ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

Date:

ಪುಣೆ ಮೂಲದ ರೋಗಿಯೊಬ್ಬರು ‘ಗಿಲ್ಲಾನ್ ಬರ್ರೆ ಸಿಂಡ್ರೋಮ್‌'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ ಜಿಬಿಎಸ್‌ ಪ್ರಕರಣಗಳು 100 ದಾಟಿವೆ.

ಶೀತ, ಕೆಮ್ಮು, ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳಿಂದಾಗಿ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುಗೆ ದಾಖಲಿಸಿಲಾಗಿದ್ದ ಇವರನ್ನು ರೋಗ ಸುಧಾರಣೆ ಕಂಡ ಮೇಲೆ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದಾಗ್ಯೂ ಉಸಿರಾಟದ ತೊಂದರೆಯಿಂದ ರೋಗ ಹದಗೆಟ್ಟ ಪರಿಣಾಮ ಪುನಃ ಐಸಿಯುಗೆ ದಾಖಲಿಸಲಾಗಿತ್ತು. ಆರೋಗ್ಯ ಚೇತರಿಕೆ ಕಾಣದ ಪರಿಣಾಮ ಮೃತಪಟ್ಟಿದ್ದಾರೆ. ಸಾವಿಗೀಡಾಗುವ ಮುನ್ನ ಅವರ ಅಂಗಗಳಲ್ಲಿ ಪಾರ್ಶ್ವವಾಯು ಉಂಟಾಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

40 ವರ್ಷದ ರೋಗಿಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೋಗಿಯು ಗಿಲ್ಲೈನ್ ಬರ್ರೆ ಸಿಂಡ್ರೋಮ್‌(ಜಿಬಿಎಸ್) ನಿಂದ ಬಳಲುತ್ತಿದ್ದರು ಎಂದು ಸೊಲ್ಲಾಪುರ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯರಾದ ಸಂಜೀವ್‌ ಠಾಕೂರ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿಯನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಮೃತರ ವೈದ್ಯಕೀಯ ಇತಿಹಾಸವನ್ನು ಪರಿಶೀಲಿಸಲಾಗಿದ್ದು, ಇವರಿಗೆ ಜಿಬಿಎಸ್ ವೈರಸ್‌ ಇರುವ ಬಗ್ಗೆ ಶಂಕಿಸಲಾಗಿದೆ. ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೀಡಲು ನಿರ್ಧರಿಸಲಾಗಿದೆ. ವರದಿಯ ನಂತರ ಸಾವಿನ ಖಚಿತ ಕಾರಣವನ್ನು ತಿಳಿಯಲಾಗುತ್ತದೆ. ಮರಣೋತ್ತರ ಪರೀಕ್ಷೆಯಲ್ಲಿ ಜೀವಶಾಸ್ತ್ರಜ್ಞ ಹಾಗೂ ರೋಗ ಶಾಸ್ತ್ರಜ್ಞರು ಕೂಡ ಭಾಗಿಯಾಗಲಿದ್ದಾರೆ. ಸಿಎಸ್ಎಫ್‌ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ. 6 ದಿನಗಳಲ್ಲಿ ವರದಿ ಬರಲಿದೆ” ಎಂದು ಸಂಜೀವ್‌ ಠಾಕೂರ್‌ ಹೇಳಿದ್ದಾರೆ.

ಪುಣೆಯಲ್ಲಿ ಜಿಬಿಎಸ್‌ ವೈರಸ್‌ ಭಾನುವಾರದವರೆಗೂ 101 ಪ್ರಕರಣಗಳು ದಾಟಿದ್ದು, ಇವುಗಳಲ್ಲಿ 68 ಪುರುಷರು ಹಾಗೂ 33 ಮಹಿಳೆಯರು ಒಳಗೊಂಡಿದ್ದಾರೆ. 16 ರೋಗಿಗಳನ್ನು ವೆಂಟಿಲೇಟರ್‌ ಬೆಂಬಲದೊಂದಿಗೆ ದಾಖಲಿಸಲಾಗಿದೆ. ಪುಣೆ ಮಹಾನಗರ ಆರೋಗ್ಯ ಇಲಾಖೆ ವೈರಸ್‌ ಬಾಧಿತ ಸಿಂಹಗಢ ರಸ್ತೆಯ ಪ್ರದೇಶಗಳಲ್ಲಿ ಪರಿವೀಕ್ಷಣೆಯನ್ನು ಮುಂದುವರಿಸಿದೆ. ಈ ಪ್ರದೇಶದಲ್ಲಿ ಒಟ್ಟು 25,578 ಮನೆಗಳಿವೆ.

ಗಿಲ್ಲಾನ್ ಬರ್ರೆ ಸಿಂಡ್ರೋಮ್‌'(ಜಿಬಿಎಸ್) ಎಂಬುದು, ರೋಗಿಯ ಪ್ರತಿಕಾಯ ಸಾಮರ್ಥ್ಯವನ್ನು ಕುಗ್ಗಿಸುವ ಬ್ಯಾಕ್ಟೀರಿಯಾ ಹಾಗೂ ವೈರಲ್ ಸೋಂಕಿನಿಂದ ಬರುವ ನರ ಸಂಬಂಧಿ ಕಾಯಿಲೆಯಾಗಿದೆ. ಇದು ನರ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಪಾರ್ಶ್ವವಾಯು ಉಂಟುಮಾಡುತ್ತದೆ. ಹಾಗೆಯೆ ದೇಹವು ಹಠಾತ್ತನೆ ಮರಗಟ್ಟುವಂತೆ ಮಾಡಿ, ಕೈಕಾಲು ಹಾಗೂ ಸ್ನಾಯುಗಳನ್ನು
ದುರ್ಬಲಗೊಳಿಸುತ್ತದೆ.

ಈ ಕಾಯಿಲೆಯಿಂದ ಚೇತರಿಸಿಕೊಳ್ಳಲು ಕೆಲವು ದಿನಗಳು ಹಾಗೂ ಕೆಲವು ವಾರಗಳು ಬೇಕಾಗಬಹುದು. ಎಲ್ಲ ವಯಸ್ಸಿನವರಿಗೂ ಕಂಡುಬರುವ ರೋಗವಾದರೂ ಸಾಮಾನ್ಯವಾಗಿ ವಯಸ್ಕರು ಹಾಗೂ ಪುರುಷರಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ವೈರಸ್‌ ಏಕೆ ಸಂಭವಿಸುತ್ತದೆ ಎಂದು ಇನ್ನೂ ತಿಳಿಯಲಾಗಿಲ್ಲ. ಆದರೂ ಬಹುತೇಕ ಪ್ರಕರಣಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ವೈರಲ್‌ ಸೋಂಕಿನಿಂದ ಉಂಟಾಗುತ್ತದೆ. ಒಂದು ಅಂದಾಜಿನ ಪ್ರಕಾರ ಒಂದು ಲಕ್ಷ ಜನಸಂಖ್ಯೆಯಲ್ಲಿ ಶೇ 0.5 ರಷ್ಟು ಮಂದಿಗೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...