ನ್ಯಾಯಮೂರ್ತಿ ಹೆಸರಿನಲ್ಲಿ 50 ಲಕ್ಷ ರೂ. ಲಂಚ ಆರೋಪ: ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಜಡ್ಜ್‌

Date:

ತಮಗೆ ಅನುಕೂಲಕರ ಆದೇಶ ನೀಡುವ ಸಲುವಾಗಿ ಹಿರಿಯ ವಕೀಲರೊಬ್ಬರು ಕಕ್ಷಿದಾರರಿಂದ 50 ಲಕ್ಷ ರೂ. ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಅವರು ಪ್ರಕರಣವೊಂದರ ವಿಚಾರಣೆಯಿಂದ ಹಿಂದೆ ಸರಿದ ಘಟನೆ ನಡೆದಿದೆ. ಅಷ್ಟೇ ಅಲ್ಲದೆ, ಈ ವಿಷಯದ ಸತ್ಯಾಸತ್ಯತೆ ಅರಿಯಲು ಹೈಕೋರ್ಟ್‌ನ ಜಾಗೃತ ದಳದ ತನಿಖೆಗೆ ಆದೇಶಿಸಿದ್ದಾರೆ.

ಸಿಬಿಐ ಪ್ರಕರಣಗಳ 12ನೇ ಹೆಚ್ಚುವರಿ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಎನ್. ಗಣೇಶ್ ಅಗರ್ವಾಲ್ ಮತ್ತು ನರೇಶ್ ಪ್ರಸಾದ್ ಅಗರ್ವಾಲ್ ಎಂಬುವರು ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಲಂಚದ ಆರೋಪ ಪ್ರಸ್ತಾಪವಾಗಿದೆ.

​ಫೆಬ್ರವರಿ 5 ರಂದು ಈ ಅರ್ಜಿ ವಿಚಾರಣೆಗೆ ಬಂದಾಗ, ಕೇಂದ್ರ ಕಾನೂನು ಸಚಿವಾಲಯದಿಂದ ಹೈಕೋರ್ಟ್ ರಿಜಿಸ್ಟ್ರಿಗೆ ಬಂದಿದ್ದ ಪತ್ರವೊಂದನ್ನು ನ್ಯಾಯಮೂರ್ತಿ ನಿರ್ಮಲ್ ಕುಮಾರ್ ಅವರು ಉಲ್ಲೇಖಿಸಿದರು. ಈ ಪತ್ರದೊಂದಿಗೆ ‘ಅಖಿಲ ಭಾರತ ವಕೀಲರ ನ್ಯಾಯ ಒಕ್ಕೂಟ’ ನೀಡಿದ ಮನವಿಯ ಪ್ರತಿಯನ್ನೂ ಲಗತ್ತಿಸಲಾಗಿತ್ತು.

ಆ ಪತ್ರದಲ್ಲಿ, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲರೊಬ್ಬರು ತಮ್ಮ ಕಕ್ಷಿದಾರರಿಂದ 50 ಲಕ್ಷ ರೂ. ಹಣವನ್ನು ಪಡೆದಿದ್ದಾರೆ. ಈ ಹಣವನ್ನು ನಿಮ್ಮ ಗೌರವಕ್ಕೆ (ನ್ಯಾಯಮೂರ್ತಿಗಳಿಗೆ) ನೀಡಬೇಕೆಂದು ಹೇಳಿ ಪಡೆಯಲಾಗಿದೆ. ಆದರೆ, ಹಣ ಸಂದಾಯವಾಗಿದ್ದರೂ, ಇಲ್ಲಿಯವರೆಗೂ ಯಾವುದೇ ಆದೇಶ ಬಂದಿಲ್ಲ. ಆದ್ದರಿಂದ, ದಯವಿಟ್ಟು ಕಕ್ಷಿದಾರರ ಪರವಾಗಿ ಸೂಕ್ತ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಜರುಗಿಸಬೇಕು,” ಎಂದು ಎಐಎಲ್‌ಎಜೆ ಕಾರ್ಯದರ್ಶಿ ಸಹಿಯುಳ್ಳ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಈ ಪತ್ರವನ್ನು ಸಿಬಿಐ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಶ್ರೀನಿವಾಸನ್ ಮತ್ತು ಮೇಲ್ಮನವಿದಾರರ ಪರ ಹಿರಿಯ ವಕೀಲ ಮುರಳಿ ಕುಮಾರನ್ ಅವರ ಗಮನಕ್ಕೆ ತರಲಾಯಿತು. ​ಆರೋಪಗಳನ್ನು ನಿರಾಕರಿಸಿದ ವಕೀಲ ಮುರಳಿ ಕುಮಾರನ್, ಪತ್ರದಲ್ಲಿರುವ ಆರೋಪಗಳು ಸುಳ್ಳು ಮತ್ತು ತಾವು ಯಾವುದೇ ತನಿಖೆಗೆ ಸಹಕರಿಸಲು ಸಿದ್ಧವಿರುವುದಾಗಿ ತಿಳಿಸಿದರು. ಇತ್ತ ಸಿಬಿಐ ಪರ ವಕೀಲ ಶ್ರೀನಿವಾಸನ್ ವಾದ ಮಂಡಿಸಿ, “ಇಂತಹ ಪ್ರಾತಿನಿಧ್ಯಗಳನ್ನು ಪುರಸ್ಕರಿಸಬಾರದು. ಇದು ನ್ಯಾಯಾಲಯದ ಘನತೆಗೆ ಧಕ್ಕೆ ತರುತ್ತದೆ. ಇಂತಹ ಸುಳ್ಳು ಆರೋಪ ಮಾಡುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಕೋರಿದರು.

ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ನಿರ್ಮಲ್ ಕುಮಾರ್, “ಸಂಘಟನೆಯ ಪತ್ರದಲ್ಲಿ ನಿರ್ದಿಷ್ಟ ಆರೋಪಗಳಿರುವುದರಿಂದ, ಈ ವಿಷಯವನ್ನು ಹೈಕೋರ್ಟ್‌ನ ಜಾಗೃತ ದಳಕ್ಕೆ ವಹಿಸುವುದು ಸೂಕ್ತ. ಹೀಗಾಗಿ, ಈ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಲು ಒಲವು ಹೊಂದಿಲ್ಲ” ಎಂದು ತಿಳಿಸಿದರು.

​ಅಲ್ಲದೆ, ಈ ಪ್ರಕರಣವನ್ನು ಸೂಕ್ತ ಪೀಠದ ಮುಂದೆ ನಿಗದಿಪಡಿಸಲು ಮತ್ತು ಜಾಗೃತ ದಳದಿಂದ ಶೋಧ ನಡೆಸಿ ಕ್ರಮ ಕೈಗೊಳ್ಳಲು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರುವುದು ಸೂಕ್ತ ಎಂದು ಅಭಿಪ್ರಾಯಪಟ್ಟು, ವಿಚಾರಣೆಯಿಂದ ನ್ಯಾಯಮೂರ್ತಿಗಳು ಹಿಂದೆ ಸರಿದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...