ಮಧ್ಯಪ್ರದೇಶ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟಂಬಕ್ಕೊಂದು ಉದ್ಯೋಗ: ಸಿಎಂ ಚೌಹಾಣ್

Date:

ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ಚುನಾವಣೆ ನಡೆಯಲಿದೆ. ಅಲ್ಲಿ ಅಪರೇಷನ್ ಕಮಲಕ್ಕೆ ಬಲಿಯಾಗಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌, ಈ ಬಾರಿಯ ಚುನಾವಣೆಯಲ್ಲಿ ಹಲವು ಗ್ಯಾರಂಟಿಗಳನ್ನು ಜನರ ಮುಂದಿಟ್ಟಿದೆ. ಕಾಂಗ್ರೆಸ್‌ ಗ್ಯಾರಂಟಿಗಳಿಗೆ ಬೆದರಿರುವ ಆಡಳಿತಾರೂಢ ಬಿಜೆಪಿ ಕೂಡ ಹಲವಾರು ಭರವಸೆಗಳನ್ನು ನೀಡಲು ಮುಂದಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ರಾಜ್ಯದ ಪತ್ರಿ ಮನೆಗೆ ತಲಾ ಒಂದು ಉದ್ಯೋಗ ನೀಡುವುದಾಗಿ ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿದ್ದಾರೆ.

2020ರ ಮಾರ್ಚ್‌ನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಅವರ 22 ಬೆಂಬಲಿತ ಶಾಸಕರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಪರಿಣಾಮ, ಕಾಂಗ್ರಸ್‌ ಅಧಿಕಾರ ಕಳೆದುಕೊಂಡಿತು. ಬಿಜೆಪಿ ಅಧಿಕಾರಕ್ಕೇರಿತು. ಆಪರೇಷನ್ ಕಮಲದ ಮೂಲಕ ಅಧಿಕಾರ ಪಡೆದ ಬಿಜೆಪಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದೆ. ಆದರೆ, ‘ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ನಿರುದ್ಯೋಗ ಹೆಚ್ಚಾಗಿದೆ’ ಎಂದು ಕಾಂಗ್ರೆಸ್‌ ಆರೋಪಿಸುತ್ತಲೇ ಇದೆ.

ಈ ನಡುವೆ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಮನೆಯಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಚೌಹಾಣ್‌ ಭರವಸೆ ನೀಡಿದ್ದಾರೆ. ಅವರ ಮಾತುಗಳಿಗೆ ವಿರೋಧ ವ್ಯಕ್ತವಾಗಿದ್ದು, ಅಧಿಕಾರದಲ್ಲಿದ್ಧಾಗಲೇ ಉದ್ಯೋಗ ಕೊಡದವರು, ಮತ್ತೊಮ್ಮೆ ಅಧಿಕಾರಕ್ಕೆ ಬಂದು ಉದ್ಯೋಗ ಕೊಡುತ್ತಾರೆಯೇ ಎಂಬ ವ್ಯಂಗ್ಯದ ಮಾತುಗಳು ಕೇಳಿಬಂದಿವೆ. ಕುತೂಹಲಕಾರಿ ಸಂಗತಿ ಎಂದರೆ, ಕಳೆದ ಮೂರು ವರ್ಷಗಳಲ್ಲಿ ಕೇವಲ 21 ಮಂದಿಗೆ ಮಾತ್ರ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದೆಹಲಿಯ ಬಡಗಿಗಳೊಂದಿಗೆ ಬೆರೆತು ಕೆಲಸ ಮಾಡಿ, ಕಷ್ಟಸುಖ ವಿಚಾರಿಸಿದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಅಲಿರಾಜಪುರದಲ್ಲಿ ನಡೆದ ಸಭೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿದ್ದು, “ನಾನು ರಾಜ್ಯದ ಜನರ ತೊಂದರೆಗಳನ್ನು ತೊಡೆದು ಹಾಕುತ್ತೇನೆ. ಮತ್ತೊಮ್ಮೆ ನಾವು ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುತ್ತೇವೆ. ಉದ್ಯೋಗ ಹರಸಿ ಯಾರೂ ವಲಸೆ ಹೋಗುವ ಪರಿಸ್ಥಿತಿ ಇರುವುದಿಲ್ಲ” ಎಂದು ಹೇಳಿದ್ದಾರೆ.

“ಸ್ವ-ಸಹಾಯ ಗುಂಪುಗಳು, ಉದ್ಯಮ ಕ್ರಾಂತಿ ಯೋಜನೆಗಳ ಮೂಲಕ ಉದ್ಯೋಗ ನೀಡಲಾಗುತ್ತದೆ. ಖಾಲಿ ಇರುವ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕ ಕೆಕೆ ಮಿಶ್ರಾ, “ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಈಗ ಅವರು ಭವಿಷ್ಯದಲ್ಲಿ ಉದ್ಯೋಗ ನೀಡುವ ಬಗ್ಗೆ ಹೇಳುತ್ತಿದ್ದಾರೆ. ಮತ್ತೊಮ್ಮೆ ನಿರುದ್ಯೋಗಿ ಯುವಕರನ್ನು ವಂಚಿಸಲು ಅವರು ಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಅಂದಹಾಗೆ, ಮಧ್ಯಪ್ರದೇಶದಲ್ಲಿ 39 ಲಕ್ಷ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಇವರ ಪೈಕಿ ಕೇವಲ 21 ಮಂದಿಗೆ ಮಾತ್ರ ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಮತ್ತು ಅರೆ ಸರ್ಕಾರಿ ಉದ್ಯೋಗಗಳನ್ನು ನೀಡಲಾಗಿದೆ. ಈ ಬಗ್ಗೆ ಸ್ವತಃ ಮಧ್ಯಪ್ರದೇಶದ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವ ಯಶೋಧರ ರಾಜೇ ಸಿಂಧಿಯಾ ಅವರು ಮಾರ್ಚ್‌ನಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೆ, 2022ರ ಏಪ್ರಿಲ್‌ ವೇಳೆಗೆ 25.8 ಲಕ್ಷ ಮಂದಿ ನಿರುದ್ಯೋಗಿಗಳಿದ್ದರು. ಈಗ ಅವರ ಸಂಖ್ಯೆ 39 ಲಕ್ಷಕ್ಕೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...