ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ ಅನಿರ್ದಿಷ್ಟಾವಧಿಗೆ ಮಣಿಪುರದ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇನ್ನು ಪ್ರತಿಭಟನಾಕಾರರು ಇಂಫಾಲ್‌ನಲ್ಲಿ ಶಾಸಕರುಗಳು, ಸಚಿವರುಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಟಯರ್‌ಗಳನ್ನು ಸುಟ್ಟು ರಸ್ತೆ ತಡೆ ನಡೆಸಿದರು. ಕುಕಿ ಬಂಡುಕೋರರು ಆರು ಮಂದಿಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಮಣಿಪುರದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಇತ್ತೀಚೆಗೆ ಬಂಡುಕೋರರು ಸಿಆರ್‌ಪಿಎಫ್ ಶಿಬಿರ ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿತ್ತು. 10 ಕುಕಿ ಬಂಡುಕೋರರ ಹತ್ಯೆಯಾಗಿತ್ತು. ಈ ವೇಳೆ ನಿರಾಶ್ರಿತರ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದರು. ಅವರನ್ನು ಅಪಹರಣ ಮಾಡಲಾಗಿದೆಯೇ ಅಥವಾ ಅವರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತ ಜಾಗಕ್ಕೆ ತಲುಪಿದ್ದಾರೆಯೇ ಎಂಬುದು ಖಚಿತವಾಗಿರಲಿಲ್ಲ.

ಶುಕ್ರವಾರ ಜಿರಿಬಾಮ್ ಜಿಲ್ಲೆಯ ನದಿಯಿಂದ ಮೂರು ಶವಗಳು ಪತ್ತೆಯಾಗಿದ್ದರೆ, ಶನಿವಾರ ಮತ್ತೆ ಮೂರು ಶವಗಳು ಪತ್ತೆಯಾಗಿವೆ. ಆರು ಮಂದಿ ಕೂಡಾ ಮೈತಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಈ ಮೃತದೇಹಗಳು ಅಪಹರಣಕ್ಕೊಳಗಾದವರ ಮೃತದೇಹ ಎಂದು ಹೇಳಲಾಗಿದೆ. ಅಪಹರಣಕ್ಕೆ ಒಳಗಾದ ಜನರನ್ನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಭದ್ರತಾ ಪಡೆಗಳು ವಿಫಲವಾಗಿವೆ ಎಂದು ಆರೋಪಿಸಿ ಮೈತಿ ಸಂಘಟನೆಗಳು ಪ್ರತಿಭಟನೆ ಆರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...