ದಿಢೀರ್ ಬೆಳವಣಿಗೆ: ಮಣಿಪುರದ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

Date:

ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಅಧಿಕಾರಕ್ಕೆ ಏರುತ್ತಿರುವ ಬೆನ್ನಲ್ಲೇ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ರಾಜಧಾನಿ ಇಂಫಾಲ್‌ನಲ್ಲಿರುವ ರಾಜಭವನಕ್ಕೆ ಇಂದು(ಫೆ.9) ಸಚಿವ ಸಂಪುಟದೊಂದಿಗೆ ತೆರಳಿದ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ಸಲ್ಲಿಸಿದ್ದಾರೆ.

ಮಣಿಪುರದಲ್ಲಿ ಕಳೆದ ಎರಡು ವರ್ಷಗಳಿಂದ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದ್ದರೂ, ಈವರೆಗೆ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿರಲಿಲ್ಲ. ಈಗ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಮೇ 3ರಂದು ಮಣಿಪುರದಲ್ಲಿ ಆರಂಭಗೊಂಡಿದ್ದ ಹಿಂಸಾಚಾರವನ್ನು ನಿಗ್ರಹಿಸುವಲ್ಲಿ ಮಣಿಪುರದ ಬಿಜೆಪಿ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿತ್ತು.

ಸರಕಾರಿ ಪ್ರಯೋಗಾಲಯದ ವರದಿ ಕೇಳಿದ್ದ ಸುಪ್ರೀಂ ಕೋರ್ಟ್‌

ಮಣಿಪುರ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಫೆ.4ರಂದು ಸೂಚಿಸಿದೆ. ಇದರ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಈಗ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್, “ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶನಾಗಿ ಪದೋನ್ನತಿ ಹೊಂದಿದಾಗ ಮಣಿಪುರ ಮುಖ್ಯಮಂತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದರಿಂದ, ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯಲೆ? ಎಂದು ಅರ್ಜಿದಾರರನ್ನು ಪ್ರಶ್ನಿಸಿದರು. ಅದಕ್ಕೆ ಪ್ರತಿಯಾಗಿ, ನ್ಯಾ. ಸಂಜಯ್ ಕುಮಾರ್ ಅವರು ತಾವಾಗಿ ವಿಚಾರಣೆಯಿಂದ ಹಿಂದೆ ಸರಿಯಬಾರದು” ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರು.

ಕುಕಿ ಆರ್ಗನೈಸೇಷನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಪರ ಹಾಜರಿದ್ದ ವಕೀಲ ಪ್ರಶಾಂತ್ ಭೂಷಣ್, “ಟ್ರೂತ್ ಲ್ಯಾಬ್ಸ್ 2007ರಲ್ಲಿ ಭಾರತದಲ್ಲಿ ಸ್ಥಾಪನೆಯಾಗಿರುವ ಪ್ರಪ್ರಥಮ ಸರ್ಕಾರೇತರ ಸುಸಜ್ಜಿತ ವಿಧಿವಿಜ್ಞಾನ ಪ್ರಯೋಗಾಲಯ ಟ್ರೂತ್ ಲ್ಯಾಬ್ಸ್ ಶೇ. 93ರಷ್ಟು ಧ್ವನಿಮುದ್ರಿಕೆಯು ಎನ್ ಬಿರೇನ್ ಸಿಂಗ್ ಅವರ ಧ್ವನಿಯನ್ನು ಹೋಲುತ್ತದೆ ಎಂದು ದೃಢಪಡಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನು ಓದಿದ್ದೀರಾ? ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಇದಕ್ಕೆ ಪ್ರತಿಯಾಗಿ ಉತ್ತರಿಸಿದ್ದ ನ್ಯಾಯಾಲಯವು , “ಟ್ರೂತ್ ಲ್ಯಾಬ್ಸ್ ವರದಿಯನ್ನು ಅವಲಂಬಿಸಲು ಸಾಧ್ಯವಿಲ್ಲ. ಧ್ವನಿ ಮುದ್ರಿಕೆಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ” ಎಂದು ಸರಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ನ್ಯಾಯಾಲಯವು, ಮುಚ್ಚಿದ ಲಕೋಟೆಯಲ್ಲಿ ಸರಕಾರಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತ್ತು. ಇದರ ನಡುವೆಯೇ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...