​ಹಿಮಾಚಲ ಪ್ರದೇಶ: ಇಡೀ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು

Date:

ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆಯುತ್ತಿರುವ ಬೋರ್ಡ್ ಪರೀಕ್ಷೆಗಳ ವೇಳೆ ಸಾಮೂಹಿಕ ನಕಲು ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಶಾಲಾ ಶಿಕ್ಷಣ ಮಂಡಳಿಯು ಪರೀಕ್ಷಾ ಕೇಂದ್ರದ ಅಧೀಕ್ಷಕರನ್ನು ಅಮಾನತುಗೊಳಿಸಿದ್ದು, ಇಡೀ ಪರೀಕ್ಷಾ ಕೇಂದ್ರವನ್ನೇ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳಾಂತರಿಸಲು ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

​ಕಾಂಗ್ರಾ ಜಿಲ್ಲೆಯ ಜವಾಲಿಯಲ್ಲಿರುವ ‘ಪಿಎಂ ಶ್ರೀ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ’ಯಲ್ಲಿ ಈ ಘಟನೆ ನಡೆದಿದೆ. ಪರೀಕ್ಷಾ ಕೊಠಡಿಯೊಳಗೆ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಹೇಳಿಕೊಡುತ್ತಿರುವ ವಿಡಿಯೋ ಸಾಕ್ಷ್ಯ ಲಭ್ಯವಾದ ಬೆನ್ನಲ್ಲೇ ಮಂಡಳಿಯು ಈ ಕಠಿಣ ಕ್ರಮ ಕೈಗೊಂಡಿದೆ.

ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಶಾಲಾ ಶಿಕ್ಷಣ ಮಂಡಳಿಯ ಅಧ್ಯಕ್ಷ ರಾಜೇಶ್ ಶರ್ಮಾ, “ಜವಾಲಿ ಕೇಂದ್ರದಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ನಡೆಯುತ್ತಿವೆ ಎಂಬ ಅನೇಕ ದೂರುಗಳು ಮತ್ತು ವಿಡಿಯೋ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರವನ್ನು ಮಟ್ಲಾಹರ್‌ನ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಶಿಕ್ಷಣ ನಿರ್ದೇಶಕರು, ಜೀವಶಾಸ್ತ್ರ ಉಪನ್ಯಾಸಕರೂ ಆಗಿರುವ ಕೇಂದ್ರದ ಅಧೀಕ್ಷಕ ರವಿ ಭಂಡಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. “ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಪ್ರಾಮಾಣಿಕತೆ ಕಾಯ್ದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಮತ್ತು ಸರ್ಕಾರಿ ನೌಕರನಿಗೆ ತಕ್ಕುದಲ್ಲದ ರೀತಿಯಲ್ಲಿ ನಡೆದುಕೊಂಡಿದ್ದಾರೆ” ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

​ಪ್ರಾಥಮಿಕ ತನಿಖೆಯ ಪ್ರಕಾರ, ಪರೀಕ್ಷಾ ಕೊಠಡಿಯಲ್ಲಿದ್ದ ಶಿಕ್ಷಕರೊಬ್ಬರು ಬಹು ಆಯ್ಕೆಯ ಪ್ರಶ್ನೆಗಳಿಗೆ (ಎಂಸಿಕ್ಯೂ) ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಹೇಳಿಕೊಡುತ್ತಿರುವುದು ಪತ್ತೆಯಾಗಿದೆ. ಇದೊಂದು ಸ್ಪಷ್ಟವಾದ ಸಾಮೂಹಿಕ ನಕಲು ಪ್ರಕರಣವಾಗಿದ್ದು, ಇದು ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತದೆ ಎಂದು ಮಂಡಳಿ ಕಳವಳ ವ್ಯಕ್ತಪಡಿಸಿದೆ.

ಈ ಕುರಿತು ವಿಸ್ತೃತ ತನಿಖೆ ನಡೆಸಿ ಮಂಡಳಿಯ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಜವಾಲಿಯ ಉಪ-ವಿಭಾಗಾಧಿಕಾರಿ (ಎಸ್‌ಡಿಎಂ) ಕಚೇರಿಗೆ ಮಂಡಳಿ ನಿರ್ದೇಶನ ನೀಡಿದೆ. ಇಂತಹ ಘಟನೆಗಳು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಹಿತಾಸಕ್ತಿಗೆ ಧಕ್ಕೆ ತರುತ್ತವೆ ಎಂದು ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

​ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಕಾಪಾಡುವ ದೃಷ್ಟಿಯಿಂದ ಜವಾಲಿ ಪರೀಕ್ಷಾ ಕೇಂದ್ರವನ್ನು ರದ್ದುಗೊಳಿಸಲಾಗಿದೆ. ಅಲ್ಲಿನ ಎಲ್ಲಾ ವಿದ್ಯಾರ್ಥಿಗಳು ಇನ್ನುಳಿದ ಪರೀಕ್ಷೆಗಳನ್ನು ಮಟ್ಲಾಹರ್ ಶಾಲೆಯಲ್ಲಿ ಬರೆಯಲಿದ್ದಾರೆ.
ಕೇಂದ್ರದ ಸಂಯೋಜಕರು, ಅಧೀಕ್ಷಕರು ಮತ್ತು ಉಪ-ಅಧೀಕ್ಷಕರ ವಿರುದ್ಧ ಇಲಾಖಾ ತನಿಖೆ ಆರಂಭಿಸಲಾಗಿದೆ. ಈ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿ ಶಿಮ್ಲಾದಲ್ಲಿರುವ ಹಿಮಾಚಲ ಪ್ರದೇಶ ಶಿಕ್ಷಣ ಇಲಾಖೆಗೂ ಮಂಡಳಿ ಪತ್ರ ಬರೆದಿದೆ.

ಅಕ್ರಮಗಳ ವಿರುದ್ಧ ಮಂಡಳಿಯು ಕಠಿಣ ನೀತಿಯನ್ನು ಹೊಂದಿದ್ದು, ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಕಾಪಾಡಲು ಬದ್ಧವಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಕ್ರಮಕ್ಕೆ ಸಹಕರಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧ್ಯಕ್ಷ ಶರ್ಮಾ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...