ಮಾಲೇಗಾಂವ್ ತನಿಖೆ | ವೈರುಧ್ಯಗಳತ್ತ ಬೊಟ್ಟು ಮಾಡಿತ್ತು ಸುಪ್ರೀಮ್ ಕೋರ್ಟು

Date:

ಮಾಲೇಗಾಂವ್ ಸ್ಫೋಟಗಳ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಮತ್ತು ಎನ್.ಐ.ಎ. 2017ರಲ್ಲಿ ಸಲ್ಲಿಸಿದ್ದ ಸಾಕ್ಷೀದಾರರ ಹೇಳಿಕೆಗಳು ಮತ್ತು ತನಿಖಾ ವರದಿಗಳಲ್ಲಿನ ವೈರುಧ್ಯಗಳತ್ತ ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಮ್ ಕೋರ್ಟ್ ಬೆರಳು ಮಾಡಿ ತೋರಿದ್ದವು.

2017ರ ಏಪ್ರಿಲ್ ನಲ್ಲಿ ಬಾಂಬೆ ಹೈಕೋರ್ಟು ಆಪಾದಿತರಲ್ಲೊಬ್ಬರಾದ ಪ್ರಗ್ಯಾಸಿಂಗ್ ಠಾಕೂರ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಸಾಕ್ಷೀದಾರರು ತಮಗೆ ಚಿತ್ರಹಿಂಸೆ ನೀಡಿದ ಆಪಾದನೆಗಳಿಂದ ಹಿಂದೆ ಸರಿದಿರುವುದೇ ಅಲ್ಲದೆ, ಅವರು ನೀಡಿರುವ ಹೇಳಿಕೆಗಳು ಪರಸ್ಪರ ವ್ಯತಿರಿಕ್ತವಾಗಿವೆ ಎಂದು ಹೈಕೋರ್ಟು ಇದೇ ಸಂದರ್ಭದಲ್ಲಿ ಹೇಳಿದ್ದುಂಟು.

ಮತ್ತೊಬ್ಬ ಆಪಾದಿತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರಿಗೆ ಸುಪ್ರೀಮ್ ಕೋರ್ಟು 2017ರ ಆಗಸ್ಟ್ ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಎ.ಟಿ.ಎಸ್. ಮತ್ತು ಎನ್.ಐ.ಎ ಅನುಕ್ರಮವಾಗಿ ಸಲ್ಲಿಸಿದ್ದ ಆಪಾದನಾಪಟ್ಟಿ ಮತ್ತು ಪೂರಕ ಆಪಾದನಾಪಟ್ಟಿಯಲ್ಲಿ ವೈರುಧ್ಯಗಳಿವೆ. ಇವುಗಳನ್ನು ವಿಚಾರಣೆಯ ಸಂದರ್ಭದಲ್ಲಿ ಪರೀಕ್ಷಿಸಬಹುದು ಎಂದು ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2008ರ ಮಾಲೇಗಾಂವ್ ಸ್ಫೋಟಕ್ಕೆ ಮುನ್ನ ನಡೆದ ಸಭೆಗಳಿಗೆ ತಾವು ಸೇನೆಯ ವತಿಯಿಂದ ಗೂಢಚಾರಿಕೆ ಮಾಡಲು ಹಾಜರಾದದ್ದಾಗಿ ಪುರೋಹಿತ್ 2021ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್ ಮುಂದೆ ನಿವೇದಿಸಿಕೊಂಡಿದ್ದರು. ಅಭಿನವ್ ಭಾರತ್ ಎಂಬ ಬಲಪಂಥೀಯ ಸಂಘಟನೆಯ ಕುರಿತು ಗೋಪ್ಯ ಮಾಹಿತಿ ಸಂಗ್ರಹಿಸಲು ಸೇನೆಯೇ ತಮ್ಮನ್ನು ನಿಯುಕ್ತಿ ಮಾಡಿದ್ದಾಗಿಯೂ, ಮಾಹಿತಿಯನ್ನು ಉನ್ನತ ಅಧಿಕಾರಿಗಳಿಗೆ ನೀಡಿದ್ದಾಗಿಯೂ ಅವರು ಹೇಳಿಕೊಂಡಿದ್ದರು.

ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂಬ ಪುರೋಹಿತ್ ಮನವಿಯನ್ನು ಹೈಕೋರ್ಟು 2023ರಲ್ಲಿ ವಜಾ ಮಾಡಿತ್ತು. ಪುರೋಹಿತ್ ಅವರು ಹೇಳಿರುವ ಸಂಗತಿಗಳನ್ನು ಒಪ್ಪಿದರೂ ಪ್ರಶ್ನೆಯೊಂದು ಉಳಿದೇ ಉಳಿಯುತ್ತದೆ. ಅದೆಂದರೆ, “ಆರು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡು, ನೂರು ಮಂದಿಗೆ ಗಂಭೀರ ಗಾಯಗಳನ್ನು ಉಂಟು ಮಾಡಿದ ಬಾಂಬ್ ಸ್ಫೋಟವನ್ನು ಪುರೋಹಿತ್ ಯಾಕೆ ನಿಲ್ಲಿಸಲಿಲ್ಲ?”

ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಪುರೋಹಿತ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಮ್ ಕೋರ್ಟು 2023ರಲ್ಲೇ ವಜಾ ಮಾಡಿತ್ತು.

ಮಾಲೇಗಾಂವ್ ಸ್ಫೋಟದ ವಿಚಾರಣೆಯ ಉಸ್ತುವಾರಿ ನಡೆಸಿದ್ದ ಬಾಂಬೆ ಹೈಕೋರ್ಟು, ಎನ್.ಐ.ಎ. ಪ್ರತಿ ‘ಹಿಯರಿಂಗ್’ ಗೆ ಒಬ್ಬೊಬ್ಬರೇ ಸಾಕ್ಷೀದಾರರನ್ನು ಕರೆದು ನ್ಯಾಯಾಂಗದ ಸಮಯವನ್ನು ವ್ಯರ್ಥಗೊಳಿಸುತ್ತಿರುವ ಕುರಿತು ಕಾಳಜಿ ಪ್ರಕಟಿಸಿತ್ತು. ಪ್ರತಿ ಹಿಯರಿಂಗ್ ಗೆ ಒಂದಕ್ಕಿಂತ ಹೆಚ್ಚು ಮಂದಿ ಸಾಕ್ಷೀದಾರರನ್ನು ಕರೆದು ವಿಚಾರಣೆ ನಡೆಸಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...