ಉತ್ತರ ಪ್ರದೇಶ | ಇಂದಿನಿಂದ ಮಹಾಕುಂಭ ಮೇಳ ಆರಂಭ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭಗೊಂಡಿದ್ದು, ಸಾಧು–ಸಂತರು ಸೇರಿ ದೇಶದ ವಿವಿಧ ಭಾಗದ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಫೆಬ್ರುವರಿ 26ರವರೆಗೆ 45 ದಿನ ನಡೆಯುವ ಮೇಳದಲ್ಲಿ ದೇಶ–ವಿದೇಶಗಳಿಂದ ಭಕ್ತರು ಭಾಗವಹಿಸಲಿದ್ದಾರೆ. ಪ್ರಯಾಗ್ರಾಜ್‌ನ ತ್ರಿವೇಣಿ ಸಂಗಮದ ಆಸುಪಾಸು 10 ಸಾವಿರ ಎಕರೆಯಷ್ಟು ವಿಸ್ತೀರ್ಣದಲ್ಲಿ ಸಿದ್ಧತೆ ಕೈಗೊಳ್ಳಲಾಗಿದ್ದು, 25 ವಲಯಗಳನ್ನಾಗಿ ವಿಂಗಡಿಸಲಾಗಿದೆ.

ಈ ಬಾರಿ ನಡೆಯುತ್ತಿರುವುದು 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳ. ಹಿಂದಿನ ಬಾರಿ ಕುಂಭ ಮೇಳದಲ್ಲಿ 24 ಕೋಟಿ ಮಂದಿ ಭಾಗವಹಿಸಿದ್ದರು. ಈ ಬಾರಿ ಮಹಾಕುಂಭ ಮೇಳದಲ್ಲಿ 45 ಕೋಟಿ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಕಳೆದ ಬಾರಿ 7,900 ಎಕರೆ ಜಾಗದಲ್ಲಿ ಕುಂಭ ಮೇಳ ಆಯೋಜಿಸಲಾಗಿತ್ತು. ಈ ಬಾರಿ ಶೇ 25ರಷ್ಟು ಹೆಚ್ಚು ಸ್ಥಳವನ್ನು ಮಹಾಕುಂಭ ಮೇಳಕ್ಕಾಗಿ ಬಳಸಿಕೊಳ್ಳಲಾಗಿದೆ. ಕಳೆದ ಬಾರಿ 3,500 ಕೋಟಿ ರೂ. ವೆಚ್ಚದಲ್ಲಿ ಕುಂಭಮೇಳ ನಡೆದಿತ್ತು. ಈ ಬಾರಿ ಮಹಾಕುಂಭ ಮೇಳದ ವೆಚ್ಚ ಅದರ ಎರಡರಷ್ಟಿದೆ. 2019ರಲ್ಲಿ ನಡೆದಿದ್ದ ಕುಂಭ ಮೇಳದ ಘಾಟ್‌ಗಳ ಉದ್ದ 8 ಕಿ.ಮೀ .ಇತ್ತು. ಈ ಬಾರಿ ಅದನ್ನು 12 ಕಿ.ಮೀ .ಗೆ ಹೆಚ್ಚಿಸಲಾಗಿದೆ. ರೈಲು, ಹೆದ್ದಾರಿ ಪ್ರಯಾಣದ ವ್ಯವಸ್ಥೆಯಲ್ಲೂ ಇದೇ ರೀತಿಯ ಹೆಚ್ಚಳವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ ಪ್ರಯಾಗ್‌ರಾಜ್‌ನಲ್ಲಿ ಸಂಗಮಿಸುತ್ತಾಳೆ ಎಂಬ ನಂಬಿಕೆ ಇದೆ. ಪುಷ್ಯ ಪೂರ್ಣಿಮೆಯ ಪವಿತ್ರ ದಿನದಂದು ಶಾಹೀ (ಪವಿತ್ರ) ಸ್ನಾನ ಮಾಡುವುದು ಭಕ್ತಾದಿಗಳ ಬಯಕೆಯಾಗಿದೆ.

https://twitter.com/ANI/status/1878641127890600285?ref_src=twsrc%5Etfw%7Ctwcamp%5Etweetembed%7Ctwterm%5E1878630905247584272%7Ctwgr%5E936ee728c60f7cb52b2eb978370e959439d22c24%7Ctwcon%5Es1_&ref_url=https%3A%2F%2Fwww.prajavani.net%2Fnews%2Findia-news%2Fmahakumbh-2025-worlds-biggest-fair-set-to-begin-from-today-with-anticipated-footfall-of-45-cr-pilgrims-3122646
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...