ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ ; ಪೊಲೀಸರ ಮೇಲೆ ಗುಂಡಿನ ದಾಳಿ

Date:

ಮಣಿಪುರ ರಾಜ್ಯದಲ್ಲಿ ಮೂರು ತಿಂಗಳ ಹಿಂದೆ ಜನಾಂಗೀಯ ದ್ವೇಷಕ್ಕೆ ಶುರುವಾದ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹೊಸ ಗುಂಡಿನ ದಾಳಿ ವರದಿಯಾಗಿವೆ.

ಮಣಿಪುರದ ಫೌಗಕ್ಚಾವೊ, ಟೋರ್ಬಂಗ್ ಮತ್ತು ಕ್ವಾಕ್ಟಾದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಪ್ರದೇಶಗಳಲ್ಲಿ ಕೆಲವು ಗುಂಪುಗಳು ಮಣಿಪುರ ಪೊಲೀಸ್ ಕಮಾಂಡೋಗಳ ಮೇಲೆ ಗುಂಡು ಹಾರಿಸುತ್ತಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕೆಲವು ಗುಂಪುಗಳು ಹಳ್ಳಿಗಳಲ್ಲಿ ಕನಿಷ್ಠ 30 ಬಾಂಬ್‌ಗಳು ಹಾಗೂ ಸ್ಫೋಟಕಗಳನ್ನು ಉಡಾಯಿಸಿವೆ.

ಪರಿಸ್ಥಿತಿ ಹೆಚ್ಚಾಗುತ್ತಿದ್ದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಹಿಂಸಾಚಾರದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲ ಗುಂಡಿನ ಘಟನೆಗಳು ಮಣಿಪುರದ ಮೊರೆಹ್ ಜಿಲ್ಲೆಯಲ್ಲಿ ಉಂಟಾದ ಸಣ್ಣ ಗಲಭೆ ನಡೆದ ಒಂದು ದಿನದ ನಂತರ ಶುರುವಾಗಿದೆ. ಬುಧವಾರ(ಜುಲೈ 27) ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮೊರೆಹ್ ಮಾರುಕಟ್ಟೆ ಪ್ರದೇಶದಲ್ಲಿ ಜನಸಮೂಹವು ಕನಿಷ್ಠ 30 ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೈಬಿಡಲಾಗಿದೆ: ರಾಜಸ್ಥಾನ ಸಿಎಂ ಆರೋಪ

ಈ ಬೆಂಕಿಯ ಕೃತ್ಯದ ನಂತರ ದಾಳಿಕೋರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ಪರಿಸ್ಥಿತಿ ಉಲ್ಬಣಗೊಂಡ ನಂತರ ಜನಸಮೂಹವನ್ನು ಚದುರಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಹೆಚ್ಚಿನ ಭದ್ರತಾ ಪಡೆಗಳು ಆಗಮಿಸಿವೆ.

ಈ ವಾರದ ಆರಂಭದಲ್ಲಿ ಮತ್ತೊಂದು ತೊಂದರೆಗೀಡಾದ ಘಟನೆಯಲ್ಲಿ, ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್‌ಗಳನ್ನು ಜನಸಮೂಹವು ಸುಟ್ಟು ಹಾಕಿತು. ಮಣಿಪುರ ನೋಂದಣಿ ಸಂಖ್ಯೆಗಳನ್ನು ಪ್ರದರ್ಶಿಸುವ ಬಸ್ಸುಗಳು ದಿಮಾಪುರದಿಂದ ವಾಪಸಾಗುತ್ತಿದ್ದ ಸಪೋರ್ಮಿನಾದಲ್ಲಿ ದಾಳಿ ಸಂಭವಿಸಿದೆ.

ಸ್ಥಳೀಯ ಒಂದು ಸಮುದಾಯದ ನಿವಾಸಿಗಳು ಬಸ್ಸನ್ನು ತಡೆದು ಬೇರೆ ಸಮುದಾಯದವರು ಬಸ್ಸಿನಲ್ಲಿದ್ದಾರೆಯೆ ಎಂದು ಪರಿಶೀಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಪರಿಣಾಮವಾಗಿ, ಅಪ್ರಾಪ್ತ ವಯಸ್ಕ ಸೇರಿದಂತೆ ಒಂಬತ್ತು ಮಂದಿಯನ್ನು ಪೊಲೀಸರು ನಂತರ ಬಂಧಿಸಿದ್ದಾರೆ.

ಮಣಿಪುರ ರಾಜ್ಯವು ಸುಮಾರು ಮೂರು ತಿಂಗಳಿಂದ ಜನಾಂಗೀಯ ಹಿಂಸಾಚಾರದೊಂದಿಗೆ ನಲುಗುತ್ತಿದೆ. ಇದರ ಪರಿಣಾಮವಾಗಿ 160 ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...