ಮಣಿಪುರ | ಬುಡಕಟ್ಟು ನಾಯಕನ ಹತ್ಯೆ, ಕುಕಿ ಸದಸ್ಯರು ಅರೆಸ್ಟ್

Date:

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮಾತುಕತೆಯಲ್ಲಿ ತೊಡಗಿದ್ದ 59 ವರ್ಷದ ಬುಡಕಟ್ಟು ನಾಯಕನನ್ನು ಕೊಲ್ಲಲಾಗಿದೆ. ಮೃತದೇಹವು ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ನದಿಯೊಂದರಲ್ಲಿ ಪತ್ತೆಯಾಗಿದೆ. ಕುಕಿ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದ ಐದು ಜನರು ಬುಡಕಟ್ಟು ನಾಯಕನನ್ನು ಅಪಹರಿಸಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಥಡೌ ಬುಡಕಟ್ಟು ಪ್ರತಿನಿಧಿಗಳು ಮತ್ತು ಮೈತೇಯಿ ನಾಗರಿಕ ಗುಂಪುಗಳ ನಡುವೆ ಇಂಫಾಲ್‌ನಲ್ಲಿ ಆಗಸ್ಟ್ 16ರಂದು ನಡೆದ ಸಭೆಯಲ್ಲಿ ಬುಡಕಟ್ಟು ನಾಯಕ ನೆಹ್ಕಮ್ ಜೊಮ್ಹಾವೊ ಅವರು ಭಾಗವಹಿಸಿದ್ದರು. ಕಳೆದ ವರ್ಷ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಬಾರಿಗೆ ನಡೆದ ಸಭೆ ಇದಾಗಿತ್ತು.

“ಜೊಮ್ಹಾವೊ ಅವರ ಶವವನ್ನು ಗುರುವಾರ ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಐವರು ಆರೋಪಿಗಳನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಕರ್ಬಿ ಅಂಗ್ಲಾಂಗ್) ಸಂಜಿಬ್ ಕುಮಾರ್ ಸೈಕಿಯಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿರಿ: ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳಿಸಿದ ಮಕ್ಕಳ ಕಲ್ಯಾಣ ಸಮಿತಿ; ಮತ್ತೆ ದೌರ್ಜನ್ಯ

ಅಸ್ಸಾಂನ ಥಡೌ ಲಿಟರರಿ ಸೊಸೈಟಿಯ ಅಧ್ಯಕ್ಷ ಜೊಮ್ಹಾವೊ ಅವರು ಮಂಜಾದಲ್ಲಿರುವ ತಮ್ಮ ನಿವಾಸದಿಂದ ಕಳೆದ ಶನಿವಾರ ನಾಪತ್ತೆಯಾಗಿದ್ದರು. ಅವರ ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಂಧಿಸಲಾದ ಐದು ಜನರು ‘ಕುಕಿ ಕ್ರಾಂತಿಕಾರಿ ಸೇನೆ'(ಕೆಆರ್‌ಎ)ಗೆ ಸೇರಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಕಾರ್ಯಾಚರಣೆಗಳ ಅಮಾನತು (ಎಸ್‌ಒಒ) ಒಪ್ಪಂದಕ್ಕೆ ಕೆಆರ್‌ಎ ಸಹಿ ಹಾಕಿತ್ತು.

ಜೊಮ್ಹಾವೊ ಅವರನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೊಲ್ಲಲಾಗಿದೆ. ಬಳಿಕ ಅವರ ಶವವನ್ನು ನದಿಯಲ್ಲಿ ಎಸೆಯಲಾಗಿತ್ತು. ವ್ಯಾಪಕ ಹುಡುಕಾಟದ ನಂತರ ಶವ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ನಮ್ಮ ಕೇಡರ್‌ಗಳೇ ಈ ಹತ್ಯೆಗೆ ಕಾರಣ” ಎಂದು ಕೆಆರ್‌ಎ ಒಪ್ಪಿಕೊಂಡಿದೆ. “ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದೇವೆ ಮತ್ತು ದುಃಖಿತರಾಗಿದ್ದೇವೆ” ಎಂದು ಸಂಘಟನೆ ಪ್ರತಿಕ್ರಿಯಿಸಿದೆ.

ಕೆಆರ್‌ಎ ಪ್ರಧಾನ ಕಾರ್ಯದರ್ಶಿ ಎಲ್‌ಎಸ್ ಗ್ಯಾಂಗ್ಟೆ ಹೇಳಿಕೆ ನೀಡಿದ್ದು, “ಗುಂಪಿನ ನಾಯಕತ್ವದ ಗಮನಕ್ಕೆ ಬಾರದೆ ಅಥವಾ ಅನುಮತಿಯಿಲ್ಲದೆ ಕೊಲೆಯನ್ನು ನಡೆಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೆಡರ್‌ಗಳು ಭಾವನಾತ್ಮಕ ಪ್ರಚೋದನೆಯಿಂದ ತಮ್ಮದೇ ಆದ ರೀತಿ ವರ್ತಿಸಿದ್ದಾರೆ. ಅಂತಹ ಕ್ರಮಗಳನ್ನು ಸಂಘಟನೆಯು ಎಂದಿಗೂ ಅನುಮತಿಸುವುದಿಲ್ಲ. ನಾವು ನೈತಿಕ ಜವಾಬ್ದಾರಿಯನ್ನು ಹೊರುತ್ತೇವೆ. ದುಃಖಿತ ಕುಟುಂಬಕ್ಕೆ ಕ್ಷಮೆಯಾಚಿಸುತ್ತೇವೆ. ಎಲ್ಲಾ ಐವರು ಕಾರ್ಯಕರ್ತರನ್ನು ಗುಂಪಿನಿಂದ ಅಮಾನತುಗೊಳಿಸುತ್ತೇವೆ” ಎಂದು ಗ್ಯಾಂಗ್ಟೆ ಹೇಳಿದ್ದಾರೆ.

ಇದನ್ನೂ ಓದಿರಿ: ಇಂದೋರ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ನವಜಾತ ಶಿಶುಗಳ ಸಾವು: ಇದು ‘ಕೊಲೆ’ ಎಂದ ರಾಹುಲ್ ಗಾಂಧಿ

“ಈ ಘಟನೆಯು ಸಾಂಸ್ಥಿಕ ಶಿಸ್ತು ಮತ್ತು ಹೊಣೆಗಾರಿಕೆಯ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಆದ್ದರಿಂದ, ನ್ಯೂನತೆಗಳನ್ನು ಗುರುತಿಸಿ, ಸರಿಪಡಿಸಲು ಆಂತರಿಕ ಪರಿಶೀಲನೆಯನ್ನು ನಡೆಸಲಾಗುವುದು” ಎಂದಿದ್ದಾರೆ.

ಹತ್ಯೆಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಥಡೌ ಇನ್ಪಿ ಮಣಿಪುರ, ಥಡೌ ವಿದ್ಯಾರ್ಥಿ ಸಂಘ ಮತ್ತು ಥಡೌ ಸಮುದಾಯ ಅಂತಾರಾಷ್ಟ್ರೀಯ ಸೇರಿದಂತೆ ಹಲವು ಬುಡಕಟ್ಟು ಸಂಘಟನೆಗಳು ಹತ್ಯೆಯನ್ನು ಖಂಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...