ಪಶ್ಚಿಮ ಬಂಗಾಳ ವೈದ್ಯರ ಮುಷ್ಕರ ಅಂತ್ಯ; ಐದರಲ್ಲಿ ಮೂರು ಬೇಡಿಕೆ ಈಡೇರಿಸಲು ಸಿಎಂ ಸಮ್ಮತಿ

Date:

ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಿರಿಯ ವೈದ್ಯರ ಶೇ 99 ರಷ್ಟು ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಅವರು ಭರವಸೆ ಕೊಟ್ಟಿದ್ದಾರೆ.

ಕೋಲ್ಕತ್ತ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವು ದಾಗಿ ಮಮತಾ ಸೋಮವಾರ ರಾತ್ರಿಯೇ ಘೋಷಿಸಿದ್ದಾರೆ.

ಕಿರಿಯ ವೈದ್ಯರ ಜತೆ ತಮ್ಮ ನಿವಾಸ ದಲ್ಲಿ ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮಾತುಕತೆಗಳು ಫಲಿಸಿವೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಪಾಲ್ಗೊಂಡಿದ್ದ ವೈದ್ಯರ ನಿಯೋಗವು ‘ತಮ್ಮ ಬೇಡಿಕೆಗಳನ್ನು ಈಡೇರಿಸಲು ಮಮತಾ ಒಪ್ಪಿಕೊಂಡಿದ್ದಾರೆ. ಆದರೆ, ಅದು ಕಾರ್ಯರೂಪಕ್ಕೆ ಬರುವವರೆಗೂ ಮುಷ್ಕರ ಮುಂದುವರಿಯಲಿದೆ’ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ಮೊದಲ ಸುತ್ತಿನ ಮಾತುಕತೆ ಸುಮಾರು ಎರಡು ಗಂಟೆ ನಡೆಯಿತು. 35 ಮಂದಿ ಕಿರಿಯ ವೈದ್ಯರ ನಿಯೋಗವು ಸಿ.ಎಂ ನಿವಾಸಕ್ಕೆ ಸಂಜೆ 6:20ಕ್ಕೆ ಆಗಮಿಸಿತು. ಸಂಜೆ 6:50ರ ಸುಮಾರಿಗೆ ಪ್ರಾರಂಭವಾದ ನಿರ್ಣಾಯಕ ಮಾತುಕತೆಗಳ ಸಭೆಯು ರಾತ್ರಿ 9 ಗಂಟೆ ಸುಮಾರಿಗೆ ಕೊನೆಗೊಂಡಿತು. ಆದರೆ, ಸಭೆಯಲ್ಲಿ ಚರ್ಚೆ ಮಾಡಿದ್ದನ್ನು ಅಕ್ಷರರೂಪದಲ್ಲಿ ದಾಖಲಿಸಿ, ಆ ವಿವರಗಳನ್ನು ಎರಡೂ ಕಡೆಯವರು ಪರಿಶೀಲಿಸಿ, ಸಹಿ ಮಾಡಿ, ಪ್ರತಿಗಳನ್ನು ಹಂಚಿಕೊಳ್ಳಲು ಮತ್ತೆ ಎರಡೂವರೆ ತಾಸು ಹಿಡಿಯಿತು. ವೈದ್ಯರ ನಿಯೋಗ ಸಭೆ ಮುಗಿಸಿ, ಬ್ಯಾನರ್ಜಿ ಅವರ ನಿವಾಸದಿಂದ ಹೊರಟಾಗ ರಾತ್ರಿ 11:30 ಆಗಿತ್ತು.

ಕೆಲಸ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ವೈದ್ಯರ ಜೊತೆ ಮಾತುಕತೆ ನಡೆಸಲು ಮಮತಾ ನೇತೃತ್ವದ ಸರ್ಕಾರವು ಈವರೆಗೆ ನಡೆಸಿದ್ದ ಹಲವು ಯತ್ನಗಳು ಫಲ ನೀಡಿರಲಿಲ್ಲ. ವೈದ್ಯ ವಿದ್ಯಾರ್ಥಿನಿಯ ಹತ್ಯೆಯ ವಿಚಾರವಾಗಿ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯು ಮಂಗಳವಾರ ನಡೆಯುವ ನಿರೀಕ್ಷೆ ಇದೆ. ಈ ವಿಚಾರಣೆಗೆ ಒಂದು ದಿನ ಮೊದಲು ಸಭೆ ನಡೆದಿದೆ.

ಮಮತಾ ಜೊತೆಗಿನ ಸಭೆಯನ್ನು ನೇರಪ್ರಸಾರ ಮಾಡಬೇಕು ಹಾಗೂ ತಾವು ಕರೆಸುವ ಛಾಯಾಗ್ರಾಹಕರ ಮೂಲಕ ಸಭೆಯ ವಿಡಿಯೊ ಚಿತ್ರೀಕರಣ ನಡೆಸಲು ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ವೈದ್ಯರು ಇರಿಸಿದ್ದ ಕಾರಣ, ಸಭೆ ಆಯೋಜಿಸಲು ಈ ಹಿಂದೆ ನಡೆಸಿದ್ದ ಯತ್ನಗಳು ಫಲ ಕೊಟ್ಟಿರಲಿಲ್ಲ.

ಆದರೆ, ಸಭೆಯಲ್ಲಿ ಏನಾಯಿತು ಎಂಬುದನ್ನು ಅಕ್ಷರ ರೂಪದಲ್ಲಿ ದಾಖಲಿಸಿಕೊಳ್ಳಬಹುದು ಎಂಬ ಪ್ರಸ್ತಾವಕ್ಕೆ ವೈದ್ಯರು ಹಾಗೂ ಸರ್ಕಾರದ ಪ್ರತಿನಿಧಿಗಳು ಒಪ್ಪಿಕೊಂಡ ಕಾರಣಕ್ಕೆ ಸೋಮವಾರದ ಸಭೆ ಸಾಧ್ಯವಾಯಿತು.

ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದನ್ನು ಸೆಪ್ಟೆಂಬರ್ 10ರ ಸಂಜೆ 5ಕ್ಕೆ ಮೊದಲು ಕೊನೆಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರೂ ಕಿರಿಯ ವೈದ್ಯರು ಕೋರ್ಟ್‌ ಮಾತಿಗೆ ಓಗೊಟ್ಟಿರಲಿಲ್ಲ. ಸೆಪ್ಟೆಂಬರ್‌ 12ರಂದು ಸರ್ಕಾರದ ಜೊತೆ ಮಾತುಕತೆಗೆ ವೈದ್ಯರು ಬಂದಿದ್ದರಾದರೂ, ಸಭೆಯ ನೇರಪ್ರಸಾರಕ್ಕೆ ಸರ್ಕಾರ ಒಪ್ಪದ ಕಾರಣಕ್ಕೆ ಸಭೆ ಸಾಧ್ಯವಾಗಿರಲಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...