ಪ್ರಶ್ನೆಗಾಗಿ ಲಂಚ: ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆ

Date:

ಪ್ರಶ್ನೆಗಾಗಿ ಲಂಚ ಆರೋಪ ಪ್ರಕರಣದ ಮೇಲೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲಾಗಿದೆ.

ಸದನದ ನೈತಿಕ ಸಮಿತಿಯ ವರದಿಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಯಿತು. ವರದಿ ಮಂಡನೆ ಆಧಾರದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಉಚ್ಚಾಟಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಮುಂದೂಡಲ್ಪಟ್ಟ ನಂತರ ಮಧ್ಯಾಹ್ನ ಸದನ ಮತ್ತೆ ಸೇರಿದಾಗ ಸಮಿತಿಯ ಮೊದಲ ವರದಿಯನ್ನು ನೈತಿಕ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ಅವರು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹುವಾ ಮೊಯಿತ್ರಾ ಅವರ ಕಡೆಯಿಂದ ಗಂಭೀರವಾದ ದುಷ್ಕೃತ್ಯಗಳು ಕಠಿಣ ಶಿಕ್ಷೆಗೆ ಅರ್ಹವಾಗಿದೆ. ಆದ್ದರಿಂದ ಸಮಿತಿಯು ಹದಿನೇಳನೇ ಲೋಕಸಭೆಯ ಸದಸ್ಯತ್ವದಿಂದ ಸಂಸದ ಮಹುವಾ ಅವರನ್ನು ಉಚ್ಚಾಟಿಸಬಹುದು ಎಂದು ಶಿಫಾರಸು ಮಾಡಿದೆ” ಎಂದು ತಿಳಿಸಿದರು.

ಚರ್ಚೆಯ ನಂತರ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು “ಅನೈತಿಕ ನಡವಳಿಕೆ”ಗಾಗಿ ಟಿಎಂಸಿ ಸಂಸದರನ್ನು ಉಚ್ಚಾಟಿಸುವ ಪ್ರಸ್ತಾಪವನ್ನು ಮಂಡಿಸಿದರು. ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಉಚ್ಚಾಟನೆಯ ನಂತರ ಮಾತನಾಡಿದ ಮಹುವಾ ಮೊಯಿತ್ರಾ, “ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟಿಸಲಾಗಿದೆ. ನನಗೆ ಸದನದಲ್ಲಿ ಮಾತನಾಡಲು ಅವಕಾಶವನ್ನೇ ಕೊಡಲಿಲ್ಲ” ಎಂದು ಆರೋಪಿಸಿದರು.

“ನನ್ನನ್ನು ಬಾಯಿ ಮುಚ್ಚಿಸುವ ಮೂಲಕ ಅದಾನಿ ಸಮಸ್ಯೆ ಮುಚ್ಚಿಹಾಕಬಹುದು ಎಂದು ಈ ಮೋದಿ ಸರ್ಕಾರ ಭಾವಿಸಿದ್ದು, ಅದನ್ನು ಕಾಂಗರೂ(ಸಾಕ್ಷ್ಯಾಧಾರ ಅನುಸರಿಸದೆ ಉದ್ದೇಶಪೂರ್ವಕವಾಗಿ ಆರೋಪಿಗಳ ವಿರುದ್ಧವಾಗಿ ತೀರ್ಪು ನೀಡುವುದು) ನ್ಯಾಯಾಲಯದ ಮೂಲಕ ತೋರಿಸಿದೆ ಎಂದು ನಾನು ನಿಮಗೆ ಹೇಳಬಯಸುತ್ತೇನೆ. ನೀವು ನನ್ನ ಪ್ರಕರಣದಲ್ಲಿ ತೋರಿಸಿದ ತರಾತುರಿ ಮತ್ತು ಪ್ರಕ್ರಿಯೆಯ ದುರುಪಯೋಗವು ನಿಮಗೆ ಅದಾನಿ ಎಷ್ಟು ಮುಖ್ಯ ಎಂಬುದನ್ನು ತೋರಿಸುತ್ತದೆ. ಒಂಟಿ ಮಹಿಳಾ ಸಂಸದೆಯನ್ನು ಬಾಯಿ ಮುಚ್ಚಿಸುವ ಮೂಲಕ ನೀವು ಎಷ್ಟು ಕಾಲ ಕಿರುಕುಳ ನೀಡುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊಯಿತ್ರಾ ಉಚ್ಚಾಟನೆಯ ನಂತರ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ವರದಿ ಮಂಡನೆಯಾದ ತಕ್ಷಣ ತೃಣಮೂಲ ಕಾಂಗ್ರೆಸ್ ಸದಸ್ಯರು ಮತ್ತು ಕಾಂಗ್ರೆಸ್‌ನ ಕೆಲವರು ಸದನದ ಬಾವಿಗಿಳಿದು ವರದಿಯ ಪ್ರತಿಯನ್ನು ನೀಡುವಂತೆ ಘೋಷಣೆಗಳನ್ನು ಕೂಗಿದರು.

ಈ ಸುದ್ದಿ ಓದಿದ್ದೀರಾ? ಮಿಜೋರಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಲಾಲ್ದುಹೋಮಾ

ತೃಣಮೂಲ ಕಾಂಗ್ರೆಸ್ ಸದಸ್ಯ ಕಲ್ಯಾಣ್ ಬ್ಯಾನರ್ಜಿ ವರದಿಯ ಶಿಫಾರಸುಗಳನ್ನು ಮತಕ್ಕೆ ಹಾಕುವ ಮೊದಲು ಅದರ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದರು.

ಗದ್ದಲದ ನಡುವೆಯೇ ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯ ರಾಜೇಂದ್ರ ಅಗರವಾಲ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ನಂತರ ನಡೆದ ಚರ್ಚೆಯಲ್ಲಿ ಮಹುವಾ ಅವರನ್ನು ಉಚ್ಚಾಟಿಸಲಾಯಿತು.

ನವೆಂಬರ್ 9 ರಂದು ನಡೆದ ಸಭೆಯಲ್ಲಿ ನೈತಿಕ ಸಮಿತಿಯು ಲೋಕಸಭೆಯಿಂದ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ತನ್ನ ವರದಿಯನ್ನು ಅಂಗೀಕರಿಸಿತು.

ಈ ಹಿಂದೆ ಪಕ್ಷದಿಂದ ಅಮಾನತುಗೊಂಡಿದ್ದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಸೇರಿದಂತೆ ಸಮಿತಿಯ ಆರು ಸದಸ್ಯರು ವರದಿಯ ಪರವಾಗಿ ಮತ ಹಾಕಿದರು.

ಈ ವರದಿಯನ್ನು ಈ ಹಿಂದೆ ಡಿಸೆಂಬರ್ 4 ರಂದು ಲೋಕಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿತ್ತು. ಆದರೆ ಅದನ್ನು ಮಂಡಿಸಲಾಗಿಲ್ಲ.

49 ವರ್ಷದ ಮಹುವಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...