ಮರ್ಯಾದೆಗೇಡು ಹತ್ಯೆ | ಸಹೋದರಿಯನ್ನು ಕೊಂದ ಯುವಕ; ತಂದೆಯಿಂದ ಪುತ್ರನ ಸಮರ್ಥನೆ!

Date:

ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಬೆಳಕಿಗೆ ಬಂದಿದೆ. ಅಂತರ್ ಧರ್ಮೀಯ ಪ್ರೇಮ ಸಂಬಂಧವಿದ್ದ ಕಾರಣಕ್ಕೆ 25 ವರ್ಷದ ಯುವಕನೋರ್ವ ತನ್ನ 21 ವರ್ಷದ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಕುಟುಂಬಕ್ಕೆ ಅವಮಾನ ಮಾಡಿದ ತನ್ನ ಮಗಳನ್ನು ಕೊಂದಿದ್ದು ಸರಿ ಎಂದು ಮೃತಳ ತಂದೆ ತಮ್ಮ ಮಗನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮಟವಾಲಿ ಪಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯುವಕ ಜಾನೆ ಆಲಂ ಸ್ವತಃ ತಾನಾಗಿಯೇ ಪೊಲೀಸರಿಗೆ ಶರಣಾಗಿ ತಾನು ತನ್ನ ಸಹೋದರಿ ರೂಪ್ ಜಹಾನ್ ಅನ್ನು ಕೊಂದಿರುವುದಾಗಿ ಹೇಳಿದ್ದಾನೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಮರ್ಯಾದೆಗೇಡು ಹತ್ಯೆ: ಯುವತಿಗೆ ವಿದ್ಯುತ್ ಸ್ಪರ್ಶಿಸಿ ಕೊಲೆ; ದುರುಳ ತಂದೆ-ಮಗನ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಮಗ ಜಾನೆ ಆಲಂ ಕೃತ್ಯವನ್ನು ಸಮರ್ಥಿಸಿಕೊಂಡ ಅವರ ತಂದೆ ನೌಷರ್ , “ರೂಪ್ ನಡವಳಿಕೆ ಸರಿ ಇರಲಿಲ್ಲ. ಅವರು ಶಿವಂ ಸೈನಿ (22) ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನನ್ನು ಮದುವೆ ಆಗಲು ಬಯಸಿದ್ದಳು. ಇದರಿಂದಾಗಿ ಗ್ರಾಮಸ್ಥರು ನನ್ನನ್ನು ಗೇಲಿ ಮಾಡುತ್ತಿದ್ದರು. ನನ್ನ ಮಗನಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಮ್ಮನ್ನು ಅವಮಾನಿಸಿದ ಆಕೆಯನ್ನು ಕೊಂದಿದ್ದು ಸರಿ” ಎಂದು ಸಮರ್ಥಿಸಿಕೊಂಡಿದ್ದಾರೆ.

“ನಾವು ಮುಸ್ಲಿಮರು, ಮತ್ತು ಅವರು ಸೈನಿ. ನಾವು ಹೇಗೆ ಮದುವೆ ಮಾಡಿಕೊಡುವುದು? ಹುಡುಗ ನಮ್ಮ ಸಮುದಾಯಕ್ಕೆ ಸೇರಿದವನಾಗಿದ್ದರೆ ವಿಷಯ ಬೇರೆಯಾಗಿರುತ್ತಿತ್ತು” ಎಂದೂ ಹೇಳಿಕೊಂಡಿದ್ದಾರೆ.

ಅಂತರ್ಜಾತಿ ಅಥವಾ ಅಂತರ್ಧರ್ಮೀಯ ವಿವಾಹವಾಗಿ ಕುಟುಂಬ ಅಥವಾ ಸಮುದಾಯದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿ ಸ್ವಂತ ಕುಟುಂಬದ ಸದಸ್ಯರನ್ನೇ ಕೊಲೆ ಮಾಡುವ ಘಟನೆಗಳು ದೇಶದಲ್ಲಿ ಅಧಿಕವಾಗುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಮತ್ತು ಇತ್ತೀಚಿನ ವರದಿಗಳ ಪ್ರಕಾರ, ಈ ಅಪರಾಧದ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಅದರಲ್ಲೂ ಹೆಚ್ಚಾಗಿ ಕುಟುಂಬದ ಮರ್ಯಾದೆ ನೆಪದಲ್ಲಿ ಬಲಿಯಾಗುತ್ತಿರುವುದು ಮಹಿಳೆಯರು.

ದಕ್ಷಿಣ ಭಾರತದಲ್ಲೂ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಕರ್ನಾಟಕದ ಧಾರವಾಡ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಇತ್ತೀಚೆಗೆ (2025-26) ಆಘಾತಕಾರಿ ಘಟನೆಗಳು ವರದಿಯಾಗಿವೆ. ಕರ್ನಾಟಕ ಸರ್ಕಾರವು ಇಂತಹ ಕೃತ್ಯಗಳನ್ನು ತಡೆಯಲು ‘ಮರ್ಯಾದೆಗೇಡು ಹತ್ಯೆ ತಡೆ ಕಾಯ್ದೆ’ ಎಂಬ ಪ್ರತ್ಯೇಕ ಮತ್ತು ಕಟ್ಟುನಿಟ್ಟಾದ ಕಾನೂನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...