ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

Date:

ಗಾಯಕ ಟಿಎಂ ಕೃಷ್ಣ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ’ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ನವೆಂಬರ್ 19) ನಿರ್ಬಂಧಿಸಿದೆ. ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡದಂತೆ ‘ದಿ ಹಿಂದೂ ಪತ್ರಿಕೆಗೆ’ ನಿರ್ಬಂಧಿಸಿದೆ.

ದಿ ಹಿಂದೂ ಪತ್ರಿಕೆ 2005ರಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲು ಆರಂಭಿಸಿತು. ಚೆನ್ನೈ ಮ್ಯೂಸಿಕ್ ಅಕಾಡೆಮಿ ನೀಡುವ ಸಂಗೀತ ಕಲಾನಿಧಿ ಪಶಸ್ತಿ ಗೆದ್ದವರಿಗೆ ಈ ನಗದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ವರ್ಷ ಕರ್ನಾಟಿಕ್ ಸಂಗೀತ ಗಾಯಕ ಟಿಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಪ್ರಶಸ್ತಿ ಲಭಿಸಿದೆ. ಈ ನಿಟ್ಟಿನಲ್ಲಿ ದಿ ಹಿಂದೂ ಪತ್ರಿಕೆ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ಘೋಷಿಸಿದೆ.

ಎಂಎಸ್ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ಶ್ರೀನಿವಾಸನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

ಈ ಹಿಂದೆ ಟಿಎಂ ಕೃಷ್ಣ ಅವರು ಎಂ ಎಸ್ ಸುಬ್ಬುಲಕ್ಷ್ಮಿ ಅವರನ್ನು ಟೀಕಿಸಿದ್ದರು. ಹಾಗಾಗಿ ನನ್ನ ಅಜ್ಜಿಯನ್ನು ನಿರಂತರವಾಗಿ ಟೀಕಿಸುವವರಿಗೆ ಪ್ರಶಸ್ತಿ ನೀಡಬಾರದು ಎಂಬುದು ಶ್ರೀನಿವಾಸನ್ ವಾದವಾಗಿದೆ.

ಈ ಅರ್ಜಿ ಪುರಸ್ಕರಿಸಿದ ಮದ್ರಾಸ್ ಹೈಕೋರ್ಟ್ “ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಪ್ರಶಸ್ತಿ ನೀಡುವುದು ಅವರ ಆಶಯಕ್ಕೆ ವಿರುದ್ಧವಾಗಿದೆ” ಎಂದು ಅಭಿಪ್ರಾಯಿಸಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದನ್ನು ಮುಂದುವರಿಸಬಾರದು ಎಂದು ಆದೇಶಿಸಿದೆ.

ಹಾಗೆಯೇ ಶ್ರೀನಿವಾಸನ್ ಅರ್ಜಿ ತಿರಸ್ಕರಿಸುವಂತೆ ಕೋರಿ ಸಂಗೀತ ಅಕಾಡೆಮಿ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಆಕೆಯ ಇಚ್ಛೆಯ ಬಗ್ಗೆ ತಿಳಿದಿರುವ ಶ್ರೀನಿವಾಸನ್‌ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ಪೀಠ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...