ಹೈದರಾಬಾದ್ | ಮಹಿಳೆ ಕೊಂದು ದೇಹದ ಭಾಗಗಳ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ವ್ಯಕ್ತಿ ಬಂಧನ

Date:

  • ಮಹಿಳೆ ತಲೆಯನ್ನು ಹೈದರಾಬಾದ್ ಮುಸಿ ನದಿ ಬಳಿ ಎಸೆದಿದ್ದ ಆರೋಪಿ
  • ₹7 ಲಕ್ಷ ಸಾಲ ಹಿಂತಿರುಗಿಸುವಂತೆ ಆರೋಪಿ ಜತೆ ಜಗಳವಾಡಿದ್ದ ಮಹಿಳೆ

ಇಡೀ ದೇಶವನ್ನೇ ಒಂದು ಕ್ಷಣ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮಾದರಿಯಲ್ಲೇ ಹೈದರಾಬಾದ್‌ ನಗರದಲ್ಲಿ ಮತ್ತೊಂದು ಪ್ರಕರಣ ಬುಧವಾರ (ಮೇ 24) ವರದಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶ್ರದ್ಧಾ ವಾಕರ್‌ ಪ್ರಕರಣದಂತೆ ಹೈದರಾಬಾದ್‌ನಲ್ಲಿ ತನ್ನ ಜೊತೆಯಲ್ಲಿದ್ದ ಸಂಗಾತಿಯನ್ನು ಹತ್ಯೆ ಮಾಡಿ ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿ. ಚಂದ್ರಮೋಹನ್ (48) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈದರಾಬಾದ್‌ ಮುಸಿ ನದಿ ಬಳಿ ಮೇ 17 ರಂದು ಮಹಿಳೆಯ ಶಿರವೊಂದು ಪತ್ತೆಯಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಹತ್ಯೆಯ ವಿಷಯ ತಿಳಿದು ಬಂದಿದೆ.

“ಸ್ಟಾಕ್‌ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಆರೋಪಿ ಚಂದ್ರಮೋಹನ್‌ ತನ್ನ ಜೊತೆ ಕಳೆದ 15 ವರ್ಷಗಳಿಂದ 55 ವರ್ಷದ ಅನುರಾಧ ರೆಡ್ಡಿ ನಗರದ ಚೂತನ್ಯಪುರಿ ಕಾಲೋನಿಯಲ್ಲಿ ವಾಸವಾಗಿದ್ದರು.”

“ಬಡ್ಡಿಗೆ ಸಾಲ ನೀಡುತ್ತಿದ್ದ ಅನುರಾಧ ಅವರು ಚಂದ್ರಮೋಹನ್‌ಗೂ ₹7 ಲಕ್ಷ ಸಾಲ ನೀಡಿದ್ದರು. ಹಣ ಹಿಂತಿರುಗಿಸುವಂತೆ ಅನುರಾಧ ಆತನಿಗೆ ಒತ್ತಾಯಿಸಿದ್ದರು. ಈ ಸಂಬಂಧ ಇಬ್ಬರ ನಡುವೆ ಜಗಳವಾಗಿತ್ತು”.

“ಮೇ 12 ರಂದು ಇಬ್ಬರ ನಡುವೆ ಮತ್ತೆ ಜಗಳ ಆರಂಭವಾಗಿದೆ. ಈ ವೇಳೆ ಆರೋಪಿ ಚಂದ್ರಮೋಹನ್‌ ಅನುರಾಧ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಅವರು ಮೃತಪಟ್ಟಿದ್ದಾರೆ”.

“ಬಳಿಕ ಆರೋಪಿಯು ಸಣ್ಣ ಕಲ್ಲು ತುಂಡರಿಸುವ ಯಂತ್ರದಿಂದ ಮಹಿಳೆಯ ದೇಹವನ್ನು ತುಂಡರಿಸಿದ್ದ. ತಲೆ ಕತ್ತರಿಸಿ ಪಾಲಿಥಿನ್‌ ಚೀಲದಲ್ಲಿ ಸುತ್ತಿಟ್ಟಿದ್ದನು. ಕೈ, ಕಾಲುಗಳನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದನು” ಎಂದು ಆಗ್ನೇಯ ವಲಯ ಪೊಲೀಸ್‌ ಉಪ ಆಯುಕ್ತ (ಡಿಸಿಪಿ) ಸಿ.ಎಚ್.ರೂಪೇಶ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಾಸ್‌ಪೋರ್ಟ್‌ ಪಡೆಯಲು ರಾಹುಲ್‌ ಮನವಿ; ವಿಚಾರಣೆ ಮುಂದೂಡಿದ ನ್ಯಾಯಾಲಯ

“ಮೇ 15 ರಂದು ಆಟೊದಲ್ಲಿ ತೆರಳಿ ತಲೆಯನ್ನು ಮುಸಿ ನದಿ ಬಳಿ ಬಿಸಾಡಿದ್ದ. ಅಲ್ಲದೆ ಫಿನಾಯಿಲ್‌, ಕರ್ಪೂರ ಮತ್ತು ಅಗರಬತ್ತಿಗಳನ್ನು ತಂದು ದೇಹದ ಭಾಗಗಳಿಗೆ ಸಿಂಪಡಿಸಿ ದುರ್ನಾತ ಬರದಂತೆ ಮಾಡಿದ್ದನು. ಆರೋಪಿ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಬಗ್ಗೆ ಯೂಟ್ಯೂಬ್‌ ದೃಶ್ಯಗಳನ್ನು ನೋಡಿದ್ದ” ಎಂದು ಪೊಲೀಸರು ಹೇಳಿದರು.

ಅನುರಾಧ ಇನ್ನೂ ಬದುಕಿದ್ದಾರೆ ಎಂದು ಬಿಂಬಿಸಲು ಆರೋಪಿಯು ಹೈದರಾಬಾದ್ ನಗರದ ಮಹಿಳೆಯ ಪರಿಚಯಸ್ಥರಿಗೆ ಆಕೆಯ ಮೊಬೈಲ್‌ನಿಂದ ಆಗಾಗ್ಗೆ ಸಂದೇಶ ಕಳುಹಿಸುತ್ತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...