ಮಣಿಪುರ | ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

Date:

ಹಿಂಸಾಪೀಡಿತ ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಆಡಳಿತಾರೂಢ ಬಿಜೆಪಿಯ 23 ಶಾಸಕರು ಪ್ರತಿಜ್ಞೆ ಮಾಡಿದ್ದು, ಈ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

“ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಗಾಗಿ ನಾವು ನಿಲ್ಲುತ್ತೇವೆ ಮತ್ತು ಯಾವುದೇ ರೀತಿಯ ಪ್ರತ್ಯೇಕ ಆಡಳಿತವನ್ನು ನಾವು ಒಪ್ಪುವುದಿಲ್ಲ ಎಂದು ಶಾಸಕಾಂಗ ಸಭೆಯ ಎಲ್ಲಾ ಕೆಳಗಿರುವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ” ಎಂದು ನಿರ್ಣಯವನ್ನು ಓದಲಾಗಿದೆ.

ಗಮನಾರ್ಹ ಅಂಶವೆಂದರೆ, ಮುಖ್ಯಮಂತ್ರಿ ಬಿರೇನ್‌ಸಿಂಗ್ ಈ ನಿರ್ಣಯಕ್ಕೆ ಸಹಿ ಹಾಕಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಬಿಕ್ಕಟ್ಟಿಗೆ ಶೀಘ್ರವೇ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ನಾಯಕತ್ವದ ಮನವೊಲಿಸಲು ಶೀಘ್ರದಲ್ಲೇ ದೆಹಲಿಗೆ ತೆರಳಲು ಶಾಸಕರು ನಿರ್ಧರಿಸಿದ್ದಾರೆ.

ಸೋಮವಾರ ರಾತ್ರಿ ಸಿಎಂ ಕಾರ್ಯಾಲಯದಲ್ಲಿ ಹೊಸದಾಗಿ ರೂಪುಗೊಂಡ ಮಣಿಪುರದ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಸಹಿ ಮಾಡಿದವರು, ಪ್ರತ್ಯೇಕ ಆಡಳಿತದ ಕುಕಿ ಝೋ ಸಮುದಾಯದ ಬೇಡಿಕೆಯು ತಮಗೆ ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ: ʼಈ ದಿನʼ ವಿಶೇಷ ಸಂದರ್ಶನ ಭಾಗ-1 | ‘ಮಣಿಪುರವನ್ನು ಒಡೆದರೆ, ನಾವು ಭಾರತವನ್ನೇ ಒಡೆಯುತ್ತೇವೆ’- ತೌನೋಜಮ್ ಬೃಂದಾ

ಸೋಮವಾರ ರಾತ್ರಿ, ಮಣಿಪುರದ ಸಾವಿರಾರು ಯುವಕರು ಅವರನ್ನು ಭೇಟಿ ಮಾಡಲು ಸಿಎಂ ಬಂಗಲೆಯ ಕಡೆಗೆ ಮೆರವಣಿಗೆ ನಡೆಸಿದರು. ಆದರೆ ಭದ್ರತಾ ಪಡೆಗಳು ಅವರಲ್ಲಿ ಕೆಲವರಿಗೆ ಮಾತ್ರ ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶ ಮಾಡಿಕೊಟ್ಟವು.

ಮಣಿಪುರದಲ್ಲಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ನೀಡಬೇಕೆಂದು ಆಗ್ರಹಿಸಿದ 10 ಮಂದಿ ಕುಕಿ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಜತೆಗಿನ ಸಭೆಯಲ್ಲಿ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...