ಸ್ಟಾಲಿನ್‌ ಜೊತೆ ಮಮತಾ ಬ್ಯಾನರ್ಜಿ ಮಾತುಕತೆ; ಪ್ರಜಾಪ್ರಭುತ್ವ ವಿರೋಧಿ ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಸಹಮತ

Date:

  • ಮಮತಾ ಬ್ಯಾನರ್ಜಿ ಅವರಿಗೂ ಮುನ್ನ ಸ್ಟಾಲಿನ್‌ ಜೊತೆ ಕೇಜ್ರಿವಾಲ್‌, ಪಿಣರಾಯಿ ಚರ್ಚೆ
  • ರಾಜ್ಯಪಾಲರ ಅಂಗೀಕಾರಕ್ಕೆ ಕಾಲಮಿತಿ ನಿಗದಿಪಡಿಸಿ ತಮಿಳುನಾಡು ವಿಧಾನಸಭೆ ನಿರ್ಣಯ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರಿಗೆ ಬುಧವಾರ (ಏಪ್ರಿಲ್ 19) ಕರೆ ಮಾಡಿ ಬಿಜೆಪಿಯೇತರ ರಾಜ್ಯಗಳಲ್ಲಿ ಬಿಜೆಪಿಯ ರಾಜ್ಯಪಾಲರ ವಿರುದ್ಧ ಏಕತೆ ಪ್ರದರ್ಶಿಸುವಂತೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ರಾಜ್ಯಪಾಲರ ಪ್ರಜಾಪ್ರಭುತ್ವ ವಿರೋಧಿ ಕಾರ್ಯಾಚರಣೆಗೆ ಕಾರ್ಯತಂತ್ರ ರೂಪಿಸಲು ತಾವು ಸಹಕರಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಟಾಲಿನ್‌ ಅವರಿಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮುಂದಿನ ಕಾರ್ಯತಂತ್ರ ರೂಪಿಸಲು ಎಲ್ಲ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲು ಮಮತಾ ಅವರು ಸ್ಟಾಲಿನ್‌ ಅವರಿಗೆ ಸೂಚಿಸಿದ್ದು, ಸ್ಟಾಲಿನ್‌ ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾದ ಬ್ಯಾನರ್ಜಿ ಅವರು ದೂರವಾಣಿ ಮೂಲಕ ಪ್ರತಿಪಕ್ಷಗಳ ಏಕತೆ ಕುರಿತು ಮಾತನಾಡಿದರು. ಬಿಜೆಪಿಯೇತರ ರಾಜ್ಯಗಳಲ್ಲಿ ಬಿಜೆಪಿ ರಾಜ್ಯಪಾಲರ ಪ್ರಜಾಪ್ರಭುತ್ವ ವಿರೋಧಿ ನಡೆಗೆ ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚಿಸಿದರು. ಈ ಬಗ್ಗೆ ತೀರ್ಮಾನಿಸಲು ಪ್ರತಿಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲು ಸಲಹೆ ನೀಡಿದ್ದಾರೆ” ಎಂದು ಸ್ಟಾಲಿನ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ.

ರಾಜ್ಯದ ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಲು ಕಾಲಮಿತಿ ನಿಗದಿಪಡಿಸಿ ತಮಿಳುನಾಡು ವಿಧಾನಸಭೆ ಇತ್ತೀಚೆಗೆ ನಿರ್ಣಯವೊಂದನ್ನು ಅಂಗೀಕರಿಸಿತ್ತು. ಅಲ್ಲದೆ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳೂ ಈ ನಿರ್ಣಯವನ್ನು ಅಂಗೀಕರಿಸುವಂತೆ ಸ್ಟಾಲಿನ್‌ ಪತ್ರ ಬರೆದಿದ್ದರು.

ಈ ಸುದ್ದಿ ಓದಿದ್ದೀರಾ? ಮಾನ ಹಾನಿ ಪ್ರಕರಣ | ಶಿಕ್ಷೆಗೆ ತಡೆ ಕೋರಿದ್ದ ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್‌ ನ್ಯಾಯಾಲಯ

“ಭಾರತದ ಪ್ರಜಾಪ್ರಭುತ್ವ ಇಂದು ಕವಲು ದಾರಿಯಲ್ಲಿ ನಿಂತಿದೆ. ನಾವು ಇಲ್ಲಿನ ಸಹಕಾರಿಯುತ ಸಂಯುಕ್ತ ವ್ಯವಸ್ಥೆ ಮರೆಯಾಗುತ್ತಿರುವುದಕ್ಕೆ ಸಾಕ್ಷಿಯಾಗುತ್ತಿದ್ದೇವೆ” ಎಂದು ಸ್ಟಾಲಿನ್‌ ಪತ್ರದಲ್ಲಿ ತಿಳಿಸಿದ್ದರು.

ಮಮತಾ ಬ್ಯಾನರ್ಜಿ ಅವರಿಗೂ ಮುನ್ನ ಸ್ಟಾಲಿನ್‌ ಅವರ ಜೊತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಇದೇ ವಿಷಯದ ಕುರಿತು ಚರ್ಚಿಸಿದ್ದರು.

ಮುಂದಿನ ವಿಧಾನಸಭೆಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೇಜ್ರಿವಾಲ್‌ ಮತ್ತು ಪಿಣರಾಯಿ ತಿಳಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...