ಬುಡಕಟ್ಟು ಪ್ರಾಬಲ್ಯದ 5 ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆ ನೀಡಿ: ಪ್ರಧಾನಿಗೆ 10 ಕುಕಿ ಶಾಸಕರ ಪತ್ರ

Date:

ಮಣಿಪುರದ ಎಲ್ಲ 10 ಕುಕಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಮ್ಮ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಐದು ಜಿಲ್ಲೆಗಳಿಗೆ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.

ಮೇ 3 ರಿಂದ ಈಶಾನ್ಯ ರಾಜ್ಯವು ಕುಕಿಗಳು ಮತ್ತು ಮೀಟೀ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ತತ್ತರಿಸುತ್ತಿರುವ ಕಾರಣದಿಂದ ಕುಕಿ ಶಾಸಕರು ಚುರಾಚಂದ್‌ಪುರ, ಕಾಂಗ್‌ಪೋಕ್ಪಿ, ಚಂದೇಲ್, ತೆಂಗ್‌ನೌಪಾಲ್ ಮತ್ತು ಫರ್ಜಾಲ್ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆಗಾಗಿ ಬೇಡಿಕೆ ಇಟ್ಟಿದ್ದಾರೆ.

ಬಹುಸಂಖ್ಯಾತ ಮೀಟೀಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕು ಎನ್ನುವ ಬೇಡಿಕೆಯನ್ನು ವಿರೋಧಿಸಲು ಬುಡಕಟ್ಟು ಸಮುದಾಯಗಳು ಮೇ 3ರಂದು ರ‍್ಯಾಲಿಯನ್ನು ಆಯೋಜಿಸಿದ ನಂತರ ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾಯಿತು. ಅಂದಿನಿಂದ ಇಲ್ಲಿಯವರೆಗೂ 187 ಜನರು ಮೃತಪಟ್ಟು, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ, ಬೆಂಕಿ ಹಚ್ಚುವುದು ಮತ್ತು ರಾಜ್ಯದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವ ಹಲವಾರು ಘಟನೆಗಳನ್ನು ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನೇಮಕಾತಿ ವೇಳೆ ಮಹಿಳೆಯರ ಎದೆ ಅಳತೆ ಮಾಡುವುದು ಖಾಸಗಿತನದ ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್

ಸರ್ಕಾರಿ ನೌಕರರು, ಉದ್ಯಮಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಕುಕಿ-ಜೋ ಬುಡಕಟ್ಟು ಜನಾಂಗದವರ ಮೇಲೆ ಮೀಟೀ ಸಮುದಾಯವು ಹಿಂಸೆ, ಅತ್ಯಾಚಾರ ಸೇರಿದಂತೆ ಹಲವು ದೌರ್ಜನ್ಯ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯ ಹತ್ತು ಶಾಸಕರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಈ ಹಿಂಸಾಚಾರದಿಂದಾಗಿ, ನಮ್ಮ ಸಮುದಾಯದ ನೌಕರರು ಸೆಕ್ರೆಟರಿಯೇಟ್‌ನಲ್ಲಿ ಕೆಲಸ ಮಾಡಲು ಇಂಫಾಲ್‌ಗೆ ಹೋಗಲು ಭಯಪಡುತ್ತಿದ್ದಾರೆ. ದಕ್ಷ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಐದು ಜಿಲ್ಲೆಗಳಲ್ಲಿ ಪ್ರತ್ಯೇಕ ಆಡಳಿತಾತ್ಮಕ ಹುದ್ದೆಗಳನ್ನು ರಚಿಸಬೇಕೆಂದು ಕುಕಿ ಸಮುದಾಯದ ಶಾಸಕರು ಒತ್ತಾಯಿಸಿದ್ದಾರೆ.

”ನಮ್ಮ ಬುಡಕಟ್ಟುಗಳಿಗೆ ಸೇರಿದ ಐಎಎಸ್ ಮತ್ತು ಎಂಸಿಎಸ್ [ಮಣಿಪುರ ನಾಗರಿಕ ಸೇವೆಗಳು] ಅಧಿಕಾರಿಗಳು ಮತ್ತುಐಪಿಎಸ್ ಮತ್ತು ಎಂಪಿಎಸ್ ಅಧಿಕಾರಿಗಳನ್ನು ಸಹ ಇಲ್ಲಿ ನೇಮಿಸಬೇಕು. ಇಂಫಾಲ್ ಕಣಿವೆಯು ನಮಗೆ ಸಾವಿನ ಕಣಿವೆಯಾಗಿ ಮಾರ್ಪಟ್ಟಿರುವುದರಿಂದ ನಮ್ಮ ಸಮುದಾಯವು ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ” ಎಂದು ಅವರು ತಿಳಿಸಿದ್ದಾರೆ.

”ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ನಮ್ಮ ಬುಡಕಟ್ಟು ಸಮುದಾಯದವರ ವಿರುದ್ಧ ನಿತ್ಯವು ಗುಡ್ಡಗಾಡು ಜಿಲ್ಲೆಗಳ ಹಳ್ಳಿಗಳ ಮೇಲೆ ದಾಳಿ ಮಾಡಿಸುವ ಮೂಲಕ ಹಿಂಸಾಚಾರವನ್ನು ಮುಂದುವರೆಸುತ್ತಿದ್ದಾರೆ. ಈ ಕಾರಣದಿಂದ ಸಿವಿಲ್ ಮತ್ತು ಪೊಲೀಸ್ ಇಲಾಖೆಯಲ್ಲಿ ಇತರ ಪ್ರಮುಖ ಉನ್ನತ ಮಟ್ಟದ ಹುದ್ದೆಗಳಿಗೆ ಕುಕಿ ಸಮುದಾಯದವರನ್ನು ನೇಮಿಸಬೇಕು” ಎಂದು ಕುಕಿ ಶಾಸಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...