ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

Date:

  • ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ ಎಂದ ನಾಯಕಿ
  • ಮರದ ಬದಲು ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಬಳಸಿ ಎಂದು ಜನತೆಗೆ ಕರೆ

ಕತ್ತೆ ಹಾಲಿನ ಸಾಬೂನು ಯಾವಾಗಲೂ ಮಹಿಳೆಯರ ದೇಹವನ್ನು ಸುಂದರವಾಗಿ ಇಡುತ್ತದೆ. ಈಜಿಪ್ಟ್‌ ರಾಣಿ ಕ್ಲಿಯೋಪಾತ್ರಾ ಕೂಡ ಕತ್ತೆಯ ಹಾಲಿನಿಂದ ಸ್ನಾನ ಮಾಡುತ್ತಿದ್ದರು ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು ಎನ್ನಲಾದ ವಿಡಿಯೋದಲ್ಲಿ, “ಕತ್ತೆ ಹಾಲಿನಿಂದ ತಯಾರಿಸಿದ ಸೋಪುಗಳಿಗೆ ದಿಲ್ಲಿಯಲ್ಲಿ 500 ರೂ. ಬೆಲೆ ಇದೆ. ನಾವು ಮೇಕೆ ಹಾಲು ಮತ್ತು ಕತ್ತೆಯ ಹಾಲಿನೊಂದಿಗೆ ಸಾಬೂನು ತಯಾರಿಸಲು ಏಕೆ ಪ್ರಾರಂಭಿಸಬಾರದು?” ಎಂದು ಮೇನಕಾ ಗಾಂಧಿ ಪ್ರಶ್ನಿಸಿದ್ದಾರೆ.

“ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ. ನೀವು ಕತ್ತೆಯನ್ನು ನೋಡಿ ಎಷ್ಟು ದಿನವಾಯಿತು? ಅವುಗಳ ಸಂಖ್ಯೆ ಕುಸಿಯುತ್ತಿದೆ. ಅಗಸ ಸಮುದಾಯ ಕೂಡ ಕತ್ತೆಗಳನ್ನು ಬಳಸುವುದನ್ನು ನಿಲ್ಲಿಸಿದೆ. ಕತ್ತೆಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಗಮನಿಸಿದ ಒಂದು ಸಮುದಾಯ ಕತ್ತೆಗಳಿಂದ ಹಾಲನ್ನು ಕರೆದು, ಆ ಹಾಲಿನಿಂದ ಸಾಬೂನು ತಯಾರಿಸುವುದನ್ನು ಪ್ರಾರಂಭಿಸಿತು. ಈ ಹಾಲಿನಿಂದ ಮಾಡಿದ ಸೋಪು ಮಹಿಳೆಯರ ದೇಹವನ್ನು ಎಂದೆಂದಿಗೂ ಸುಂದರವಾಗಿಡುತ್ತದೆ” ಎಂದು ಮೇನಕಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

ಮರಗಳು ಕಣ್ಮರೆಯಾಗುತ್ತಿರುವ ಬಗ್ಗೆ ಕೂಡ ಮೇನಕಾ ಗಾಂಧಿ ಮಾತನಾಡಿದ್ದು, “ಮರಗಳು ಕಣ್ಮರೆಯಾಗುತ್ತಿರುವುದರಿಂದ ಕಟ್ಟಿಗೆ ದುಬಾರಿಯಾಗುತ್ತಿದೆ. ಇದೇ ಕಾರಣಕ್ಕೆ ಅಂತ್ಯಸಂಸ್ಕಾರದ ವೆಚ್ಚವೂ ಹೆಚ್ಚಾಗಿದೆ. ಮರದ ಬೆಲೆ ಎಷ್ಟು ಹೆಚ್ಚಾಗಿದೆ ಎಂದರೆ ಸಾವಿನಲ್ಲೂ ಜನ ತಮ್ಮ ಕುಟುಂಬವನ್ನು ಮತ್ತಷ್ಟು ಬಡತನಕ್ಕೆ ತಳ್ಳುತ್ತಿದ್ದಾರೆ” ಎಂದಿದ್ದಾರೆ.

“ಮರಕ್ಕೆ 15,000 ರಿಂದ 20,000 ರೂ. ನೀಡುವುದಕ್ಕಿಂತ ನಾವು ಹಸುವಿನ ಸಗಣಿಗೆ ಸುಗಂಧ ದ್ರವ್ಯ ಸೇರಿಸಿ ಮೃತದೇಹವನ್ನು ಸುಡಲು ಬಳಸಬೇಕು. ಇದರಿಂದ ಶವಸಂಸ್ಕಾರದ ವೆಚ್ಚವನ್ನು ಕೇವಲ 1,500 ರೂ.ನಿಂದ 2,000 ರೂ.ಕ್ಕೆ ಇಳಿಸುತ್ತದೆ. ಜೊತೆಗೆ ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಮಾರಾಟ ಮಾಡುವುದರ ಮೂಲಕ ಲಕ್ಷಾಂತರ ರೂ. ಆದಾಯ ಗಳಿಸಬಹುದು” ಎಂದು ಮೇನಕಾ ಗಾಂಧಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...