ಮಧ್ಯಪ್ರದೇಶ | ಹಿಜಾಬ್ ವಿವಾದಕ್ಕೆ ಶಾಲೆಯೊಂದು ಬಲಿ; ಮೂವರು ಶಿಕ್ಷಕರ ಬಂಧನ

Date:

ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪದ ಮೇಲೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೇ ತಿಂಗಳ ಕೊನೆಯಲ್ಲಿ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ 18 ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದ ಪೋಸ್ಟರ್‌ವೊಂದು ವೈರಲ್ ಆಗಿತ್ತು. ಪೋಸ್ಟರ್‌ನಲ್ಲಿದ್ದ ಕೆಲವು ವಿದ್ಯಾರ್ಥಿನಿಯರು ಸ್ಕಾರ್ಫ್‌ ಧರಿಸಿದ್ದರು. ಅದನ್ನು ಮುಸ್ಲಿಮೇತರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆ ಬಳಿಕ, ವಿವಾದ ಮುನ್ನೆಲೆಗೆ ಬಂದಿತ್ತು.

ಹಿಂದುತ್ವವಾದಿ ಕೋಮು ಸಂಘಟನೆಗಳು ಧಾರ್ಮಿಕ ಮತಾಂತರದ ನಡೆಯುತ್ತಿದೆ ಎಂಬ ಆರೋಪಗಳನ್ನು ಮಾಡಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು. ಆದರೆ, ಶಾಲೆಯಲ್ಲಿ ಸ್ಕಾರ್ಫ್‌ ಧರಿಸುವುದು ಸಮವಸ್ತ್ರದ ಭಾಗವಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಿಲ್ಲ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿರುವುದಾಗಿ ‘ಟಿಐಇ‘ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ, ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲೆ ಅಫ್ಶಾ ಶೇಖ್, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರನ್ನು ಒಳಗೊಂಡ ಆರು-ಏಳು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ಸಮುದಾಯ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು) ಮತ್ತು 506 (ಅಪರಾಧ ಬೆದರಿಕೆ) ಹಾಗೂ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ-2021ರ ನಿಬಂಧನೆಗಳ ಅಡಿಯಲ್ಲಿ ದಾಮೋಹ್ ಪೊಲೀಸರು ಜೂನ್ 7 ರಂದು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: 2002ರ ಗುಜರಾತ್ ಗಲಭೆ | ಬೆಸ್ಟ್ ಬೇಕರಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಖುಲಾಸೆ

ಜೂನ್ 2 ರಂದು, ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅವರಿಗೆ ಲಭ್ಯವಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಶಾಲೆಯು ಅನಧಿತ ಕಟ್ಟಡವೆಂದು ಪರಿಗಣಿಸಿ ಕಟ್ಟದ ಭಾಗಗಳನ್ನು ಕಡವುವುದಾಗಿ ಸ್ಥಳೀಯ ಪುರಸಭೆ ಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.

ಈ ಶಾಲೆಯನ್ನು 2010ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿತ್ತು. ಸುಮಾರು 1,200 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಾರ್ಮಿಕ ಕುಟುಂಬಗಳ ಹಿನ್ನೆಲೆ ಹೊಂದಿದ್ದಾರೆ. ಅವರ ಪೋಷಕರು ಕೂಲಿಗಳು, ರೈತರು ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...