ರಾಜಸ್ಥಾನ | ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಶಂಕೆ; ಯುವಕನಿಗೆ ಥಳಿಸಿ ಹತ್ಯೆ

Date:

ವಿವಾಹಿತ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಯುವಕನೋರ್ವನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ರಾವತ್ ಮಜ್ರಾ ಗ್ರಾಮದಲ್ಲಿ ನಡೆದಿದೆ.

ಬುಧವಾರ ರಾತ್ರಿ 25 ವರ್ಷದ ಯುವಕನಿಗೆ ಥಳಿಸಿ ಹತ್ಯೆ ಮಾಡಲಾಗಿದ್ದು ಈ ಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯ ಅತ್ತೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಗುರುವಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ನೀಮ್ ಕಾ ಥಾನಾ ಸರ್ಕಲ್) ಅನುಜ್ ದಾಲ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗೋ ಜ್ವರದಿಂದ ಮಹಿಳೆ ಸಾವು; ಮಾರ್ಗಸೂಚಿ ಹೊರಡಿಸಿದ ರಾಜಸ್ಥಾನ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಯುವಕನನ್ನು ಮುಖೇಶ್ ಕುಮಾರ್ ಮೀನಾ ಎಂದು ಗುರುತಿಸಲಾಗಿದೆ. ಮುಖೇಶ್ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿದೆ ಎಂಬ ಮಾಹಿತಿ ಲಭಿಸಿದ ಕೂಡಲೆ ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿದ್ದು ಮುಖೇಶ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಮುಖೇಶ್ ಸಾವನ್ನಪ್ಪಿರುವುದಾಗಿ ಘೋಷಿಸಿಸಿದ್ದಾರೆ ಎಂದು ಹೇಳಿದರು.

ಪೊಲೀಸರ ಪ್ರಕಾರ, ಮುಖೇಶ್ ಬನ್ಸೂರ್ ನಿವಾಸಿಯಾಗಿದ್ದು, ಟೆಂಟ್ ವ್ಯಾಪಾರವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಒಂದು ವರ್ಷದ ಹಿಂದೆ ಆತನ ಉದ್ಯೋಗ ಸ್ಥಳದಿಂದ 2 ಕಿಮೀ ದೂರದಲ್ಲಿರುವ ರಾವತ್ ಮಜ್ರಾ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಭೇಟಿಯಾಗಿದ್ದನು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಬುಡಕಟ್ಟು ಬಾಲಕನ ಥಳಿಸಿ ಹತ್ಯೆ: 7 ಟಿಎಂಸಿ ನಾಯಕರ ಬಂಧನ

ಮೃತನ ಸಹೋದರಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಡಿಎಸ್‌ಪಿ ಅನುಜ್ ದಾಲ್ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಗುಂಪು ಹಲ್ಲೆ ನಡೆಸಿದ್ದರಿಂದ ಮುಖೇಶ್ ಸಾವನ್ನಪ್ಪಿರುವುದಾಗಿ ಕಂಡುಬಂದಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿ ಬರಬೇಕಷ್ಟೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...