ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಗುಂಪು ಹತ್ಯೆ; ಕಳ್ಳತನದ ಶಂಕೆ ಮೇಲೆ ವ್ಯಕ್ತಿಗೆ ಥಳಿಸಿ ಕೊಲೆ

Date:

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಗುಂಪು ಹತ್ಯೆ ಪ್ರಕರಣ ನಡೆದಿದ್ದು, ಕಳ್ಳತನದ ಶಂಕೆ ಮೇಲೆ ವ್ಯಕ್ತಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ದಕ್ಷಿಣ 24 ಪರಗಣದ ಭಂಗಾರ್‌ನಲ್ಲಿ ನಡೆದಿದೆ.

ಗುಂಪು ಹಿಂಸಾಚಾರ ಅಥವಾ ಗುಂಪು ಹತ್ಯೆಯ ಘಟನೆಗಳನ್ನು ನಿಗ್ರಹ ಮಾಡಲು ಕ್ರಮಕೈಗೊಳ್ಳುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೊಲೀಸರಿಗೆ ಆದೇಶಿಸಿದ ಬೆನ್ನಲ್ಲೇ ಮತ್ತೊಂದು ಗುಂಪು ಹತ್ಯೆ ಘಟನೆ ನಡೆದಿದೆ.

ಫೂಲ್ಬರಿ ನಿವಾಸಿ ಅಜ್ಗರ್ ಮೊಲ್ಲಾ ಎಂಬಾತನ ಮೇಲೆ ಭಾನುವಾರ ಮುಂಜಾನೆ ಸ್ಥಳೀಯರ ಗುಂಪೊಂದು ಪೊಲೀಸ್ ಠಾಣೆಯ ಸಮೀಪವಿರುವ ಸ್ಥಳದಲ್ಲಿಯೇ ಹಲ್ಲೆ ನಡೆಸಿದೆ. ಬಹಳ ಹೊತ್ತಿನವರೆಗೆ ರಸ್ತೆಯಲ್ಲೇ ಬಿದ್ದಿದ್ದ ಶವವನ್ನು ಗ್ರಾಮಸ್ಥರು ಅಲ್ಲಿಂದ ತೆಗೆಯುವವರೆಗೂ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಿವೆ ಎಂದು ಸ್ಥಳೀಯರು ಆರೋಪಿಸಿದ್ದು, ಈತನನ್ನು ಕಳ್ಳನೆಂದು ಭಾವಿಸಿ ಥಳಿಸಿದ್ದಾರೆ. ದಾಳಿಯ ವೇಳೆ ಅಜ್ಗರ್ ಮೊಲ್ಲಾ ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸಾವನ್ನಪ್ಪಿದ್ದಾನೆ.

ಇದನ್ನು ಓದಿದ್ದೀರಾ?  ಛತ್ತೀಸ್‌ಗಢ | ದನ ಸಾಗಿಸುತ್ತಿದ್ದ ಇಬ್ಬರ ಮೃತದೇಹ ಪತ್ತೆ; ಗುಂಪು ಹತ್ಯೆ ಆರೋಪ

“ಈ ಭಾಗದಲ್ಲಿ ಬಹಳ ದಿನಗಳಿಂದ ಕಳ್ಳತನ ನಡೆಯುತ್ತಿದ್ದು, ರಾತ್ರಿ ಕಾವಲುಗಾರ ಇದ್ದಾರೆ. ಆದರೆ ಅವರು ಹೋದ ಕೂಡಲೇ ಕಳ್ಳತನ ನಡೆಯುತ್ತದೆ. ಇಂದು ಒಬ್ಬ ಸಿಕ್ಕಿಬಿದ್ದಿದ್ದು ಸ್ಥಳೀಯರು ಆತನನ್ನು ಹಗ್ಗದಿಂದ ಕಟ್ಟಿ ಹಾಕಿ ಥಳಿಸಿದ್ದಾರೆ. ಆತ ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸಾವನ್ನಪ್ಪಿದ್ದಾನೆ” ಎಂದು ಪ್ರದೇಶದ ನಿವಾಸಿ ಶೇಖ್ ರಫೀಕುಲ್ ಹಸನ್ ಹೇಳಿದರು.

ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಅಜ್ಗರ್ ಸಂಬಂಧಿಕರು ಘಟನೆಯ ಕಾರಣದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇನ್ನು ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಗುಂಪು ಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ಜೂನ್ ಕೊನೆಯ ವಾರದಲ್ಲಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸುಮಾರು 12 ಗುಂಪು ಹತ್ಯೆ ಪ್ರಕರಣಗಳು ದಾಖಲಾಗಿದೆ. ಆ ಪೈಕಿ ಒಂದು ಹತ್ಯೆ ಪ್ರಕರಣವು ಉತ್ತರ ದಿನಜ್‌ಪುರ ಜಿಲ್ಲೆಯಲ್ಲಿ ಭಾರೀ ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು.

ಇದನ್ನು ಓದಿದ್ದೀರಾ? ಕೇರಳ | ಯೂಟ್ಯೂಬರ್ ಮೇಲೆ ಗುಂಪು ಹಲ್ಲೆ, ಹತ್ಯೆ; 10 ಮಂದಿ ಬಂಧನ

ಜೂನ್ 28ರಂದು ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಶಾಸಕ ಹಮೀದುಲ್ ರಹಮಾನ್ ಅವರೊಂದಿಗೆ ನಂಟು ಹೊಂದಿದ್ದಾರೆಂದು ಆರೋಪಿಸಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ಪ್ರಬಲ ತಜ್ಮುಲ್ ಹಕ್ ದಂಪತಿಯನ್ನು ಥಳಿಸಿದ್ದಾರೆ ಎಂದು ದೂರಲಾಗಿದೆ. ಈ ಕೃತ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಟಿಎಂಸಿ ನಾಯಕ ತಜ್ಮುಲ್ ಹಕ್‌ನ ಬಂಧನ ಮಾಡಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...