ಯಾವುದೇ ಸಿದ್ಧಾಂತವನ್ನು ನಿರ್ಮೂಲನೆ ಮಾಡಲು ಸಭೆ ನಡೆಸುವ ಹಕ್ಕು ಯಾರಿಗೂ ಇಲ್ಲ: ಮದ್ರಾಸ್ ಹೈಕೋರ್ಟ್

Date:

ಯಾವುದೇ ಸಿದ್ಧಾಂತ ನಿರ್ಮೂಲನೆ ಮಾಡಲು ಸಭೆ ನಡೆಸುವ ಹಕ್ಕು ದೇಶದಲ್ಲಿ ಯಾರಿಗೂ ಇಲ್ಲ ಎಂದು ಇತ್ತೀಚಿಗೆ ತಿಳಿಸಿರುವ ಮದ್ರಾಸ್ ಹೈಕೋರ್ಟ್ “ದ್ರಾವಿಡ ಸಿದ್ಧಾಂತ ನಿರ್ಮೂಲನೆ” ಕುರಿತು ಸಮಾವೇಶ ನಡೆಸಲು ಅನುಮತಿ ನೀಡಲು ನಿರಾಕರಿಸಿತು.

“ಸನಾತನ ಧರ್ಮದ ನಿರ್ಮೂಲನೆ” ಕುರಿತು ಈ ಹಿಂದೆ ನಡೆದ ಸಮಾವೇಶದಲ್ಲಿ ಉದ್ರೇಕಕಾರಿ ಭಾಷಣ ಮಾಡಿದ ಡಿಎಂಕೆ ಸದಸ್ಯರ ವಿರುದ್ಧ ಕ್ರಮಕೈಗೊಳ್ಳದ ತಮಿಳುನಾಡು ಪೊಲೀಸರನ್ನು ಕೂಡ ನ್ಯಾಯಾಲಯ ಇದೇ ವೇಳೆ ದೂಷಿಸಿದ್ದು ಪೊಲೀಸರ ನಿಷ್ಕ್ರಿಯತೆಯನ್ನು ʼಕರ್ತವ್ಯ ಲೋಪʼ ಎಂದು ಅದು ಬಣ್ಣಿಸಿದೆ.

ʼಬಹು ಸಿದ್ಧಾಂತಗಳ ಅಸ್ತಿತ್ವʼ ಭಾರತದ ಅಸ್ಮಿತೆಯ ಭಾಗವಾಗಿದ್ದು ಅಧಿಕಾರದಲ್ಲಿರುವವರು ವಿಭಜಕ ವಿಚಾರ ಪ್ರಚಾರ ಮಾಡುವುದನ್ನು ತಡೆಯಬೇಕು ಎಂದು ನ್ಯಾಯಮೂರ್ತಿ ಜಿ ಜಯಚಂದ್ರನ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈನಲ್ಲಿ “ದ್ರಾವಿಡ ಸಿದ್ಧಾಂತಗಳ ನಿರ್ಮೂಲನೆ” ಕುರಿತು ಸಭೆ ನಡೆಸಲು ಪೊಲೀಸರ ಅನುಮತಿ ಕೋರಿ ಮಗೇಶ್ ಕಾರ್ತಿಕೇಯನ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು.

“ಸಾರ್ವಜನಿಕರಲ್ಲಿ ಕೆಟ್ಟ ಇಚ್ಛೆಯನ್ನು ಉಂಟುಮಾಡುವ ವಿಚಾರಗಳನ್ನು ಪ್ರಚಾರ ಮಾಡಲು ನ್ಯಾಯಾಲಯಗಳು ಸಹಾಯ ಮಾಡುತ್ತವೆ ಎಂದು ಯಾರೂ ನಿರೀಕ್ಷಿಸುವಂತಿಲ್ಲ. ಸನಾತನ ಧರ್ಮ ನಿರ್ಮೂಲನೆಗಾಗಿ ನಡೆದ ಸಭೆಯಲ್ಲಿ ಆಡಳಿತ ಪಕ್ಷದ ಕೆಲವು ಸದಸ್ಯರು ಮತ್ತು ಸಚಿವರು ಭಾಗವಹಿಸಿದ್ದು ಅವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಪೊಲೀಸರ ಕರ್ತವ್ಯ ಲೋಪವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಅದಾನಿ ಹಿಂಡನ್‌ಬರ್ಗ್ ಪ್ರಕರಣ: ನ. 8ಕ್ಕೆ ಅಂತಿಮ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ

ಅರ್ಜಿದಾರರ ಮನವಿಯನ್ನು ಅಂಗೀಕರಿಸಿದರೆ, ಅದು ಪ್ರಮಾಣವಚನ ಸ್ವೀಕರಿಸಿದ ಕೆಲವರು ವಚನಭ್ರಷ್ಟರಾಗಿ ಹಿಡಿದಿರುವ ಮಾರ್ಗದಿಂದ ಈಗಾಗಲೇ ಬೇಸತ್ತಿರುವ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ. ದ್ರಾವಿಡ ಸಿದ್ಧಾಂತ ನಿರ್ಮೂಲನೆ ಮಾಡಲು ಸಮಾವೇಶ ನಡೆಸುವುದಕ್ಕಾಗಿ ಅರ್ಜಿದಾರರಿಗೆ ಅನುಮತಿ ನೀಡುವ ಮೂಲಕ ಈ ನ್ಯಾಯಾಲಯ ಅಪರಾಧ ಎಸಗದು ಎಂದು ನ್ಯಾಯಮೂರ್ತಿ ಜಯಚಂದ್ರನ್ ಹೇಳಿದರು.

ಅಧಿಕಾರ ಹಿಡಿದವರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸಿದ್ಧಾಂತ, ಜಾತಿ ಮತ್ತು ಧರ್ಮದ ಮೂಲಕ ಜನರನ್ನು ವಿಭಜಿಸುವ ಯಾವುದೇ ಕೆಲಸದಿಂದ ದೂರವಿರಬೇಕು ಎಂದು ನ್ಯಾಯಾಧೀಶರು ಹೇಳಿದರು.

ಅಧಿಕಾರದಲ್ಲಿರುವ ವ್ಯಕ್ತಿ ಭಾಷಣದ ಅಪಾಯ ಅರಿತು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸಿದ್ಧಾಂತ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ದೃಷ್ಟಿಕೋನಗಳನ್ನು ಪ್ರಚಾರ ಮಾಡುವುದರಿಂದ ತಮ್ಮನ್ನು ತಾವು ದೂರವಿರುವಂತೆ ನೋಡಿಕೊಳ್ಳಬೇಕು. ಬದಲಿಗೆ ಅವರು ಆರೋಗ್ಯ, ಭ್ರಷ್ಟಾಚಾರ, ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ ಅನಿಷ್ಟಗಳು, ಆರೋಗ್ಯಕ್ಕೆ ಹಾನಿಕಾರಕವಾದ ಮಾದಕ ಪಾನೀಯಗಳು ಮತ್ತು ಮಾದಕ ದ್ರವ್ಯಗಳ ನಿರ್ಮೂಲನೆ ಮಾಡುವತ್ತ ಗಮನಹರಿಸಬೇಕೆಂದು ಎಂದು ನ್ಯಾಯಾಧೀಶರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...