ಕಳವಿನ ಆತಂಕ; ನೀರಿನ ಡ್ರಮ್‌ಗಳಿಗೆ ಬೀಗ ಹಾಕಿ ಕಾಪಾಡುವ ಮಹಾರಾಷ್ಟ್ರದ ಗ್ರಾಮಸ್ಥರು!

Date:

ತಾಪಮಾನ ಹೆಚ್ಚಾಗುತ್ತಿದ್ದಂತೆ ದೇಶದ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ ಕಾಣಿಸಿಕೊಳ್ಳುತ್ತದೆ. ನಗರದಲ್ಲಿರುವವರು ಹಣ ಕೊಟ್ಟು ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳುತ್ತಾರೆ. ಆದರೆ ಗ್ರಾಮೀಣ ಭಾಗದ ಜನರ ಸ್ಥಿತಿ ಶೋಚನೀಯ. ಮಹಾರಾಷ್ಟ್ರದ ಗ್ರಾಮವೊಂದರ ಜನರಿಗೆ ಅಪರೂಪಕ್ಕೆ ನಲ್ಲಿಯಲ್ಲಿ ಸುರಿಯುವ ನೀರನ್ನು ಕಾಪಿಡುವುದೇ ಸವಾಲಾಗಿದೆ. ಕಳ್ಳತನದ ಆತಂಕದ ನಡುವೆ ನೀರಿನ ಡ್ರಮ್‌ಗಳಿಗೆ ಬೀಗ ಹಾಕಿ ಇಡುತ್ತಿದ್ದಾರೆ.

ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಗ್ರಾಮಗಳಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ. ಇದು ಉಪ್ಪು ನೀರಿನ ಪ್ರದೇಶವಾಗಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಬಿಸಿಲಿನ ಬೇಗೆ ನಡುವೆ ದಾಹವೂ ಅಧಿಕ. ಬಿಸಿಲು ಅಧಿಕವಾಗಿರುವ ಕಾರಣ ಅಧಿಕ ನೀರು ಕುಡಿಯುವಂತೆ ಸರ್ಕಾರವೂ ಸೂಚಿಸಿದೆ. ಆದರೆ ಈ ಗ್ರಾಮದ ಜನರಿಗೆ ಕುಡಿಯುವ ನೀರಿನ ಕೊರತೆ ಎದುರಾಗಿದೆ. ನಲ್ಲಿಗಳಿದ್ದರೂ ಅದರಲ್ಲಿ ನೀರು ಬರಲು ಕೆಲವೊಮ್ಮೆ ಬರೋಬ್ಬರಿ ಎರಡು ತಿಂಗಳವರೆಗೆ ಕಾಯಬೇಕಾಗುತ್ತದೆ.

ಇದನ್ನು ಓದಿದ್ದೀರಾ? ಬೀದರ್‌ | ಕುಡಿಯುವ ನೀರಿನ ಸಮಸ್ಯೆ : ಸಹಾಯವಾಣಿ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಷ್ಟೊಂದು ದಿನಗಳಿಗೆ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿಡುವುದು ಗ್ರಾಮದ ಜನರಿಗೆ ಎದುರಾಗಿರುವ ಸಂಕಷ್ಟ. ಕೆಲವೊಮ್ಮೆ 15 ದಿನಗಳಿಗೊಮ್ಮೆ ನೀರು ಬಂದರೆ, ಇನ್ನೂ ಕೆಲವೊಮ್ಮೆ 45-60 ದಿನಕ್ಕೊಮ್ಮೆ ನೀರು ಬರುತ್ತದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇಲ್ಲಿ ಎಷ್ಟೋ ಮನೆಗಳಿಗೆ ಬೀಗವಿಲ್ಲ, ಆದರೆ ನೀರಿನ ಟ್ಯಾಂಕ್‌ಗಳಿಗೆ ಮಾತ್ರ ಬೀಗ ಹಾಕಲಾಗಿದೆ ಎಂದು ಮಾಧ್ಯಮಕ್ಕೆ ಉಗ್ ಗ್ರಾಮದ ನಿವಾಸಿ ಚಂದಾ ವಾಕಟೆ ಎಂಬವರು ಹೇಳಿದ್ದಾರೆ.

ಇನ್ನು ಈ ಪ್ರದೇಶದ ನೀರಿನ ಸಮಸ್ಯೆಗಳನ್ನು ಪರಿಹರಿಸಲು, ಆಡಳಿತವು 84 ಖೇಡಿ ಯೋಜನೆಯನ್ನು ಪರಿಚಯಿಸಿದೆ. ಆದರೆ ನೀರಿನ ಪೂರೈಕೆಗೆ ಸರಿಯಾದ ಯೋಜನೆ ಇನ್ನೂ ರೂಪಿಸಿಲ್ಲ. ಅನೇಕರು ಟ್ಯಾಂಕರ್‌ಗೆ 600 ರೂಪಾಯಿಗಳಂತೆ ಪಾವತಿಸಿ ಟ್ಯಾಂಕರ್‌ಗಳಿಂದ ನೀರು ಖರೀದಿಸಬೇಕಾದ ಸ್ಥಿತಿಯಿದೆ.

ಇನ್ನು ಮಹಾರಾಷ್ಟ್ರದ ಯವತ್‌ಮಲ್ ಜಿಲ್ಲೆಯಲ್ಲೂ ಇದೇ ಸ್ಥಿತಿ ಎದುರಾಗಿದೆ. ಇಲ್ಲಿ ಹಟ್ಟಿಗಳಲ್ಲಿ ವಾಸಿಸುವ ಪಾರ್ದಿ ಸಮುದಾಯದವರು ನೀರಿಗಾಗಿ ತಮ್ಮ ಜೀವವನ್ನೇ ಪಣಕಿಡಬೇಕಾಗಿದೆ. ಇತ್ತೀಚೆಗೆ ಪಾರ್ದಿ ಮಹಿಳೆಯೊಬ್ಬರು ಆಳವಾದ ಬಾವಿಗೆ ಇಳಿದು ಕೊಳಕು ನೀರನ್ನು ಸಂಗ್ರಹಿಸುತ್ತಿರುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಬಾವಿಯಲ್ಲಿ ಹಾವುಗಳು, ಚೇಳುಗಳೂ ಇರುತ್ತದೆ. ಅಷ್ಟು ಮಾತ್ರವಲ್ಲದೆ ಬಾವಿಗಿಳಿಯುವಾಗ ಬೀಳುವ ಅಪಾಯವೂ ಇದೆ. ಆದರೆ ನೀರಿನ ಅನಿವಾರ್ಯತೆ ಮಹಿಳೆಯರು ಈ ಆಪತ್ತಿಗೆ ತಮ್ಮನ್ನು ತಾವು ನೂಕುವಂತೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...