ಕೋಲಾರ | 10 ಸಾವಿರಕ್ಕೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ ಯುವಕ ಪ್ರಾಣ ಬಿಟ್ಟ

Date:

ಸ್ನೇಹಿತರೊಂದಿಗೆ 10 ಸಾವಿರ ರೂ.ಗಳಿಗೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.

21 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ. ಈತ ಸುಬ್ರಮಣಿ, ವೆಂಕಟ ರೆಡ್ಡಿ ಸೇರಿ ಇನ್ನೂ ಮೂವರೊಂದಿಗೆ ನೀರು ಬೆರಸದೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ. ವೆಂಕಟ ರೆಡ್ಡಿ ಎಂಬಾತ ನೀನು ನೀರಿಲ್ಲದೆ 5 ಬಾಟಲ್‌ ಮದ್ಯ ಸೇವಿಸಿದರೆ 10 ಸಾವಿರ ರೂ. ನೀಡುವುದಾಗಿ ತಿಳಿಸಿದ್ದ. ಕಾರ್ತಿಕ್‌ 5 ಬಾಟಲ್‌ ಮದ್ಯ ಸೇವಿಸಿದ ನಂತರ ತೀವ್ರ ಅಸ್ವಸ್ಥನಾಗಿದ್ದಾನೆ.

ನಂತರ ಆತನನ್ನು ಮುಳಬಾಗಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಕಾರ್ತಿಕ್‌ ಮೃತಪಟ್ಟಿದ್ದಾನೆ. ಕಾರ್ತಿಕ್‌ ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ. ಈತನ ಪತ್ನಿ 8 ದಿನಗಳ ಹಿಂದಷ್ಟೆ ಮಗುವಿಗೆ ಜನ್ಮ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂಗಲಿ ಠಾಣೆ ಪೊಲೀಸರು ವೆಂಕಟ ರೆಡ್ಡಿ, ಸುಬ್ರಮಣಿ ಸೇರಿ 6 ಮಂದಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ ಪ್ರತಿ ವರ್ಷ ಜಗತ್ತಿನಾದ್ಯಂತ ಮದ್ಯಪಾನ ಸೇವಿಸಿ 26 ಲಕ್ಷ ಮೃತಪಡುತ್ತಿದ್ದಾರೆ. ಇದು ಶೇಕಡಾವಾರು 4.7 ರಷ್ಟಿದೆ.

ಮದ್ಯಪಾನ ಸೇವಿಸುವುದರಿಂದ ಆರೋಗ್ಯಕ್ಕೆ ಉಪಯುಕ್ತ ಎಂದು ನಾವು ಹೇಳುವುದಿಲ್ಲ. ಇತ್ತೀಚಿನ ಹಲವು ವರದಿಗಳು ಇದನ್ನು ಬಹಿರಂಗಪಡಿಸಿವೆ. ನೀವು ಒಂದು ಹನಿ ಮದ್ಯಪಾನ ಸೇವಿಸಿದರೂ ನಿಮ್ಮ ಆರೋಗ್ಯಕ್ಕೆ ತೊಂದರೆ ಶುರುವಾಗುತ್ತದೆ. ಹೆಚ್ಚು ಕುಡಿದಷ್ಟು ನಿಮ್ಮ ಆರೋಗ್ಯಕ್ಕೆ ತೀವ್ರ ಹಾನಿಯಾಗುತ್ತದೆ ಅತಿಯಾದ ಮದ್ಯಪಾನದಿಂದ ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪಿನ ಘಟಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...