ಜಾರಿ ನಿರ್ದೇಶನಾಲಯ ವಿರುದ್ಧ ಮದ್ರಾಸ್ ಹೈಕೋರ್ಟ್ ತರಾಟೆ

Date:

ಕಾನೂನು ಜಾರಿ ನಿರ್ದೇಶನಾಲಯ ತನ್ನ ಇಚ್ಛೆಯಂತೆ ಎಲೆಂದರಲ್ಲಿ ದಾಳಿ ಮಾಡುವ “ಅಡ್ಡಾಡುವ ಶಸ್ತ್ರ ಅಥವಾ ಡ್ರೋನ್ ಅಲ್ಲ” ಅಥವಾ ತನ್ನ ಗಮನಕ್ಕೆ ಬಂದ ಪ್ರತಿಯೊಂದು ವಿಚಾರಗಳ ತನಿಖೆ ನಡೆಸುವ “ಸೂಪರ್ ಪೊಲೀಸ್” ಕೂಡಾ ಅಲ್ಲ ಎಂದು ಮದ್ರಾಸ್ ಹೈಕೋರ್ಟ್ ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ. 901 ಕೋಟಿ ರೂಪಾಯಿ ನಿಶ್ಚಿತ ಠೇವಣಿ ಖಾತೆಯನ್ನು ಅಮಾನತು ಮಾಡಿ ನಿರ್ದೇಶನಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವ ವೇಳೆ ಕೋರ್ಟ್ ಈ ಅಭಿಪ್ರಾಯಕ್ಕೆ ಬಂದಿದೆ.

ನ್ಯಾಯಮೂರ್ತಿಗಳಾದ ಎಂ ಎಸ್ ರಮೇಶ್ ಮತ್ತು ವಿ.ಲಕ್ಷ್ಮೀನಾರಾಯಣನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಪ್ರಕರಣದ ಬಗ್ಗೆ ತೀರ್ಪು ನೀಡಿ, ಹಣ ದುರುಪಯೋಗ ತಡೆ ಕಾಯ್ದೆ (ಪಿಎಂಎಲ್ಎ) ಅನ್ವಯ ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರವನ್ನು ದೃಢಪಟ್ಟ ಅಪರಾಧ ಎಂದು ಪರಿಗಣಿಸಲಾದ ಪ್ರಕರಣಗಳಲ್ಲಿ ಮತ್ತು ಅಪರಾಧ ಕೃತ್ಯದಿಂದ ಬಂದ ಹಣ ಕಂಡುಬಂದಾಗ ಮಾತ್ರ ಚಲಾಯಿಸಲು ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದೆ. ಪಿಎಂಎಲ್ಎ ಪ್ರಕಾರ, ದೃಢಪಟ್ಟ ಅಪರಾಧ ಇರುವುದು ಅಗತ್ಯ ಎಂದು ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ?: ಅನನ್ಯ ಪ್ರತಿಭೆಯ ಅಪ್ಪಟ ಕಲಾವಿದ ಬಾಲಕೃಷ್ಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೃಢಪಟ್ಟ ಅಪರಾಧ ಇಲ್ಲದ ಸಂದರ್ಭದಲ್ಲಿ, ಪಿಎಂಎಲ್ಎ ಅನ್ವಯವಾಗುವುದಿಲ್ಲ ಎಂದು ಹೇಳಿದೆ. ಕಾನೂನು ಜಾರಿ ನಿರ್ದೇಶನಾಲಯದ ಪಾತ್ರವನ್ನು ಒಂದು ಹಡಗು ಕಾರ್ಯ ನಿರ್ವಹಿಸಲು ನೌಕೆಯ ತಳದಲ್ಲಿರುವ ಸಿಡಿಗುಂಡಿಗೆ ನ್ಯಾಯಪೀಠ ಹೋಲಿಸಿದೆ. ನೌಕೆ ಒಂದು ದೃಢಪಟ್ಟ ಅಪರಾಧ ಹಾಗೂ ಅಪರಾಧ ಕೃತ್ಯದಿಂದ ಬಂದ ಹಣದಂತೆ ಎಂದು ವಿವರಿಸಿದೆ.

ಆರ್‌ಕೆಎಂ ಪವರ್ಜೆನ್ ಪ್ರೈವೆಟ್ ಲಿಮಿಟೆಡ್‌ನ ನಿಶ್ಚಿತ ಠೇವಣಿ ಖಾತೆಯನ್ನು ಅಮಾನತುಗೊಳಿಸಿ ಕಾನೂನು ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಜನವರಿ 31ರ ಆದೇಶ ರದ್ದುಪಡಿಸುವಂತೆ ಕೋರಿ ಕಂಪನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಹಿರಿಯ ವಕೀಲ ಬಿ.ಕುಮಾರ್ ಕಂಪನಿ ಪರ ವಾದ ಮಂಡಿಸಿದ್ದರು. ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಕಡೆಗಣಿಸಿ ನಿರ್ದೇಶಾನಲಯ ಕ್ರಮ ಕೈಗೊಂಡಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆರ್‌ಕೆಎಂಪಿಗೆ 2006ರಲ್ಲಿ ಫತೇಪುರ ಪೂರ್ವ ಕಲ್ಲಿದ್ದಲು ಗಣಿ ಹಂಚಿಕೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...