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಛಾತರ್‌ಪುರ ಜಿಲ್ಲೆಯ ಬಿಜವಾರ್ ಪಟ್ಟಣದಲ್ಲಿ ನಡೆದಿದೆ. ಈ ಚೀಟಿಗಳು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುರ್ಬಳಕೆ ಆಗಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗುತ್ತಿದೆ.

ಬಿಜವಾರ್ ಪಟ್ಟಣದ ರಾಜಾತಲಾಬ್ ಕೆರೆಯಲ್ಲಿ ಸೊಮವಾರ ಸ್ವಚ್ಛತಾ ಅಭಿಯಾನ ನಡೆಸಲಾಗಿತ್ತು. ಈ ವೇಳೆ, ನೀರಿನಲ್ಲಿ ಚೀಲವೊಂದು ತೇಲುತ್ತಿತ್ತು. ಅದನ್ನು ಗಮನಿಸಿದ ಪೌರಕಾರ್ಮಿಕರು ಚೀಲವನ್ನು ತೆರೆದು ನೋಡಿದಾಗ, ಅದರಲ್ಲಿ ಸುಮಾರು 500 ಮತದಾರ ಗುರುತಿನ ಚೀಟಿಗಳು ಪತ್ತೆಯಾಗಿವೆ. ಆ ಮತ ಚೀಟಿಗಳು ಪಟ್ಟಣದ ವಾರ್ಡ್‌ ನಂ.15ಕ್ಕೆ ಸಂಬಂಧಿಸಿವೆ ಎಂದು ವರದಿಯಾಗಿದೆ.

ಇವು ನೈಜ ಗುರುತಿನ ಚೀಟಿಗಳು. ಆದರೆ, ಮತದಾರರಿಗೆ ವಿತರಣೆಯಾಗದೇ ಉಳಿದುಹೋಗಿದ್ದವು. ಈ ಚೀಟಿಗಳು ಮತದಾರರಿಗೆ ತಲುಪಿಲ್ಲ ಎನ್ನಲಾಗಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಈ ಘಟನೆಯು ಇತ್ತೀಚೆಗೆ ಕಾಂಗ್ರೆಸ್‌ ಮತ್ತು ವಿಪಕ್ಷಗಳು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಆರೋಪಿಸುತ್ತಿರುವ ‘ವೋಟ್‌ ಚೋರಿ’ (ಮತಗಳವು) ಆರೋಪಕ್ಕೆ ಮತ್ತಷ್ಟು ಶಕ್ತಿ ತುಂಬಿಸಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ವೋಟ್ ಚೋರ್ – ಗಾದಿ ಚೋಡ್’ ಎಂದಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

“500ಕ್ಕೂ ಹೆಚ್ಚು ಮತದಾರ ಗುರುತಿನ ಚೀಟಿಗಳು ಕೆರೆಯ ಪಾಲಾಗಲು ಹೇಗೆ ಸಾಧ್ಯ? ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಘಟನೆ ವಿರುದ್ಧ ರಾಜ್ಯವ್ಯಾಪಿ ಆಂದೋಲನ ಕೈಗೊಳ್ಳಲಾಗುತ್ತದೆ” ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಗನ್ ಯಾದವ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...