ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ HIV ಸೋಂಕಿತ ರಕ್ತ ಚುಚ್ಚಿದ ಯುವಕ; ಬಂಧನ

Date:

ಯುವಕನೊಬ್ಬ ಎಚ್‌ಐವಿ ಸೋಂಕಿಗೆ ತುತ್ತಾಗಿದ್ದು, ಆತನನ್ನು ಮದುವೆಯಾಗಲು ಆತನ ಸಂಬಂಧಿಕ ಯುವತಿ ನಿರಾಕರಿಸಿದ್ದಾರೆ. ಆ ಕಾರಣಕ್ಕೆ, ಕುಪಿತಗೊಂಡ ಯುವಕ ತನ್ನದೇ ಎಚ್‌ಐವಿ ಪೀಡಿತ ರಕ್ತವನ್ನು ಸಿರಿಂಜ್ ಮೂಲಕ ಯುವತಿಗೆ ಚುಚ್ಚಿರುವ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 11ರಂದು, ಹೈದರಾಬಾದ್‌ನ ಪೋಚಾರಂ ಐಟಿ ಕಾರಿಡಾರ್ ಪ್ರದೇಶದಲ್ಲಿರುವ ಯುವತಿಯ ಫ್ಲಾಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅಲ್ಲಿಗೆ ಬಂದ ಆರೋಪಿ, ಯಾವುದೇ ಪ್ರಚೋದನೆಯಿಲ್ಲದೆ ಇದ್ದಕ್ಕಿದ್ದಂತೆ ತನ್ನ ಜೇಬಿನಿಂದ ಸಿರಿಂಜ್ ತೆಗೆದು ಅವಳ ಮುಂಗೈಗೆ ಚುಚ್ಚಿದ್ದಾನೆ. “ಸಿರಿಂಜ್‌ನಲ್ಲಿದ್ದ ರಕ್ತವನ್ನು ಅವಳ ದೇಹಕ್ಕೆ ಸೇರಿಸಿದ ನಂತರ, ‘ನಾನು ನಿನಗೆ ನನ್ನ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದೇನೆ’ ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ,” ಎಂದು ಇನ್ಸ್‌ಪೆಕ್ಟರ್ ಬಿ. ರಾಜು ತಿಳಿಸಿದ್ದಾರೆ.

ಆರಂಭದಲ್ಲಿ ಈ ವಿಷಯವನ್ನು ಯುವತಿ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ, ಮಾರನೇ ದಿನ ಆಕೆಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ, ಮಾರ್ಚ್ 13ರಂದು ಕುಟುಂಬಸ್ಥರು ಅವಳನ್ನು ವೈದ್ಯರ ಬಳಿ ಕರೆದೊಯ್ದಿದ್ದಾರೆ. ತಪಾಸಣೆ ವೇಳೆ ವೈದ್ಯರು ಮುಂಗೈ ಮೇಲಿದ್ದ ರಕ್ತದ ಕಲೆ ಮತ್ತು ಗುರುತನ್ನು ಕಂಡು ಪ್ರಶ್ನಿಸಿದ್ದಾರೆ. ಆಗ ಕುಟುಂಬದವರ ಸಮ್ಮುಖದಲ್ಲಿ ಯುವತಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. “ನಾವು ಯುವತಿಯನ್ನು ವೈದ್ಯಕೀಯ ತಪಾಸಣೆಗಾಗಿ ಗಾಂಧಿ ಆಸ್ಪತ್ರೆಗೆ ಕಳುಹಿಸಿದ್ದೇವೆ. ರಕ್ತ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಲು ಕನಿಷ್ಠ ಮೂರು ತಿಂಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಇಸ್ರೇಲ್-ಅಮೆರಿಕಕ್ಕೆ ಪ್ರತಿರೋಧವೊಡ್ಡಿ ಯುದ್ಧದಲ್ಲಿ ಇರಾನ್ ಮೇಲುಗೈ ಸಾಧಿಸುತ್ತಿದೆಯೇ?

ಮೆಡಿಪಲ್ಲಿ ಎಸಿಪಿ ಬಿ. ಮೋಹನ್ ಕುಮಾರ್ ನೀಡಿರುವ ಮಾಹಿತಿಯಂತೆ, ಆರೋಪಿಯ ತಂದೆ (ಆಟೋ ಚಾಲಕ) ಸುಮಾರು 19 ವರ್ಷಗಳ ಹಿಂದೆ ಏಡ್ಸ್‌ನಿಂದ ಸಾವನ್ನಪ್ಪಿದ್ದರು. ತಾಯಿ ಕೂಡ ಎಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ. ಆರೋಪಿ ಯುವಕನಿಗೂ ಹುಟ್ಟಿನಿಂದಲೇ ಎಚ್‌ಐವಿ ವೈರಸ್ ತಗುಲಿತ್ತು ಎಂದು ತಿಳಿದುಬಂದಿದೆ.

“2025ರ ಸೆಪ್ಟೆಂಬರ್‌ವರೆಗೆ ಎರಡೂ ಕುಟುಂಬಗಳು ಇವರ ಮದುವೆಗೆ ಒಪ್ಪಿದ್ದವು. ಆದರೆ, ಯುವಕನ ಪೋಷಕರು ಎಚ್‌ಐವಿ ಸೋಂಕಿಗೆ ತುತ್ತಾಗಿದ್ದರು ಎಂಬುದನ್ನು ಅರಿತಿದ್ದ ಯುವತಿಯ ಕುಟುಂಬವು, ಯುವಕನನ್ನು ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿತ್ತು. “ಪರೀಕ್ಷೆಯಲ್ಲಿ ಆತನಿಗೆ ಎಚ್‌ಐವಿ ಇರುವುದು ದೃಢಪಟ್ಟಿದ್ದರಿಂದ ಮದುವೆ ರದ್ದಾಗಿತ್ತು. ಅಂದಿನಿಂದ ಯುವತಿಯೂ ಅವನನ್ನು ಭೇಟಿಯಾಗುವುದನ್ನು ನಿಲ್ಲಿಸಿದ್ದರು,” ಎಂದು ಎಸಿಪಿ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮದುವೆಗೆ ಒಪ್ಪುವಂತೆ ಪದೇ ಪದೇ ಅವಳ ಮೇಲೆ ಒತ್ತಡ ಹೇರುತ್ತಿದ್ದ. ಒಂದು ವೇಳೆ ಆಕೆಗೂ ಸೋಂಕು ತಗುಲಿದರೆ, ಆಕೆಯ ಕುಟುಂಬಸ್ಥರು ಮದುವೆಗೆ ಅಡ್ಡಿಪಡಿಸುವುದಿಲ್ಲ ಎಂದು ಭಾವಿಸಿ ಆತ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...