ಶರದ್‌ ಪವಾರ್‌ಗೆ ದಾಬೋಲ್ಕರ್‌ ರೀತಿ ಕೊಲ್ಲುವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

Date:

  • ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಶರದ್‌ ಪವಾರ್‌ ಅವರಿಗೆ ಜೀವ ಬೆದರಿಕೆ ಎಂದಿದ್ದ ಎನ್‌ಸಿಪಿ
  • ಖಾಸಗಿ ಸಂಸ್ಥೆಯಲ್ಲಿ ಡೇಟಾ ಫೀಡಿಂಗ್, ಅನಾಲಿಟಿಕ್ಸ್ ಕೆಲಸ ಮಾಡುತ್ತಿದ್ದ ಆರೋಪಿ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಲ್ಲಿ ಪುಣೆಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಸೋಮವಾರ (ಜೂನ್‌ 12) ಬಂಧಿಸಿದ್ದಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ‘ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್’ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಾಗರ್ ಬರ್ವೆ ಎಂಬ ವ್ಯಕ್ತಿ ಬಂಧಿತ ಆರೋಪಿ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಅಪರಾಧ ವಿಭಾಗದ ಪೊಲೀಸರು ಬರ್ವೆಯನ್ನು ಶರದ್‌ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಮುಂಬೈಗೆ ಕರೆತಂದಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರದವರೆಗೆ ಆರೋಪಿಯನ್ನು ಪೊಲೀಸ್ ಬಂಧನಕ್ಕೆ ನೀಡಲಾಗಿದೆ” ಎಂದು ಅಧಿಕಾರಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಸಾಗರ್‌ ಬರ್ವೆ ಫೇಸ್‌ಬುಕ್‌ ಪೋಸ್ಟ್‌ವೊಂದರಲ್ಲಿ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದ.

“ನಿಮಗೂ (ಶರದ್‌ ಪವಾರ್) 2013ರ ಆಗಸ್ಟ್ 20ರಂದು ಪುಣೆಯಲ್ಲಿ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರಿಗಾದ ಗತಿಯೇ ಬರಲಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆಯ ಸಂದೇಶ ಬಂದಿರುವ ಬಗ್ಗೆ ಎನ್ಸಿಪಿ ಜೂನ್ 9 ರಂದು ಹೇಳಿತ್ತು.

ಆರೋಪಿ ಬರ್ವೆ ಫೇಸ್‌ಬುಕ್‌ನಲ್ಲಿ ಎರಡು ನಕಲಿ ಖಾತೆಗಳನ್ನು ತೆರೆದು ಪವಾರ್‌ ಅವರಿಗೆ ಜೀವ ಬೆದರಿಕೆಯ ಪೋಸ್ಟ್‌ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಬೃಹತ್‌ ಸಮಾವೇಶ ನಡೆಸಿದ ಸಚಿನ್‌ ಪೈಲಟ್‌; ಹೊಸ ಪಕ್ಷ ಸ್ಥಾಪನೆಯ ಕುತೂಹಲಕ್ಕೆ ತೆರೆ

ಶರದ್‌ ಪವಾರ್ ಅವರಿಗೆ ಬೆದರಿಕೆ ಕರೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ಪವಾರ್‌ ಅವರಿಗೆ ಭದ್ರತೆಯನ್ನು ಬಿಗಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಪವಾರ್‌ ಅವರ ಸುರಕ್ಷತೆಗೆ ಸರ್ಕಾರ ಅಗತ್ಯ ರೀತಿಯ ಎಲ್ಲ ಕ್ರಮಗಳನ್ನು ಕೈಗೊಳ್ಳುವುದು ಎಂದು ಹೇಳಿದರು.

ಎನ್‌ಸಿಪಿಯೊಂದಿಗೆ ಭಿನ್ನಾಭಿಪ್ರಾಯವಿದೆ. ಆದರೆ ಅದರ ನಾಯಕನಿಗೆ ಜೀವ ಬೆದರಿಕೆ ನೀಡುವುದನ್ನು ಸಹಿಸುವುದಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...