ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

Date:

  • ಜಲಗಾಂವ್‌ ಜಿಲ್ಲೆಯಲ್ಲಿ ಶಿವಸೇನೆ ಸಮಾವೇಶದಲ್ಲಿ ಸಂಜಯ್‌ ರಾವುತ್ ಭಾಷಣ
  • ಶಿಂಧೆ ಸರ್ಕಾರದ ಒಳಗೆ ಮುಖ್ಯಮಂತ್ರಿ ಬದಲಾವಣೆಗೆ ಮಸಲತ್ತು ಆರೋಪ

ಮಹಾರಾಷ್ಟ್ರದಲ್ಲಿರುವ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಸರ್ಕಾರ ಇನ್ನು 15 ದಿನದಲ್ಲಿ ಅಂತ್ಯವಾಗಲಿದೆ ಎಂದು ಉದ್ಧವ್‌ ಠಾಕ್ರೆ ನೇತೃತ್ವ ಶಿವಸೇನಾ (ಯುಬಿಟಿ) ವಕ್ತಾರ ಸಂಜಯ್‌ ರಾವುತ್ ಹೇಳಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯಲ್ಲಿ ಭಾನುವಾರ (ಏಪ್ರಿಲ್‌ 23) ನಡೆದ ಪಕ್ಷದ ಸಮಾವೇಶದಲ್ಲಿ ರಾವುತ್‌ ಸುದ್ದಿಗಾರರಿಗೆ ಹೇಳಿದರು.

“ಶಿಂಧೆ ಸರ್ಕಾರಕ್ಕೆ ಮರಣ ಶಾಸನ ಬರೆಯುತ್ತೇವೆ. ಇನ್ನು 15 ದಿನದಲ್ಲಿ ಅವರ ಸರ್ಕಾರ ಕೊನೆಗೊಳ್ಳಲಿದೆ” ಎಂದು ಶಿವಸೇನಾದ ಸಂಜಯ್‌ ರಾವುತ್‌ ಸಮಾವೇಶದ ವೇಳೆ ಸುದ್ದಿಗಾರರಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಪ್ರೀಂಕೋರ್ಟ್‌ ತೀರ್ಪು ಹೊರಬೀಳಲಿದ್ದು, ಶಿಂಧೆ ಅವರ ಸರ್ಕಾರ ಪತನಗೊಳ್ಳಲಿದೆ” ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಶಿಂಧೆಗೆ ಬಿಜೆಪಿಯು ಗಂಟು ಮೂಟೆ ಕಟ್ಟಿಕೊಳ್ಳಲು ಹೇಳಿದೆ ಎಂದು ಶನಿವಾರ (ಏಪ್ರಿಲ್‌ 22) ಸಂಜಯ್‌ ರಾವುತ್‌ ಹೇಳಿದ್ದರು.

ಮುಖ್ಯಮಂತ್ರಿ ಹುದ್ದೆ ಮೇಲೆ ಹಕ್ಕು ಸಾಧಿಸಲು ತಾವು ಸಿದ್ಧ ಎಂದು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಹೇಳಿಕೆಗೆ ಸಂಜಯ್‌ ರಾವುತ್‌ ಪ್ರತಿಕ್ರಿಯಿಸಿದ್ದರು.

“2024ರಲ್ಲಿ ಮಾತ್ರವಲ್ಲ, ನಾನು ಈಗಲೂ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಸಿದ್ಧನಿದ್ದೇನೆ” ಎಂದು ಅಜಿತ್‌ ಪವಾರ್‌ ಪಿಂಪ್ರಿ ಚಿಂಚವಾಡದಲ್ಲಿ ಶುಕ್ರವಾರ ಮಾಧ್ಯಮ ಸಂದರ್ಶನದಲ್ಲಿ ಹೇಳಿದ್ದರು.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ ಭಾನುವಾರ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಎರಡು ಬಣಗಳ ಸಮಾವೇಶಗಳಿಗೆ ಸಾಕ್ಷಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಕೇರಳ | ಅಲ್ಪಸಂಖ್ಯಾತರ ಮೇಲಿನ ಸಂಘ ಪರಿವಾರದ ದಾಳಿ ಬಗ್ಗೆ ವ್ಯಾಪಕ ಪ್ರಚಾರಕ್ಕೆ ಕಾಂಗ್ರೆಸ್‌ ಸಿದ್ಧತೆ

ಉದ್ಧವ್ ಅವರ ಶಿವಸೇನಾದ ಸಮಾವೇಶಕ್ಕೆ ಅಡಚಣೆ ಉಂಟುಮಾಡುವುದಾಗಿ ನೀರು ಪೂರೈಕೆ ಸಚಿವ ಗುಲಾಬ್‌ರಾವ್‌ ಪಾಟೀಲ್ ಹೇಳಿದ್ದರು. ಸಚಿವ ಗುಲಾಬ್‌ರಾವ್‌ ವಿರುದ್ಧ ಭಷ್ಟಾಚಾರ ಆರೋಪವಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...