2016ರಲ್ಲೂ ನೋಟು ಅಮಾನ್ಯೀಕರಣ ವಿರುದ್ಧ ಪ್ರತಿಭಟಿಸಲು ಲೋಕಸಭೆಗೆ ಜಿಗಿದಿದ್ದ ಅಪರಿಚಿತ !

Date:

ಇಂದು (ಡಿ.13) ಲೋಕಸಭೆ ಗ್ಯಾಲರಿಯಿಂದ ಇಬ್ಬರು ಅಪರಿಚಿತರು ಜಿಗಿದು ಆತಂಕ ಸೃಷ್ಟಿಸಿದ್ದಾರೆ. ಕಲಾಪ ನಡೆಯುತ್ತಿರುವಾಗಲೇ ಇಬ್ಬರು ವಿದ್ಯಾರ್ಥಿಗಳು ಜಿಗಿದಿರುವುದರಿಂದ ಕೆಲ ಕಾಲ ಸದನದಲ್ಲಿದ್ದ ಸಂಸದರು ಆತಂಕಕ್ಕೆ ಒಳಗಾಗಿದ್ದರು.

ಇಬ್ಬರು ಯುವಕರು ಲೋಕಸಭೆ ಸದನಕ್ಕೆ ಜಿಗಿದು ಟಿಯರ್ ಗ್ಯಾಸ್ ರೀತಿಯ ಸ್ಪೋಟಕವನ್ನು ಎಸೆದು ಆತಂಕ ಉಂಟು ಮಾಡಿದರು.

ಸದನದಲ್ಲಿದ್ದ ಸಂಸದರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಮೈಸೂರು ಮೂಲದ ಮನೋರಂಜನ್‌ ಹಾಗೂ ಮತ್ತೊಬ್ಬ ಉತ್ತರ ಪ್ರದೇಶದ ಲಖನೌ ಮೂಲದ ಸಾಗರ್‌ ಶರ್ಮಾ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಂಸದ ಡ್ಯಾನಿಶ್ ಅಲಿ, “ದಾಳಿ ನಡೆಸಿದ ಯುವಕರ ಪೈಕಿ ಓರ್ವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದರು” ಎಂದು ಮಾಹಿತಿ ನೀಡಿದ್ದಾರೆ.

2016ರಲ್ಲಿ ನಡೆದಿದ್ದ ಘಟನೆ

ಇದೇ ರೀತಿಯ ಲೋಕಸಭೆಗೆ ನುಗ್ಗಿದ ಘಟನೆ 2016ರಲ್ಲೂ ನಡೆದಿತ್ತು. ಹಳೆಯ 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ 2016ರ ನವೆಂಬರ್‌ 25 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ವ್ಯಕ್ತಿಯೊಬ್ಬರು ಸದನಕ್ಕೆ ಜಿಗಿಯಲು ಪ್ರಯತ್ನಿಸಿದ್ದರು.

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಭದ್ರತಾಲೋಪ | ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದ ಅಪರಿಚಿತರು

ಬುಲಂದ್‌ಶಹರ್‌ನ ಬಿಜೆಪಿ ಸಂಸದ ಭೋಲಾ ಸಿಂಗ್ ಅವರ ಪಾಸ್‌ ಪಡೆದು ರಾಕೇಶ್ ಸಿಂಗ್ ಬಘೇಲ್ ಎಂಬಾತ ಅಂದು ಸಂಸತ್ತಿಗೆ ಪ್ರವೇಶಿಸಿ ಗ್ಯಾಲರಿಯಿಂದ ಜಿಗಿಯಲು ಪ್ರಯತ್ನಿಸಿದ್ದ. ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿ ಬಂಧಿಸಿದ್ದರು.

ಈ ಘಟನೆ ನಡೆದ ನಂತರ ಲೋಕಸಭೆ ಆಗಿನ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸದನವನ್ನು ಮುಂದೂಡಿದ್ದರು. ರಾಕೇಶ್ ಸಿಂಗ್ ಬಘೇಲ್ ಅಂದು ಬೆಳಗ್ಗೆ 11.20 ರ ಸುಮಾರಿಗೆ ಸದನಕ್ಕೆ ಜಿಗಿಯಲು ಪ್ರಯತ್ನಿಸಿದ್ದರು. ಅವರನ್ನು ಭದ್ರತಾ ಸಿಬ್ಬಂದಿ ವಿಚಾರಣೆಗಾಗಿ ಕರೆದೊಯ್ದರು.

ಅಂದು ನುಗ್ಗಿದ್ದ ಬಘೇಲ್ ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯವರು ಎಂದು ಸ್ಪೀಕರ್ ಮಹಾಜನ್ ಸದನಕ್ಕೆ ತಿಳಿಸಿದ್ದರು.

ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೇ ಇಂದು ಇಬ್ಬರು ಯುವಕರು ಸಂಸತ್‌ಗೆ ಜಿಗಿದಿದ್ದಾರೆ. ಲೋಕಸಭೆಯಲ್ಲಿ ಭದ್ರತಾ ಲೋಪದ ಕುರಿತು ವಿಪಕ್ಷ ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದು, ತೀವ್ರ ತನಿಖೆಗೆ ಸ್ಪೀಕರ್‌ ಅವರಿಗೆ ಆಗ್ರಹಿಸಿದ್ದಾರೆ.

ಡಿಸೆಂಬರ್ 13 ರಂದು, 2001 ರಲ್ಲಿ ಸಂಸತ್ತಿನ ಮೇಲೆ ಉಗ್ರರು ದಾಳಿ ನಡೆಸಿದ್ದರು. ಸದನದೊಳಗೆ ನುಗ್ಗಲು ಯತ್ನಿಸಿದ ಉಗ್ರರ ಯತ್ನವನ್ನು ಭದ್ರತಾ ಸಿಬ್ಬಂದಿ ವಿಫಲಗೊಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...