ಸಾರ್ವಕಾಲಿಕ ತಾಪಮಾನ ಏರಿಕೆ: ದೆಹಲಿ ಆಸ್ಪತ್ರೆಯಲ್ಲಿ ಓರ್ವ ಸಾವು

Date:

ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ ಏರಿಕೆಯಿಂದಾಗಿ ಮೃತಪಟ್ಟಿದ್ದಾರೆ. “ಆ ವ್ಯಕ್ತಿಯು ಕೂಲರ್ ಅಥವಾ ಫ್ಯಾನ್ ಇಲ್ಲದ ಮನೆಯಲ್ಲಿ ವಾಸಿಸುತ್ತಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದರು” ಎಂದು ತಿಳಿಸಿದ್ದಾರೆ.

“ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿದೆ. ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ” ಎಂದು ಹೇಳಿದ್ದಾರೆ. ಇನ್ನು ಈ ಬೇಸಿಗೆಯಲ್ಲಿ ದೆಹಲಿಯಲ್ಲಿ ತಾಪಮಾನದಿಂದಾಗಿ ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ಬುಧವಾರ ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ನೀರಿನ ಬಿಕ್ಕಟ್ಟು ಕೂಡಾ ಉಂಟಾಗಿದೆ.

ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಮುಂಗೇಶಪುರ ನಿಲ್ದಾಣದ ರೆಕಾರ್ಡ್ ರೀಡಿಂಗ್ ಸೆನ್ಸಾರ್ ದೋಷ ಅಥವಾ ಸ್ಥಳೀಯ ಅಂಶಗಳಿಂದಾಗಿ ಸಂಭವಿಸಿದೆಯೇ ಎಂದು ಹವಾಮಾನ ಇಲಾಖೆ ಈಗ ತನಿಖೆ ನಡೆಸುತ್ತಿದೆ.

ಇನ್ನು ಕೆಲವು ಪ್ರದೇಶಗಳಲ್ಲಿ ತಾಪಮಾನ ಕುಸಿತ ಕಾಣುತ್ತಿದೆ. ಆದರೆ ಕೆಲವೆಡೆ ತಾಪಮಾನ ಇನ್ನೂ ಸರಾಸರಿ 45-50 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ ಮಹಪಾತ್ರ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...