ಬಂಧಿತ ವ್ಯಕ್ತಿಗೂ ಸೈಫ್ ಅಲಿಖಾನ್ ಪ್ರಕರಣಕ್ಕೂ ಸಂಬಂಧವಿಲ್ಲ: ಪೊಲೀಸರ ಸ್ಪಷ್ಟನೆ

Date:

ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಓರ್ವ ಶಂಕಿತನನ್ನು ಬಂಧಿಸಿದ್ದಾರೆ ಎನ್ನುವ ವಿಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ (ಜ.17ರಂದು) ಮುಂಬೈ ನಗರ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದರು. ಬಂಧಿಸಿದ ವ್ಯಕ್ತಿಯನ್ನು ಬಾಂದ್ರಾ ಠಾಣೆಗೆ ಕರೆತಂದಿದ್ದರು. ಆರಂಭದಲ್ಲಿ ಈತ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಎಂದು ಹೇಳಲಾಗಿತ್ತು. ಆದರೆ ಪೊಲೀಸರು ತೀವ್ರ ವಿಚಾರಣೆ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆದೊಯ್ದ ವ್ಯಕ್ತಿಗೂ ಸೈಫ್ ಅಲಿ ಖಾನ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ
ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ (ಜ.16ರಂದು) ಮುಂಜಾನೆ 2.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಸೈಫ್ ಅಲಿಖಾನ್ ಅವರ ಮುಂಬೈನ ಬಾಂದ್ರಾ ನಿವಾಸಕ್ಕೆ ನುಗ್ಗಿ ಹಿಗ್ಗಾಮುಗ್ಗ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದ. ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಗುರುವಾರ ತಜ್ಞ ವೈದ್ಯರಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಬಾಲಿವುಡ್ ನಟ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಸೈಫ್ ಮನೆಯಲ್ಲಿ ಕೆಲಸ ಮಾಡುವ ಎಲಿಯಾಮಾ ಫಿಲಿಪ್ಸ್ ಎಂಬುವರು ಆರೋಪಿಯನ್ನು ಮೊದಲು ನೋಡಿದ್ದಾರೆ. ಆರೋಪಿಯನ್ನು ನೋಡಿದ ಮಹಿಳೆ ಕಿರುಚಿ ನಟನನ್ನು ಎಚ್ಚರಿಸಿದ್ದಾರೆ. ಈ ವೇಳೆ ಸೈಫ್‌ ಅಲಿ ಖಾನ್‌ ಅಪರಿಚಿತನ ಬಳಿ ಬಂದಾಗ ಆರೋಪಿ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಒಳನುಗ್ಗಿದವನಿಗೆ ಏನು ಬೇಕು ಎಂದು ನಟ ಕೇಳಿದಾಗ ಆತ 1 ಕೋಟಿ ರೂ. ಬೇಕೆಂದು ಬೇಡಿಕೆ ಇಟ್ಟಿದ್ದಾನೆ.

ಇದು ದರೋಡೆಗಾಗಿ ನಡೆದಿರುವ ಕೃತ್ಯವೆಂದು ಪೊಲೀಸರು ಶಂಕಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಸಂಬಂಧ 20 ತಂಡವನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಸೈಫ್ ಮನೆಗೆ ನುಗ್ಗಿದ ಆರೋಪಿಯ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯದೊಂದಿಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...