ಮಣಿಪುರ | ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದ ದುಷ್ಟರ ಗುಂಪು; ದೇಶಾದ್ಯಂತ ಆಕ್ರೋಶ

Date:

ಮಣಿಪುರದಲ್ಲಿ ವಿಕೃತ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಮೆರವಣೆಗೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ‘ದೇಶೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್) ಆರೋಪಿಸಿದೆ.

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪು ದೌರ್ಜನ್ಯ ಎಸಗಿದೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಹೆರಾದಾಸ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ದುರುಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೇಶಾದ್ಯಂತ ಆಗ್ರಹ ವ್ಯಕ್ತವಾಗಿದೆ.

ಕೃತ್ಯವನ್ನು ಖಂಡಿಸಿ, ದುಷ್ಠರನ್ನು ಬಂಧಿಸುವಂತೆ ಆಗ್ರಹಿಸಿ ಐಟಿಎಲ್‌ಎಫ್ ಸಂಘಟನೆ ಗುರುವಾರ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಥೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ. ದುಷ್ಕರ್ಮಿಗಳನ್ನು ಬಂಧಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರಾಗಿದ್ದು, ವಿಕೃತ ಮನಸ್ಸಿನ ಪುರುಷರ ಗುಂಪು ಅವರ ಮೇಲೆ ದೌಜನ್ಯ ಎಸಗಿ, ವಿಡಿಯೋವನ್ನು ಹರಿಬಿಟ್ಟಿದೆ. ವಿಡಿಯೋದಲ್ಲಿ ಮಹಿಳೆಯರು ಅಸಹಾಯತೆಯಿಂದ ಅಂಗಲಾಚುತ್ತಿದ್ದರೂ, ಅವರನ್ನು ಆ ದುರುಳರು ಎಳೆದೊಯ್ಯುತ್ತಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ?: ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಥಳಿತ: ಆಂಧ್ರಪ್ರದೇಶದಲ್ಲಿ ಅಮಾನುಷ ಘಟನೆ

ಪ್ರಕರಣವನ್ನು ಆದ್ಯತೆ ಮೇರೆಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಪೊಲೀಸರಿಗೆ ಆದೇಶಿಸಿದ್ದಾರೆ. ಕೃತ್ಯ ಎಸಗಿದ ಅಪರಾಧಿಗಳ ವಿರುದ್ಧ ತ್ವರಿತವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

“ಈ ಮುಗ್ಧ ಮಹಿಳೆಯರು ಅನುಭವಿಸಿದ ಭಯಾನಕ ಹಿಂಸೆಯನ್ನು ವಿಡಿಯೋ ಮಾಡಿ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಂತ್ರಸ್ತರ ಗುರುತುಗಳನ್ನು ಬಹಿರಂಗ ಪಡಿಸಿದ್ದಾರೆ. ಕೃತ್ಯವು ಇಡೀ ದೇಶವೇ ತಲೆತಗ್ಗಿಸುವ ಕೃತ್ಯವಾಗಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡದ ಆಯೋಗವನ್ನು ಐಟಿಎಲ್‌ಎಫ್ ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...