ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ದುರುಳ

Date:

ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್‌ ಜಿಲ್ಲೆಯಲ್ಲಿ ನಡೆದಿದೆ.

ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ ತನ್ನ ಮನೆಗೆ ಹೊರಗೆ ಬೆಂಕಿ ಹಚ್ಚಿ, ಬೆಂಕಿ ಕಾಯುತ್ತಾ ಕುಳಿತಿದ್ದ. ಈ ವೇಳೆ, ಅಲ್ಲಿಗೆ ಅದೇ ಗ್ರಾಮದ ನಿತೀಶ್‌ ಕುಮಾರ್‌ ಎಂಬಾತ ಬಂದಿದ್ದಾನೆ. ಅಂಗಡಿಯಿಂದ ಸಿಗರೇಟ್ ತಂದುಕೊಡುವಂತೆ ಬಾಲಕನನ್ನು ಕೇಳಿದ್ದಾನೆ. ಆದರೆ, ವಿಪರೀತ ಚಳಿ ಇದೆ, ಅಂಗಡಿಗೆ ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾರೆ.

ತನ್ನ ಮಾತನ್ನು ಬಾಲಕ ನಿರಾಕರಿಸಿದ್ದಕ್ಕೆ ಕುಪಿತಕೊಂಡ ದುಷ್ಕರ್ಮಿ ನಿತೀಶ್‌ ಕುಮಾರ್, ಪಿಸ್ತೂಲ್‌ನಿಂದ ಬಾಲಕನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಬಾಲಕನ ಕುಟುಂಬಸ್ಥರು ಮತ್ತು ನರೆಹೊರೆಯವರು ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯು ಚಿಕಿತ್ಸೆ ಲಭ್ಯವಿರುವ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಮುಂಗೇರ್‌ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಕನ ಪರಿಸ್ಥಿತಿ ಬಗ್ಗೆ ಆಸ್ಪತ್ರೆಯ ವೈದ್ಯರು ಪ್ರತಿಕ್ರಿಯಿಸಿದ್ದು, “ಬಾಲಕನ ಹಣೆಯಲ್ಲಿ ಮೂಗಿನ ಬಳಿ ಗುಂಡು ಸಕ್ಕಿಕೊಂಡಿತ್ತು. ಗುಂಡನ್ನು ತೆಗೆಯಲಾಗಿದೆ. ಬಾಲಕನ ಪರಿಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಆರೋಪಿ ನಿತೀಶ್ ಕುಮಾರ್ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆತ ಮತ್ತೊಂದು ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ರಾಜ್ಯ ಬಿಜೆಪಿ-ಜೆಡಿಯು ಸರ್ಕಾರದ ವಿರುದ್ಧ ಆರ್‌ಜೆಡಿ ನಾಯಕ ಜಯಪ್ರಕಾಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಇದು ಬಿಹಾರದ ಅರಾಜಕತೆಗೆ ಉದಾಹರಣೆಯಾಗಿದೆ. ಹೆಚ್ಚುತ್ತಿರುವ ಅಪರಾಧಗಳು ಆಡಳಿತದ ವೈಫಲ್ಯವನ್ನು ಪ್ರತಿಬಿಂಬಿಸುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...